Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...