’ಒಕ್ಕೂಟ ಸರ್ಕಾರ ಎಲ್ಲವನ್ನೂ ಮಾರುತ್ತಿದೆ. ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳು . ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ’ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಅಧ್ಯಕ್ಷ ರಾಕೇಶ್ ಟಿಕಾಯತ್, ಮಾಧ್ಯಮ ಸಂಸ್ಥೆಗಳು ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದ್ದಾರೆ.
“ಎಲ್ಲರೂ ನಮ್ಮೊಂದಿಗೆ ಸೇರಿಕೊಳ್ಳಬೇಕು. ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳಾಗಿರುತ್ತದೆ, ನೀವು ಉಳಿಸಲು ಬಯಸಿದರೆ ನಮ್ಮೊಂದಿಗೆ ಸೇರಿಕೊಳ್ಳಿ. ಇಲ್ಲದಿದ್ದರೇ ನೀವು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತಿರಿ” ಎಂದು ರಾಯ್ಪುರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?
#WATCH | … Everyone should join us. The next target will be media houses, if you want to be saved then join us, else you'll also suffer: Bharatiya Kisan Union leader Rakesh Tikait after arriving in Raipur, Chhattisgarh pic.twitter.com/nnCJgS11Z5
— ANI (@ANI) September 28, 2021
ಛತ್ತಿಸ್ಗಢದ ರಾಜೀಮ್ ನಗರದ ಕಿಸಾನ್ ಮಹಾಪಂಚಾಯತ್ನಲ್ಲಿ ಭಾಗವಹಿಸಲು ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್, “ಛತ್ತೀಸ್ಗಢದ ರೈತರ ಸಮಸ್ಯೆಗಳ ಬಗ್ಗೆ ನಾವು ಚರ್ಚಿಸುತ್ತೇವೆ. ಮೊದಲು ಕೇಂದ್ರದಲ್ಲಿ ಕುಳಿತಿರುವ ಸರ್ಕಾರದ ಬಗ್ಗೆ ಗಮನ ಹರಿಸಬೇಕು. ಈ ಕಾನೂನುಗಳನ್ನು ಜಾರಿ ಮಾಡಿದ ಬಳಿಕ ಅರ್ಧ ದೇಶವನ್ನು ಮಾರಾಟ ಮಾಡಿದೆ. ಅವರು ಮಧ್ಯಪ್ರದೇಶದಲ್ಲಿ ಎಪಿಎಂಸಿ ಮಂಡಿಗಳನ್ನು ಮಾರಿದ್ದಾರೆ. ಅವರ ಕಡೆಗೆ ಗಮನ ಕೊಡಿ. 182 ಮಂಡಿಗಳನ್ನು ಮಾರಾಟ ಮಾಡಲಾಗಿದೆ” ಎಂದಿದ್ದಾರೆ.
ಮುಂದುವರಿದು, ’ಅವರ ಮುಂದಿನ ಗುರಿ ಮಾಧ್ಯಮ ಸಂಸ್ಥೆಗಳಾಗಿವೆ. ನೀವು ಉಳಿಸಲು ಬಯಸಿದರೆ ನಮ್ಮೊಂದಿಗೆ ಸೇರಿಕೊಳ್ಳಿ. ಇಲ್ಲದಿದ್ದರೇ ನೀವು ಕೂಡ ತೊಂದರೆಗೆ ಸಿಲುಕಿಕೊಳ್ಳುತ್ತಿರಿ” ಎಂದು ಮಾಧ್ಯಮ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕಳೆದ 10 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ವಿವಾದಿತ ಕಾನೂನುಗಳು ಜಾರಿಯಾಗಿ ಒಂದು ವರ್ಷವಾದ ಹಿನ್ನೆಲೆ ಸೋಮವಾರ (ಸೆ.27) ಭಾರತ್ ಬಂದ್ ನಡೆಸಿದ್ದಾರೆ. 10 ತಿಂಗಳಲ್ಲ ಇನ್ನೂ 10 ವರ್ಷವಾದರೂ ಪ್ರತಿಭಟನೆ ನಡಸಲು ಸಿದ್ಧ ಎಂದು ರಾಕೇಶ್ ಟಿಕಾಯತ್ ಹೇಳಿದ್ದರು.
ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿಯಾಗಿದೆ: ರೈತ ಮುಖಂಡ ರಾಕೇಶ್ ಟಿಕಾಯತ್


