Homeಕರ್ನಾಟಕಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

’ರಾತ್ರಿ 7 ಗ್ರಾಮಗಳ ಮೇಲ್ಜಾತಿಯ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ’

- Advertisement -
- Advertisement -

ಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು ಹೊಸ ಇತಿಹಾಸ ಬರೆದಿದ್ದಾರೆ.

ಮೇಲ್ಜಾತಿ ಮತ್ತು ದಲಿತರ ಜೊತೆಗೆ ತಹಶೀಲ್ದಾರ್‌ ಮಾರುತಿ ಸಭೆ ನಡೆಸಿದ್ದಾರೆ. ಬಳಿಕ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಭೀಮ್ ಆರ್ಮಿ ಸಂಘಟನೆ, ಮುಜರಾಯಿ ಇಲಾಖೆ ಸಮ್ಮುಖದಲ್ಲಿ ದಿಂಡಗೂರು ಗ್ರಾಮದ ದಲಿತರು ಗ್ರಾಮದ ದೇವಾಲಯಗಳಿಗೆ ಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ.

ಆದರೆ, ದಲಿತರ ದೇವಾಲಯ ಪ್ರವೇಶ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥತಿಗೆ ಕಾರಣವಾಗಿದೆ. ಯಾವಾಗ ಏನು ಬೇಕಾದರೂ ನಡೆಯಬಹುದು, ಯಾವ ಘಟನೆ ಕೂಡ ನಡೆಯಬಹುದು ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಭೀಮ್ ಆರ್ಮಿ ಸಂಘಟನೆಯ ನಟರಾಜ್ ದಿಂಡಗೂರು,  “ನಮಗೆ ಮೇಲ್ನೊಟಕ್ಕೆ, ಕಾನೂನು ರೀತಿ ಮಾತ್ರ ದೇವಾಲಯ ಪ್ರವೇಶ ದೊರಕಿದೆ. ದೇವಾಲಯ ಪ್ರವೇಶಕ್ಕೆ ಯಾವುದೇ ತಕರಾರು ಇಲ್ಲ ಎಂದ ಮೇಲ್ಜಾತಿಯವರು ಒಳಗೊಳಗೆ ಬೇರೆ ಕ್ರಮ ಕೈಗೊಳ್ಳಲು ತೊಡಗಿಕೊಂಡಿದ್ದಾರೆ. ರಾತ್ರಿ ಮೇಲ್ಜಾತಿಯವರ ಸ್ಥಳದಲ್ಲಿ ಸುತ್ತ 7 ಗ್ರಾಮಗಳ ಸುಮಾರು 200 ರಿಂದ 300 ಮಂದಿ ಸೇರಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮಂಗಳವಾರ ಶಾಂತಿ ಸಭೆ ನಡೆಸುವ ಮುನ್ನವೇ ತಹಶೀಲ್ದಾರ್‌ ಮೇಲ್ಜಾತಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಸುಮ್ಮನೆ ದೇವಾಲಯ ಪ್ರವೇಶ ನಿರಾಕರಿಸಿ ಕೆಟ್ಟವರಾಗಬೇಡಿ. ಕಾನೂನಿನ ಪ್ರಕಾರ ಅವರು ದೇವಸ್ಥಾನ ಪ್ರವೇಶಿಸುತ್ತಾರೆ. ನೀವೂ ಒಪ್ಪದಿದ್ದರೂ ಅವರು ದೇವಾಲಯಕ್ಕೆ ನುಗ್ಗುತ್ತಾರೆ ಎಂದು ತಿಳಿಸಿ ಅವರನ್ನು ಒಪ್ಪಿಸಿದ್ದಾರೆ. ಇದರಿಂದ ಅವರು ಒಲ್ಲದ ಮನಸ್ಸಿನಿಂದ ಸಭೆಯಲ್ಲಿ ಯಾವುದೇ ತಕರಾರಿಲ್ಲ ಎಂದು ತಲೆಯಾಡಿಸಿದ್ದಾರೆ” ಎಂದು ನಟರಾಜ್ ದಿಂಡಗೂರು ಹೇಳಿದರು.

ದೇವಸ್ಥಾನ ಪ್ರವೇಶದ ನಂತರದ ಘಟನೆ ಬಗ್ಗೆ ಮಾತನಾಡಿರುವ ನಟರಾಜ್, “ಊರಿನಲ್ಲಿ ಈಗ ಪರಿಸ್ಥಿತಿ ಭೇರೆಯೇ ಇದೆ. ಊರಿನ ಮೇಲ್ಜಾತಿ ಸಮುದಾಯದ ಜನಪ್ರತಿನಿಧಿಗಳು ನಮ್ಮ ಜೊತೆಗೆ ಯಾವುದೇ ವ್ಯವಹಾರ, ಸಂಬಂಧ ಬೇಡ ಎಂದಿದ್ದಾರೆ. ಪರಿಸ್ಥಿತಿ ನೋಡಿದರೆ ಆತಂಕವಾಗುತ್ತಿದೆ. ಯಾವಾಗ ಏನಾದರೂ ಜರುಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ರಕ್ಷಣೆ ಬೇಕು ಎಂದು ಮನವಿ ಮಾಡಿದ್ದು ನಮ್ಮ ಸಮುದಾಯದವರು. ಪೊಲೀಸರು ನಮ್ಮ ಕೇರಿಗಳಲ್ಲಿ ಇರಬೇಕಿತ್ತು. ಆದರೆ ಕಳೆದೊಂದು ವಾರದಿಂದ ಅವರೆಲ್ಲಾ ಮೇಲ್ಜಾತಿಯವರ ಕೇರಿಗಳಲ್ಲಿ ನಿಂತಿದ್ದಾರೆ. ಇಲ್ಲಿ ಅವರು ಯಾರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ” ಎಂದು ಪ್ರಶ್ನಿಸಿದ್ದಾರೆ.

ದೇವಾಲಯ ಪ್ರವೇಶದಿಂದ ಏನಾದರೂ ಬದಲಾವಣೆಯಾಗಿದೆ ಎಂಬುದಕ್ಕೆ, “ಇಷ್ಟು ದಿನ ನಮಗೆ ಅಲ್ಲಿಗೆ ಹೋಗಬೇಕು ಎಂಬುದು ಯಾವತ್ತು ಮನಸ್ಸಿಗೆ ಬಂದಿರಲಿಲ್ಲ. ನಮಗೆ ದೇವಸ್ಥಾನಕ್ಕೆ ಹೋಗುವುದು, ಪೂಜೆ ಮಾಡುವುದು, ಮೌಢ್ಯವನ್ನು ಮೆತ್ತಿಕೊಳ್ಳುವ ಮನಸ್ಥಿತಿ ಇರಲಿಲ್ಲ. ಅದರೆ, ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಈ ಕ್ರಮ ಅಗತ್ಯವಾಗಿತ್ತು. ಮೊದಲ ದೇವಾಲಯದ ಹೊರಗಡೆಯೇ ಪೂಜೆ ಮಾಡಿಕೊಳ್ಳುವುದು, ನಮ್ಮ ಹೆಣ್ಣು ಮಕ್ಕಳು  ಆರತಿ ತೆಗೆದುಕೊಂಡು ಹೋದರೆ ನಮ್ಮನ್ನು ಬೇರೆ ಗುಂಪು ಮಾಡುವುದು ಇದೆಲ್ಲ ನಡೆಯುತ್ತಿತ್ತು. ಆದರೆ, ಸಮುದಾಯದ ಹಿರಿಯರ ಆಸೆ ಇದಾಗಿತ್ತು. ಎಲ್ಲಾ ಸರಿ ಇದೆ ಅಂತಾ ಮೇಲ್ನೋಟಕ್ಕೆ ಅನಿಸುತ್ತಿದೆ. ಆದರೆ ಒಳಗಡೆ ಯಾವುದೂ ಸರಿಯಿಲ್ಲ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ: 

ಕಳೆದ 8 ತಿಂಗಳ ಹಿಂದೆ ರಂಗಭೂಮಿಯಲ್ಲಿ ಸಕ್ರಿಯರಾದ, ದಿಂಡಗೂರಿನ ಮಕ್ಕಳಿಗೆ ನಾಟಕಗಳನ್ನು ಕಲಿಸುತ್ತಿದ್ದ ನಿನಾಸಂ ಕಲಾವಿದ ಸಂತೋಷ್ ಎನ್ನುವವರು ದಿಂಡಗೂರಿನ ಹೋಟೆಲ್‌ಗೆ ತೆರಳಿದ್ದಾರೆ. ಆದರೆ, ಜಾತಿ ಕಾರಣಕ್ಕೆ ಅವರಿಗೆ ಹೊಟೇಲ್ ಪ್ರವೇಶ ನಿರಾಕರಿಸಲಾಗಿದೆ. ಇದರಿಂದ ಅವಮಾನಕ್ಕೆ ಒಳಗಾದ ಅವರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಅವರಿಗೆ ನ್ಯಾಯ ಸಿಗದ ಹಿನ್ನೆಲೆ ಭೀಮ್ ಆರ್ಮಿ ಸಂಘಟನೆ ಈ ಅಸ್ಪೃಶ್ಯತೆ ನಿವಾರಣೆ ಮಾಡಬೇಕು ಎನ್ನುವ ಕಾರಣಕ್ಕೆ ದೇವಾಲಯ ಪ್ರವೇಶಿಸಲು ನಿರ್ಧರಿಸಿದೆ. ಕಳೆದ ವಾರ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು, ಹೊಟೇಲ್ ಪ್ರವೇಶ ನಿರಾಕರಣೆಯನ್ನು ಉಲ್ಲೇಖಿಸಿ,  ಅಸ್ಪೃಶ್ಯತೆ ನಿವಾರಣೆಗಾಗಿ ತಾವು ದೇವಾಲಯ ಪ್ರವೇಶಿಸುತ್ತಿರುವುದಾಗಿಯೂ ತಮಗೆ ರಕ್ಷಣೆ ನೀಡಬೇಕು ಎಂದು ತಹಶೀಲ್ದಾರ್‌, ಪೊಲೀಸ್ ಅಧಿಕಾರಿ, ಮುಜರಾಯಿ ಇಲಾಖೆ, ಸಮಾಜಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಇದಾಗಿ ಒಂದು ವಾರಕ್ಕೆ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಶಾಂತಿಸಭೆ ಮಾಡಲು ಬಂದಿದ್ದರು. ಆದರೆ, ಮೇಲ್ಜಾತಿ ಜನರು ಯಾರು ಬರದ ಕಾರಣ ಸಭೆ ನಡೆದಿರಲಿಲ್ಲ. ಮತ್ತೆ ಮುಂದಿನ ವಾರ ಸಭೆ ನಡೆಸುವುದಾಗಿ ತಿಳಿಸಿದ್ದರು. ಇದರ ಪ್ರಕಾರ ಮಂಗಳವಾರ (ಸೆ.28) ರಂದು ಎರಡು ಸಮುದಾಯದ ಜನರ ನಡುವೆ ಶಾಂತಿಸಭೆ ನಡೆಸಿ, ಜಿಲ್ಲಾಡಳಿತ, ಪೊಲೀಸರ ಸಮ್ಮುಖದಲ್ಲಿ ದಲಿತರು ಗ್ರಾಮದ ದೇವಾಲಯಗಳ ಪ್ರವೇಶ ಮಾಡಿದ್ದಾರೆ.

ಗ್ರಾಮದೇವತೆ ಸತ್ಯಮ್ಮ, ಕೇಶವಸ್ವಾಮಿ ದೇವಾಲಯ, ಮಲ್ಲೇಶ್ವರ ದೇವಾಲಯ, ಬಸವಣ್ಣ ದೇವಾಲಯ ಸೇರಿದಂತೆ ಗ್ರಾಮದಲ್ಲಿನ ದೇವಾಲಯಗಳಿಗೆ ಪ್ರವೇಶಿಸಿ, ಪೂಜೆ ಸಲ್ಲಿಸಿದ್ದಾರೆ.

ಒಂದೆಡೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ಹಾಕಿದ ಘಟನೆಯಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದ ಕೆಲ ದಿನಗಳಲ್ಲೇ ದಲಿತರು ದೇವಾಲಯ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. ಆದರೆ, ಸ್ವಾತಂತ್ಯ್ರ ಬಂದು 75 ವರ್ಷಗಳ ನಂತರವೂ ಪೊಲೀಸರ ಭದ್ರತೆಯಲ್ಲಿ ದಲಿತರು ದೇವಾಲಯ ಪ್ರವೇಶಿಬೇಕಾಗಿರುವುದು ದುರಂತವೇ ಸರಿ.

ದಲಿತರು ಸಂವಿಧಾನತ್ಮಕವಾಗಿ ದೇವಾಲಯ ಪ್ರವೇಶಿಸಿದ್ದಾರೆ.. ಈಗ ಅವರಿಗೆ ರಕ್ಷಣೆ ನೀಡಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಜವಾಬ್ದಾರಿ ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯದ್ದಾಗಿದೆ. ಅಲ್ಲಿನ ಸವರ್ಣೀಯರು ಸಹ ಇದನ್ನು ಸಮಾನತೆಯ ನೆಲೆಯಲ್ಲಿ ನೋಡಬೇಕೆ ಹೊರತು ದ್ವೇಷದಿಂದಲ್ಲ.. ಈ ಊರು ದೇವಾಲಯ ಪ್ರವೇಶ ಮತ್ತು ಸಮಾನತೆಯ ವಿಚಾರದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕಿದೆ.

ವಿಡಿಯೋ ನೋಡಿ..


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...