Homeಫ್ಯಾಕ್ಟ್‌ಚೆಕ್ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ  ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಕೃಷಿ ಕಾನೂನುಗಳಿಗೆ ವಿರುದ್ದವಾಗಿ ರೈತರು ಸೆಪ್ಟೆಂಬರ್ 05, 2021 ರಂದು ಮುಜಾಫರ್ ನಗರದಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸಿದ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪ್ರತಿಪಾದನೆ: ‘ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ  ರೈತರು ಎಲ್ಲೆಂದರಲ್ಲಿ ಮದ್ಯವನ್ನು ಸೇವಿಸುತ್ತಿರುವ ದೃಶ್ಯಗಳು

ಫ್ಯಾಕ್ಟ್‌ಚೆಕ್

ಪೋಸ್ಟ್‌ನಲ್ಲಿ ಷೇರ್ ಮಾಡಿದ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡುವು ಟ್ರಾಕ್ಟರ್ ಟು ಟ್ವಿಟರ್ ಖಾತೆಯ ಟ್ವೀಟ್ ಒಂದು ಕಂಡುಬಂದಿದೆ. ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಮದ್ಯಕ್ಕಾಗಿ ಪರಾದಾಡುತ್ತಿರುವ ದೃಶ್ಯಗಳೆಂದು ತಪ್ಪಾಗಿ  ಹಂಚಿಕೊಳ್ಳುತ್ತಿರುವುದಾಗಿ ಆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಎರಡು ಬೇರೆ ಬೇರೆ ವಿಡಿಯೋ ಕ್ಲಿಪ್‌ಗಳು ಇರುವುದನ್ನು ನಾವು ಗಮನಿಸಬಹುದು.  ಮೇಲಿನ ವಿವರಗಳ ಆಧಾರವಾಗಿ ಈ ವಿಡಿಯೋ ಕ್ಲಿಪ್‌ಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೊಂದಾಗಿ ತಿಳಿದಿಕೊಳ್ಳೋಣ.

ವಿಡಿಯೋ ಕ್ಲಿಪ್ -1

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ಗುಗೂಲ್‌ನಲ್ಲಿ ಹುಡುಕಿದಾಗ. ಇವೇ ದೃಶ್ಯಗಳು ಇರುವ ವಿಡಿಯೋವನ್ನು ಬಳಕೆದಾರನೊಬ್ಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ‘‘ಬಾಬಾ ರೋಡ್ ಷಾ ಜಿ’ ಮೇಳದಲ್ಲಿ ಎಲ್ಲೆಂದರಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ದೃಶ್ಯಗಳೆಂದು” ವಿಡಿಯೋ ವಿವರಣೆಯಲ್ಲಿ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ಕೌಂಕೆ ಕಲಾನ್ ಎನ್ನುವ ಗ್ರಾಮದಲ್ಲಿ ಪ್ರತಿ ವರ್ಷ ಈ ‘ಬಾಬಾ ರೋಡ್ ಷಾ ಜಿ’ ಮೇಳಾ ನಡೆಸುತ್ತಾರೆ. 06 ಸೆಪ್ಟೆಂಬರ್ 2021 ರಂದು ನಡೆದ ‘ ಬಾಬಾ ರೋಡ್ ಷಾ ಜಿ’ ಮೇಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ತಿ ವಿಡಿಯೋವನ್ನು ‘PunjabLive1.com’ ನ್ಯೂಸ್ ಚಾನೆಲ್ ಪ್ರಕಟಿಸಿದೆ. ಪೋಸ್ಟ್ ನಲ್ಲಿ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿನ ಒಬ್ಬ ವ್ಯಕ್ತಿ, ಈ ವಿಡಿಯೋದಲ್ಲಿಯೂ ಸಹ ಕಾಣಿಸುತ್ತಿರುವುದನ್ನು ನಾವು ಗಮನಿಸಬಹುದು. ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿ ಹಂಚಿಕೊಂಡಿರುವ ಮತ್ತೊಂದು ವಿಡಿಯೋದಲ್ಲಿಯೂ ಸಹ ಈ ವ್ಯಕ್ತಿ ಕಾಣಿಸುತ್ತಿರುವುದರ ಆದಾರದ ಮೇಲೆ ಈ ವಿಡಿಯೋ ‘ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವುದೆಂದು ಖಚಿತವಾಗಿ ಹೇಳಬಹುದು.

ವಿಡಿಯೋ ಕ್ಲಿಪ್ -2

ಈ ವಿಡಿಯೋ ಕ್ಲಿಪ್‌ನಲ್ಲಿನ ದೃಶ್ಯಗಳನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವಾಗಿ ಹಂಚಿಕೊಂಡಿರುವುದಾಗಿ ತಿಳಿಯಿತು. ಆ ವಿಡಿಯೋಗಳನ್ನು ಇಲ್ಲಿ, ಇಲ್ಲಿ ನೋಡಬಹುದು. ಇವೇ ದೃಶ್ಯಗಳೊಂದಿಗೆ ಹೋಲಿಕೆ ಇರುವ ವಿಡಿಯೋವನ್ನು ‘Daily News Punjab’ ವಾಹಿನಿ 07 ಸೆಬ್ಟಂಬರ್ 2021ರಂದು ಪ್ರಕಟಿಸಿದೆ. ಈ ವಿಡಿಯೋದಲ್ಲಿನ ದೃಶ್ಯಗಳು ‘ ಬಾಬಾ ರೋಡ್ ಷಾ ಜಿ’ ಮೇಳಕ್ಕೆ ಸಂಬಂಧಿಸಿರುವವೆಂದು ವಿಡಿಯೋ ವಿವರಣೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದ ಹೆಸರಿನಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂದೀಪ್ ಸಿಂಗ್ ಎನ್ನುವ ಸ್ವತಂತ್ರ ಪತ್ರಕರ್ತ, ಕೌಂಕೆ ಕಲಾನ್ ಗ್ರಾಮಸ್ಥರನ್ನು ವಿಡಿಯೋದ ಸ್ಪಷ್ಟತೆಗಾಗಿ ಸಂದರ್ಶಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ 06 ಸೆಪ್ಟೆಂಬರ್ 2021 ರಂದು ನಡೆದ ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಕೌಂಕೆ ಕಲಾನ್ ಗ್ರಾಮಸ್ಥರು ಸಂದೀಪ್ ಸಿಂಗ್ ಅವರಿಗೆ ಹೇಳಿದ್ದಾರೆ. ಈ ತನಿಖಾ ವೀಡಿಯೋದಲ್ಲಿ ಕಾಣುವ ಕಟ್ಟಡಗಳು ಮತ್ತು ಬಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕಾಣುವ ದೃಶ್ಯಗಳನ್ನು ಹೋಲುತ್ತವೆ. ಇದರ ಜೊತೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋ, ‘ಬಾಬಾ ರೋಡ್ ಶಾ ಜಿ’ ಮೇಳಕ್ಕೆ ಸಂಬಂಧಿಸಿದೆ ಎಂದು ಜನ ಶಕ್ತಿ ನ್ಯೂಸ್ ಪಂಜಾಬ್ ಸುದ್ದಿ ವಾಹಿನಿ ಸ್ಪಷ್ಟಪಡಿಸಿದೆ. ಈ ವಿವರಗಳ ಆಧಾರದ ಮೇಲೆ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಸಂಬಂಧಿಸಿಲ್ಲ ಎಂದು ಖಚಿತವಾಗಿ ಹೇಳಬಹುದು.

ಒಟ್ಟಿನಲ್ಲಿ, ‘ಬಾಬಾ ರೋಡ್ ಷಾ’ ಮೇಳಕ್ಕೆ ಸಂಬಂಧಿಸಿದ ವಿಡಿಯೋವನ್ನು ಕಿಸಾನ್ ಮಹಾಪಂಚಾಯತ್‌ನಲ್ಲಿ ರೈತರು ಮದ್ಯಕ್ಕಾಗಿ ಕಿತ್ತಾಡುತ್ತಿರುವ ದೃಶ್ಯವೆಂದು ಹಂಚಿಕೊಳ್ಳಲಾಗುತ್ತಿದೆ.


ಇದನ್ನು ಓದಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...