Homeಕರ್ನಾಟಕಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ಮಹಿಳಾ ಆಯೋಗದ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, “ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ” ಎಂದು ಕುಶಲಾ ಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಈ ವೇಳೆ ಮಾತನಾಡಿದ ಎಎಪಿಯ ಉಷಾ ಮೋಹನ್‌, “ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ” ಎಂದು ಆಗ್ರಹಿಸಿದ್ದಾರೆ.

“ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ರಾಜ್ಯದ ಆಯೋಗಕ್ಕೂ ಅಂತಹ ದಿಟ್ಟ ಅಧ್ಯಕ್ಷರ ಅಗತ್ಯವಿದೆ” ಎಂದಿದ್ದಾರೆ.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, “ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್‌ ಎಂದು ಜಾರಕಿಹೊಳಿಯವರೇ ಹೇಳಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ” ಎಂದು ಕಿಡಿಕಾರಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಬಳಕೆಯಾಗುತ್ತಿದ್ದ 71 ಸಾಂತ್ವನ ಕೇಂದ್ರಗಳನ್ನು ಏಪ್ರಿಲ್‌ನಲ್ಲಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿದ್ದ 194 ಸಾಂತ್ವನ ಕೇಂದ್ರಗಳ ಪೈಕಿ 123 ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆ ಜಾಸ್ತಿಯಿರುವ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಹೆಚ್ಚು ದಾಖಲಾಗುವ ಬೆಂಗಳೂರಿನಲ್ಲೇ ಎಲ್ಲಾ ಸಾಂತ್ವನ ಕೇಂದ್ರಗಳು ಸ್ಥಗಿತಗೊಂಡಿವೆ” ಎಂದು ಎಎಪಿಯ ವೀಣಾ ಸೆರ್ರಾವ್‌ರವರು ಹೇಳಿದ್ದಾರೆ.

ಮಹಿಳಾ ನಾಯಕಿ ಪುಷ್ಪಾ ಕೇಶವ್‌ ಮಾತನಾಡಿ, “ಪೊಲೀಸರಿಗೆ ದೂರು ನೀಡಲು ಬರುವ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪೊಲೀಸರು ಎಫ್‌ಐಆರ್‌ ಹಾಕಲು ಮೀನಾಮೇಷ ಎಣಿಸುತ್ತಾರೆ. ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲೂ ರಾಜಿ ಮಾಡಿಸಲು ಪೊಲೀಸರು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಒಂದುವೇಳೆ ಎಫ್‌ಐಆರ್‌ ದಾಖಲಿಸಿಕೊಂಡರೂ, ಆರೋಪಿ ವಿರುದ್ಧ ಸಾಕ್ಷಿ ಸಂಗ್ರಹಕ್ಕೆ ಉದಾಸೀನ ತೋರುತ್ತಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...