Homeಚಳವಳಿರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

ರೈತರ ಪ್ರತಿಭಟನಾ ಗಡಿಗಳಲ್ಲಿ ಮೊಳಗಿದ ಹುತಾತ್ಮ ಭಗತ್ ಸಿಂಗ್ ಘೋಷಣೆಗಳು

- Advertisement -
- Advertisement -

ಕ್ರಾಂತಿಕಾರಿ ಹುತಾತ್ಮ ಭಗತ್ ಸಿಂಗ್ ಅವರು 114ನೇ ಜನ್ಮ ದಿನದಂದು ಅವರ ಧೈರ್ಯ, ಅರ್ಪಣಾ ಮನೋಭಾವ, ವಿಚಾರಧಾರೆ ಮತ್ತು ಜೀವನಾದರ್ಶಗಳನ್ನು ಇಡೀ ದೇಶ ನೆನಪಿಸಿಕೊಂಡಿದೆ. ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕೂಡ ಭಗತ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಶಹಜಾನ್‌ಪುರ, ಗಾಝಿಪುರ್‌ ಗಡಿಗಳಲ್ಲಿ ರೈತರು ಕಾರ್ಯಕ್ರಮಗಳನ್ನು ಆಯೋಜಿಸಿ, ಭಗತ್ ಸಿಂಗ್ ವಿಚಾರಧಾರೆಗಳನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಜೊತೆಗೆ ಪಂಜಾಬ್‌ನಲ್ಲಿ ಇಂದು ಭಾರಿ ಕಾರ್ಯಕ್ರಮಗಳ ಮೂಲಕ ರೈತರು ಹುತಾತ್ಮ ಭಗತ್ ಸಿಂಗ್‌ಗೆ ಗೌರವ ಸಮರ್ಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜನರಿಗಾಗಿ ತನ್ನ ಜೀವವನ್ನು ಅರ್ಪಿಸಿದ ಭಾರತದ ಹೆಮ್ಮೆಯ ಮಗನನ್ನು ಎಲ್ಲ ಪ್ರತಿಭಟನಾ ಸ್ಥಳಗಳಲ್ಲಿ ಸ್ಮರಿಸಲಾಯಿತು. ಭಗತ್ ಸಿಂಗ್ ಅವರ ತ್ಯಾಗವು ರೈತರಿಗೆ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಸ್ಫೂರ್ತಿ ನೀಡುತ್ತದೆ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಛತ್ತೀಸ್‌ಗಢದ ಕಿಸಾನ್ ಮಜ್ದೂರ್ ಮಹಾಸಂಘದಿಂದ ಛತ್ತೀಸ್‌ಗಢದ ರಾಜೀಮ್‌ನಲ್ಲಿ ನಡೆದ ಬೃಹತ್ ಕಿಸಾನ್ ಮಹಾಪಂಚಾಯತ್‌ನಲ್ಲಿ ಎಸ್‌ಕೆಎಂ ನಾಯಕರು ಭಾಗಿಯಾಗಿದ್ದರು. ಲಕ್ಷಾಂತರ ರೈತರು ಭಾಗಿಯಾಗಿದ್ದ ಈ ಮಹಾಪಂಚಾಯತ್‌ನಲ್ಲಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಮಹಾಪಂಚಾಯತ್ ಆರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದೆ. ರೈತ ವಿರೋಧಿ ಕೃಷಿ ಮತ್ತು ಗ್ರಾಹಕರ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು. ಕನಿಷ್ಠ ಬೆಂಬಲ ಬೆಲೆಯಲ್ಲಿ ಖಾರಿಫ್ ಋತುವಿನ ಭತ್ತವನ್ನು ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಕ್ವಿಂಟಾಲ್‌ಗೆ ಖರೀದಿಸಬೇಕು. ನೀರಾವರಿ ಸಂಪನ್ಮೂಲಗಳನ್ನು ಹೆಚ್ಚಿಸಬೇಕು. ಬೆಳೆ ವೈವಿಧ್ಯತೆಯನ್ನು ಉತ್ತೇಜಿಸಬೇಕು. ಕೃಷಿ ಭೂಮಿಯನ್ನು ಬೇರೆ ಇತರೆ ಕಾರಣಗಳಿಗಾಗಿ ಸ್ವಾಧೀನ ಪಡಿಸಿಕೊಳ್ಳಬಾರದು ಮತ್ತು ಬುಡಕಟ್ಟು ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ರಕ್ಷಣೆಗಾಗಿ ನಡೆಯುತ್ತಿರುವ ಚಳವಳಿಗಳ ಮೇಲಿನ ದಮನವನ್ನು ನಿಲ್ಲಿಸಬೇಕು ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.


ಇದನ್ನೂ ಓದಿ: ಬಹುಜನ ಭಾರತ; ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...