Homeಕರ್ನಾಟಕಹುತಾತ್ಮ ಭಗತ್ ಸಿಂಗ್ ಜನ್ಮದಿನ: ಕ್ರಾಂತಿಕಾರಿ ಸೇನಾನಿಗೆ ಗೌರವ ಸಲ್ಲಿಸಿದ ನಾಯಕರು

ಹುತಾತ್ಮ ಭಗತ್ ಸಿಂಗ್ ಜನ್ಮದಿನ: ಕ್ರಾಂತಿಕಾರಿ ಸೇನಾನಿಗೆ ಗೌರವ ಸಲ್ಲಿಸಿದ ನಾಯಕರು

- Advertisement -
- Advertisement -

ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ‘114ನೇ ಜನ್ಮ ಜಯಂತಿ’ಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಗಣ್ಯರು ಕ್ರಾಂತಿಕಾರಿ ಸೇನಾನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಚನ್ನಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ “ವೀರ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸುತ್ತಾರೆ. ಅವರ ಧೈರ್ಯ, ತ್ಯಾಗ ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು. ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

“ದೇಶಕ್ಕಾಗಿ ಪ್ರಾಣವನ್ನೆ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಸೇನಾನಿ ಭಗತ್‌ಸಿಂಗ್ ಹುಟ್ಟುಹಬ್ಬದಂದು ಅವರನ್ನು ಗೌರವದಿಂದ ನೆನೆಯುವೆ. ಅವರ ಜೀವನಾದರ್ಶಗಳು ನಮಗೆಲ್ಲ ಪ್ರೇರಣೆಯಾಗಲಿ ಎಂದು ಹಾರೈಸುವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

’ಶಹೀದ್ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿದ್ದಾರೆ. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅವರಿಗೆ ಸೇರಿದೆ. ಇಂದು, ಶಹೀದ್-ಎ-ಅಜಮ್ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆಯಂದು, ಭಗತ್ ಸಿಂಗ್ ಅವರ ಚಿಂತನೆ, ವಿಚಾರಗಳನ್ನು ಅನುಸರಿಸುವ ಮೂಲಕ ಅವರ ಅಸ್ತಿತ್ವವನ್ನು ಜೀವಂತವಾಗಿರಿಸುವುದು  ನಮ್ಮ ಕರ್ತವ್ಯ ಎಂದು ನಾನು ಹೇಳಲು ಬಯಸುತ್ತೇನೆ” ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಚನ್ನಿ ಹೇಳಿದ್ದಾರೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

“ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಹೋರಾಟಗಾರರು, ಭಾರತಾಂಬೆಯ ಹೆಮ್ಮೆಯ ಪುತ್ರರೂ ಆದ ಭಗತ್ ಸಿಂಗ್ ಅವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ನನ್ನ ಪ್ರಣಾಮಗಳು. ಅವರ ಕೆಚ್ಚು, ಅಪ್ರತಿಮ ದೇಶಭಕ್ತಿ ನಮಗೆಲ್ಲರಿಗೂ ಪ್ರೇರಣೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಶಹೀದ್ ಭಗತ್ ಸಿಂಗ್ ಅವರ ಸ್ವಾತಂತ್ರ್ಯದ ಕಲ್ಪನೆಯು ವಸಾಹತುಶಾಹಿ ಗುಲಾಮಗಿರಿಯಿಂದ ಸ್ವಾತಂತ್ರ್ಯ ಪಡೆಯುವುದು ಮಾತ್ರವಲ್ಲದೆ ಜಾತಿವಾದ, ಕೋಮುವಾದ ಮತ್ತು ಬಂಡವಾಳಶಾಹಿ ಶೋಷಣೆ ಸೇರಿದಂತೆ ಎಲ್ಲಾ ವ್ಯವಸ್ಥಿತ ಅನ್ಯಾಯಗಳಿಂದ ಜನರನ್ನು ವಿಮೋಚನೆ ಮಾಡುವುದಾಗಿತ್ತು. ಇಂದು, ಅವರ ಆಲೋಚನೆಗಳು ವ್ಯರ್ಥವಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...