Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...