Homeಮುಖಪುಟಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಆಗ ಬ್ರಿಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಅವರದು...

- Advertisement -
- Advertisement -

‘ಕಾಂಗ್ರೆಸ್ ಗುಲಾಮಗಿರಿ ಪಕ್ಷ’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾತಿಗೆ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತಪಡಿಸಿದ್ದು, “ಬಿಜೆಪಿ ಆಗ ಬ್ರೀಟಿಷರ, ಈಗ ಕಾರ್ಪೊರೇಟ್‌ಗಳ ಗುಲಾಮಿ ಪಕ್ಷ” ಎಂದು ಕಿಡಿಕಾರಿದ್ದಾರೆ.

ಸೆಪ್ಟಂಬರ್ 27 ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ “ಬಿಜೆಪಿ ತಾಲಿಬಾನ್ ಇದ್ದ ಹಾಗೆ” ಎಂಬ ಮಾತಿಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, “ಕಾಂಗ್ರೆಸ್ ಗುಲಾಮಗಿರಿ ಪಕ್ಷ, ನಮ್ಮ ಬಿಜೆಪಿ ದೇಶಭಕ್ತ ಪಕ್ಷ” ಎಂದು ಹೇಳಿದ್ದರು. ಈ ಕುರಿತು ಚರ್ಚೆಗೆ ಬನ್ನಿ ಎಂದು ಪ್ರಕಾಶ್ ರಾಥೋಡ್ ಆಹ್ವಾನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ, ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟ ಇತಿಹಾಸ ಇರುವ ಬಿಜೆಪಿ ಪರಿವಾರ ಬಳಿಕ ನಾಜಿಗಳ ಗುಲಾಮಗಿರಿ ಮಾಡಿ ಈಗ ವರ್ತಮಾನದಲ್ಲೂ ಅಂಬಾನಿ ಅದಾನಿ ಕಾರ್ಪೋರೇಟ್ ಶಾಹಿಯ ಗುಲಾಮಗಿರಿ ಮಾಡುತ್ತಿದೆ” ಎಂದಿದ್ದಾರೆ.

ಆತ್ಮವಂಚನೆಗೂ ಒಂದು ಮಿತಿ ಇರಬೇಕು ಮುಖ್ಯಮಂತ್ರಿಗಳೇ… ಸಂಘ ಪರಿವಾರ ವಿರೋಧಿ ಜನತಾ ಪರಿವಾರದ ಮೂಲಕ ರಾಜಕಾರಣಕ್ಕೆ ಬಂದ ನೀವು ದೇಶಭಕ್ತಿಯ ಚರಿತ್ರೆ, ಇತಿಹಾಸವೇ ಇಲ್ಲದ ಬಿಜೆಪಿಯನ್ನು ದೇಶಭಕ್ತಿಯ ಪಕ್ಷ ಎಂದು ಕರೆಯುತ್ತಿರುವುದು ಆತ್ಮವಂಚನೆ ಅಲ್ಲವೇ ? ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಕ್ವಿಟ್ ಚಳವಳಿಯಲ್ಲಿ ಭಾವಹಿಸಿದ ಸ್ವಾತಂತ್ರ್ಯ ವೀರರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ಬಿಜೆಪಿ ನಾಯಕರ ಚರಿತ್ರೆಯನ್ನು ನೀವು ಮುಖ್ಯಮಂತ್ರಿ ಆದ ಎರಡು ತಿಂಗಳಲ್ಲೇ ಮರೆತುಬಿಟ್ಟಿರಾ ಎಂದು ರಾಥೋಡ್ ಪ್ರಶ್ನಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಥೋಡ್‌ರವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. “ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಹುಟ್ಟಿಕೊಂಡ, ಸ್ವಾತಂತ್ರ್ಯ ಚಳವಳಿ ಮೂಲಕವೇ ದೇಶದ ಜನಮಾನಸದಲ್ಲಿ ಬೇರು ಬಿಟ್ಟ ಕಾಂಗ್ರೆಸ್ಸನ್ನು ಗುಲಾಮಗಿರಿ ಪಕ್ಷ ಎಂದು ಕರೆದಿದ್ದೀರಿ. ಬ್ರಿಟಿಷರ ವಿರುದ್ಧ ಹೋರಾಡಿ, ಹುತಾತ್ಮರಾಗಿ, ಜೈಲು ಸೇರಿ, ತಮ್ಮ ಆಸ್ತಿ ಪಾಸ್ತಿಯನ್ನೆಲ್ಲಾ ದೇಶಕ್ಕೆ ಬಿಟ್ಟುಕೊಟ್ಟ ಲಕ್ಷಾಂತರ ಮಂದಿ ಕಾಂಗ್ರೆಸ್ಸಿನವರು. ಈ ಚರಿತ್ರೆ ಬಿಜೆಪಿಗೆ ಇದೆಯೇ? ಬ್ರಿಟಿಷರ ಗುಲಾಮಗಿರಿ ಮಾಡಿಕೊಂಡಿದ್ದ ಬಿಜೆಪಿಯ ಚರಿತ್ರೆ ನಿಮಗೆ ಮುಖ್ಯಮಂತ್ರಿ ಕುರ್ಚಿ ಸಿಕ್ಕ ತಕ್ಷಣ ಅಳಿಸಿ ಹೋಗುತ್ತದೆಯೇ” ಎಂದಿದ್ದಾರೆ.

ಗೋಡ್ಸೆಯಿಂದ ಕೊಲೆಯಾದ ಮಹಾತ್ಮಗಾಂಧಿ, ಅಖಂಡ ಭಾರತಕ್ಕಾಗಿ ಖಲಿಸ್ತಾನ ಉಗ್ರರನ್ನು ಸದೆ ಬಡಿದು ಅವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಇಂದಿರಾಗಾಂಧಿ, LTTEಗೆ ಹುತಾತ್ಮರಾದ ರಾಜೀವ್ ಗಾಂಧಿ ಯಾರಿಗಾಗಿ ಹುತಾತ್ಮರಾದರು? ಅಂಬಾನಿ- ಅದಾನಿಯ ಗುಲಾಮಗಿರಿ ಮಾಡಿಕೊಂಡಿರುವ ನಿಮ್ಮ ಪರಿವಾರದ ನಾಯಕರಿಗೆ ಕೇಳಿ ಹೇಳಿ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪರಿವಾರದ ಒಂದು ನಾಯಿ ಕೂಡ ದೇಶಕ್ಕಾಗಿ ಹುತಾತ್ಮರಾದ ಚರಿತ್ರೆ ಇಲ್ಲ. ಈ ಪಾಪಪ್ರಜ್ಞೆಯಿಂದ ಹೊರಗೆ ಬರಲಾರದ ಆತ್ಮವಂಚನೆ ಮತ್ತು ದೇಶದ್ರೋಹವನ್ನೇ ಆಚರಿಸುತ್ತಿರುವ ಬಿಜೆಪಿ ಪರಿವಾರ ಸ್ವಾತಂತ್ರ್ಯ ಬಂದ ನಂತರವಾದರೂ ದೇಶಭಕ್ತಿ ರೂಢಿಸಿಕೊಂಡ, ದೇಶಭಕ್ತಿ ಆಚರಿಸಿದ ಉದಾಹರಣೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿದ್ದರೂ ನಿಮ್ಮ ಸಂಘ ಪರಿವಾರದ ಕಚೇರಿ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದೂ ದೇಶದ ತ್ರಿವರ್ಣ ಬಾವುಟ ಹಾರಿಸುವುದಿಲ್ಲ. ಇದಕ್ಕಿಂತ ದೇಶದ್ರೋಹ ಬೇರೆ ಇದೆಯೇ ? ನೀವೇಕೆ ಭಾರತದ ಧ್ವಜ ಹಾರಿಸದೆ ಏಕಿನ್ನೂ ಬ್ರಿಟಿಷರ ಗುಲಾಮಗಿರಿ ಮನಸ್ಥಿಯಿಂದ ಹೊರಗೆ ಬಂದಿಲ್ಲ ಎಂದು ನಿಮ್ಮ ಪರಿವಾರದ ನಾಯಕರನ್ನು ಪ್ರಶ್ನಿಸಿದ್ದೀರಾ? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕಾಲದಲ್ಲಿ ಕಟ್ಟಿದ ವಿಮಾನ-ರೈಲು ನಿಲ್ದಾಣಗಳು, ಬಂದರುಗಳು, ಟೆಲಿಕಾಂ, ಹೆದ್ದಾರಿಗಳು, ಕೃಷಿ ಮಾರುಕಟ್ಟೆಗಳನ್ನು ಖಾಸಗಿ ಕಾರ್ಪೋರೇಟ್ ಗಳಿಗೆ ಮಾರಾಟ ಮಾಡುವುದೇ ದೇಶಭಕ್ತಿ ಎಂದು ನಿಮಗೆ ಹೇಳಿಕೊಟ್ಟಿದ್ದು ನಿಮ್ಮ ಪರಿವಾರದ ನಾಯಕರೇ? ಅಂಬಾನಿ, ಅದಾನಿ ಹಾಗೂ ನಿಮ್ಮ ನಾಲ್ಕೈದು ಮಂದಿ ಕಾರ್ಪೋರೇಟ್ ಸ್ನೇಹಿತರ 10 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದು ದೇಶಭಕ್ತಿಯೇ? ಮೋದಿ ಅವರು ಪ್ರಧಾನಿ ಆಗುವ ಮೊದಲು ಭಾರತದ ಸಾಲ ಇದ್ದದ್ದು 53.11 ಲಕ್ಷ ಕೋಟಿ. ಮೋದಿ ದರ್ಬಾರಿನ 7 ವರ್ಷಗಳಲ್ಲಿ ದೇಶದ ಸಾಲ 135 ಲಕ್ಷ ಕೋಟಿಗೆ ಏರಿಸಿದ್ದೀರಿ. ದೇಶದ ಪ್ರತಿಯೊಬ್ಬ ಪ್ರಜೆ ತಾನು ದುಡಿದ 100 ರೂಪಾಯಿಯಲ್ಲಿ 35-45 ರೂಪಾಯಿಯನ್ನು ಪ್ರತ್ಯಕ್ಷ- ಪರೋಕ್ಷ ತೆರಿಗೆ ಕಟ್ಟುತ್ತಿದ್ದಾನೆ. ಪ್ರತಿಯೊಬ್ಬ ಭಾರತೀಯನನ್ನು ಇಂಚಿಂಚಾಗಿ ಸುಲಿಯುತ್ತಾ ರಕ್ತ ಹೀರುತ್ತಿರುವುದು ದೇಶಭಕ್ತಿಯೇ ಎಂದು ಪ್ರಶ್ನಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟು/ಬ್ರಿಟಿಷರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರ ಗುಲಾಮರಾದಿರಿ. ನಿಮ್ಮ ಪರಿವಾರದ ಸಿದ್ದಾಂತ ಜರ್ಮನಿಯ ನಾಜಿಗಳದ್ದು. ಸೈದ್ಧಾಂತಿಕವಾಗಿಯೂ ನೀವು ನಾಜಿ ಗುಲಾಮರು. ಸ್ವಾತಂತ್ರ್ಯಾ ನಂತರದಲ್ಲಿ ಅಂಬಾನಿ ಮತ್ತು ಅದಾನಿ ಗ್ಯಾಂಗಿನ ಗುಲಾಮಗಿರಿ ಮಾಡುತ್ತಿರುವವರು ನೀವು ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...