Homeಮುಖಪುಟಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸೇರುತ್ತಿದ್ದೇನೆ - ಜಿಗ್ನೇಶ್ ಮೇವಾನಿ

- Advertisement -
- Advertisement -

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ದೇಶಕ್ಕೆ ಭಗತ್‌ ಸಿಂಗ್‌ ರವರ ಸಾಹಸ, ಅಂಬೇಡ್ಕರ್‌ರವರ ಸಮಾನತೆ ಮತ್ತು ಗಾಂಧೀಜಿಯವರ ಐಕ್ಯತೆ ಬೇಕಾಗಿದೆ ಎಂದರು.

ನಾನು ಹಿಂದೆ ಇದ್ದ ಪಕ್ಷಕ್ಕೆ ಅಭಾರಿಯಾಗಿದ್ದೇನೆ. ಅದು ನನಗೆ ಓದು-ಬರಹ ಕಲಿಸಿ ಬೆಳೆಸಿದೆ. ಹೋರಾಡುವುದನ್ನು ಕಲಿಸಿದೆ. ಅದರೊಟ್ಟಿಗೆ ನನ್ನ ಜೊತೆ ನಿಂತ ಲಕ್ಷಾಂತರ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದು ಕನ್ಹಯ್ಯ ತಿಳಿಸಿದರು.

ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಪರಿವಾರವನ್ನು ಬಿಟ್ಟು ದೇಶವನ್ನು ಉಳಿಸಲು ಸಾಧ್ಯವಿಲ್ಲ. ಮನೆ, ಮಠದ ಜೊತೆಗೆ ಇದ್ದು ಇಂದು ಪರಿವಾರ ಕಟ್ಟಬೇಕಿದೆ. ಪರಿವಾರವನ್ನು ಬಿಟ್ಟು ಕಟ್ಟುವ ಪರಿವಾರ ಹೇಗಾಗುತ್ತದೇ…? ಕಸ್ತೂರ ಬಾ ಬಿಟ್ಟು ಹೇಗೆ ಗಾಂಧಿ ಹೋರಾಡಲಿಲ್ಲವೋ ಹಾಗೆ. ಅಂಬೇಡ್ಕರ್ ಪರಿವಾರ ಬಿಟ್ಟು ಬರಲಿಲ್ಲ. ದೇಶದ ಮಹನೀಯರೆಲ್ಲ ಪರಿವಾರದೊಟ್ಟಿಗೆ ಇದ್ದು ಹೋರಾಡಿದ್ದಾರೆ ಎಂದರು.

ನಾನು ಕ್ರಾಂತಿಕಾರಿ ಹುತಾತ್ಮ ಭಗತ್‌ ಸಿಂಗ್‌ರವರ ಧೈರ್ಯ ಮತ್ತು ತ್ಯಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಅದೇ ಸಂದರ್ಭದಲ್ಲಿ ಇಂದು ನಮ್ಮ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಾನು ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಇದು ಗುಜರಾತ್‌ನಿಂದ ಶುರುವಾದ ಕಥೆ. ನಮ್ಮ ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಒಬ್ಬ ಶಾಸಕನಾಗಿ ಅಲ್ಲ, ಒಬ್ಬ ನಾಗರಿಕನಾಗಿ ಕೇಳುತ್ತೇನೆ ಈ ಸಮಯದಲ್ಲಿ ನಾನು ಏನು ಮಾಡಬೇಕು..? ಅದಕ್ಕೆ ನಾನು ನಮ್ಮ ಸಂವಿಧಾನ ಉಳಿಸುವವರ ಜೊತೆಗೆ ಬೆರೆಯಬೇಕು. ಇದಕ್ಕಾಗಿ ನಾವು ಸ್ವಾತಂತ್ರಕ್ಕಾಗಿ ಹೋರಾಡಿದ ದೇಶದ ಹಳೆಯ ಪಕ್ಷವನ್ನು ಸೇರಬೇಕು ಎಂದರು.

ಹೀಗಾಗಿ ನಾನು ನನ್ನ ಕ್ಷೇತ್ರದ ಜನ, ನನ್ನ ಪಕ್ಷದ ಹಿರಿಯ ನಾಯಕರು ಮತ್ತು ನನ್ನ ಜೊತೆಗೆ ನಾನು ಮಾತನಾಡಿದೆ. ನಾನು ಅಧಿಕೃತವಾಗಿ ಅಲ್ಲ. ನೈತಿಕವಾಗಿ ಕಾಂಗ್ರೆಸ್ ಸೇರಿದ್ದೇನೆ. ಸದಸ್ಯತ್ವವನ್ನು ನಾಳೆಯೂ ಪಡಯಬಹುದು. ಆದರೆ, ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ. ಇನ್ನು ಹಾರ್ದಿಕ್ ಪಾಟೇಲ್ ಬಗ್ಗೆ ಹೇಳಬೇಕು. ನಾವು ಗುಜರಾತ್‌ನಲ್ಲಿ ಎಲ್ಲವನ್ನು ನೋಡಿದ್ದೇವೆ. 30 ಸಾವಿರ ಕೋಟಿಯ ಡ್ರಗ್ಸ್ ಬಂದ ಬಗ್ಗೆ ಯಾರು ಮಾತಾಡಿಲ್ಲ. ಗುಜರಾತ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದೆ ನಶೆಯಲ್ಲಿ ಮುಳುಗಿಸಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಅಂಬೇಡ್ಕರ್ ಸಂವಿಧಾನ ಉಳಿಸಬೇಕಿದೆ. ರೈತ, ಕಾರ್ಮಿಕ, ಮಹಿಳೆ, ದಲಿತ, ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಪ್ಪಿಸಬೇಕಿದೆ. ಹೊಸ ಆಂದೋಲನ ನಡೆಯಬೇಕಿದೆ. ಅಂತಹ ಒಂದು ಸ್ಥಿತಿಯನ್ನು ನಾವು ಅದನ್ನು ಸೃಷ್ಟಿಸಬೇಕಿದೆ. ಎಲ್ಲರೂ ಈ ಮಿಷನ್‌ನಲ್ಲಿ ಸೇರಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಯುವಜನರು ಸೇರಬೇಕಿದೆ. ಯುವಕರನ್ನು ಸೇರಿಸಲು ನಾವು ಮೂವರು ಕಣಕ್ಕೆ ಇಳಿಯುತ್ತೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್, ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...