Homeಕರ್ನಾಟಕಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

ಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

- Advertisement -
- Advertisement -

‘ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

‘ಭಾರತ್‌ ಬಂದ್‌’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಅವರು, “ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ” ಎಂದರು.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

“ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ನಾವು ಸಾರಿ ಸಾರಿ ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜನರ ಪ್ರವಾಗಿ ನಿಲ್ಲಬೇಕಿದ್ದ ಬಿಜೆಪಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಶಕ್ತಿಗಳ ಮತ್ತು ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿಅವರು ಕಿಡಿಕಾರಿದರು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಮೋದಿ ಯುಎಸ್‌ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...