Homeಮುಖಪುಟಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ಚಂದ್ರಬಾಬು ನಾಯ್ಡು ಜಾಣ ನಡೆ ಏನು ಗೊತ್ತೇ?

ರಾಜ್ಯದಲ್ಲಿ ಗೆಲ್ಲದಿದ್ದರೂ ಕೇಂದ್ರದ ಅಧಿಕಾರದ ಚುಕ್ಕಾಣಿ ಹಿಡಿಯುವ ಮೈತ್ರಿಕೂಟದ ಸಂಚಾಲಕರಾದರೆ ಚಂದ್ರಬಾಬು ನಾಯ್ಡು ಅವರಿಗೆ ಹಲವು ಅನುಕೂಲಗಳಿವೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||
ಕೇಂದ್ರದಲ್ಲಿ ಮೈತ್ರಿ ಕೂಟದ ಸರ್ಕಾರವೊಂದನ್ನು ರಚಿಸಬೇಕೆಂದು ಬೇರೆ ಇನ್ನಾವುದೇ ಪಕ್ಷ ಅಥವಾ ನಾಯಕರಿಗಿಂತ ಹೆಚ್ಚಾಗಿ ಓಡಾಡುತ್ತಿರುವುದು ತೆಲುಗುದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು. ಸಾಮಾನ್ಯವಾಗಿ ಕಾಂಗ್ರೆಸ್‍ನ ಕೆಲವು ನಾಯಕರು ಅಥವಾ ಎನ್‍ಸಿಪಿಯ ಶರದ್‍ಪವಾರ್ ಈ ಪಾತ್ರವನ್ನು ವಹಿಸುತ್ತಿದ್ದರು. ಆದರೆ, ಅದನ್ನೀಗ ನಾಯ್ಡು ಏಕೆ ಮಾಡುತ್ತಿದ್ದಾರೆ?


ಹಾಗೆ ನೋಡಿದರೆ ಇದು ಅವರಿಗೇನೂ ಹೊಸದಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಳೆರಡನ್ನೂ ಸರ್ಕಾರದಿಂದ ಹೊರಗಿಟ್ಟು ಸರ್ಕಾರ ನಡೆಸಿದ್ದು 1996ರಲ್ಲಿ ಸಂಯುಕ್ತ ರಂಗದ ಮೂಲಕ. ಆಗಲೂ ಅದರ ಸಂಚಾಲಕರಾಗಿದ್ದು ಚಂದ್ರಬಾಬು ನಾಯ್ಡುವೇ. ಆ ನಂತರ ನಾಯ್ಡು ಎನ್‍ಡಿಎ ಸೇರುವ ಹೊತ್ತಿಗೆ ಅದರ ಸಂಚಾಲಕರಾಗಿದ್ದು ಸಮತಾ ಪಕ್ಷದ ಜಾರ್ಜ್ ಫರ್ನಾಂಡೀಸ್. ಸಮತಾ ಪಕ್ಷವು ಜೆಡಿಯು ಆದ ಮೇಲೂ ಜಾರ್ಜ್ ಅದರ ಸಂಚಾಲಕರಾಗಿದ್ದರು. 2008ರಲ್ಲಿ ಅನಾರೋಗ್ಯದಿಂದ ಅವರು ಹಿಂದೆ ಸರಿದಾಗ ಜೆಡಿಯುನ ಶರದ್ ಯಾದವ್ ಸಂಚಾಲಕರಾದರು.

ಇದನ್ನೂ ಓದಿ: ರಾಜಕಾರಣಿಗಳ  ಎಕ್ಸಿಟ್ ಪೋಲ್ ಏನು ಹೇಳುತ್ತದೆ?
ಜೆಡಿಯು ಎನ್‍ಡಿಎದಿಂದ ಹೊರಹೋದ ಮೇಲೆ ಎನ್‍ಡಿಎ ಸಂಚಾಲಕರಾಗಿದ್ದು ಇದೇ ಚಂದ್ರಬಾಬು ನಾಯ್ಡು. ಅವರು ಸಂಚಾಲಕರಾಗಿದ್ದಾಗಲೇ ಮತ್ತೆ ಎನ್‍ಡಿಎ ಅಧಿಕಾರವನ್ನು ಹಿಡಿದರೂ, ಬಿಜೆಪಿ ಜೊತೆಗಿನ ಅವರ ಸಂಬಂಧ ಉಳಿದುಕೊಳ್ಳಲಿಲ್ಲ. ಅದರಲ್ಲೂ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡುವುದೂ ಸೇರಿದಂತೆ ಹಲವು ವಿಚಾರಗಳಲ್ಲಿ ಮೋದಿ ನಾಯ್ಡು ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಾಗಾಗಿ ಅವರು ಎನ್‍ಡಿಎ ತೊರೆದರಲ್ಲದೇ ಮೋದಿಯನ್ನು ಕೆಳಗಿಳಿಸುವ ಶಪಥ ತೊಟ್ಟರು.


ಹೊಸ ರಾಜ್ಯವಾಗಿ ಆಂಧ್ರಪ್ರದೇಶ ಮತ್ತೊಮ್ಮೆ ಉದಯವಾದ ಮೇಲೆ ನಾಯ್ಡು ಅವರಿಗೆ ದೊಡ್ಡ ಸವಾಲು ಎದುರಾಯಿತು. ಆದಾಯ ತಂದುಕೊಡುವ ಮೆಟ್ರೋ ನಗರ ಹೈದರಾಬಾದ್ ಇಲ್ಲದೇ ರಾಜ್ಯವನ್ನು ನಡೆಸಬೇಕು ಮತ್ತು ಹೊಸ ರಾಜಧಾನಿಯನ್ನೂ ಕಟ್ಟಿಕೊಳ್ಳಬೇಕು. ಅದನ್ನು ಯಶಸ್ವಿಯಾಗಿಯೇ ನಡೆಸಿದ ಅವರು, ಕೇಂದ್ರದ ನೆರವನ್ನು ಕೇಳಿದರು. ಅಂತಹ ನೆರವನ್ನು ಉದಾರವಾಗಿ ನೀಡುವ ಇರಾದೆ ಮೋದಿಯವರದ್ದಾಗಿರಲಿಲ್ಲ. ಇಂತಹ ಸಂದರ್ಭದಲ್ಲಿ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ವಿರೋಧ ಪಕ್ಷ ವೈಎಸ್‍ಆರ್‍ಸಿಪಿಯ ಜಗನ್ ದೆಹಲಿಯಲ್ಲೂ ಧರಣಿ ಹೂಡಿದ್ದರು. ಹೀಗಾಗಿ ಕೇಂದ್ರದ ವಿರುದ್ಧ ತೊಡೆ ತಟ್ಟುವು ಅನಿವಾರ್ಯತೆ ಚಂದ್ರಬಾಬು ನಾಯ್ಡು ಅವರಿಗೆ ಉಂಟಾಯಿತು.


ಲೋಕಸಭೆಯ ಜೊತೆ ಜೊತೆಗೇ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತಿರುವ ಆಂಧ್ರದಲ್ಲಿ, ಈ ಸಾರಿ ಜಗನ್ ಅಧಿಕಾರಕ್ಕೆ ಬರುತ್ತಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದರೆ, ನಾಯ್ಡು ಅವರ ವಿಶ್ವಾಸ ಅಲುಗಾಡಿಲ್ಲ. ಒಂದು ವೇಳೆ, ಅಧಿಕಾರಕ್ಕೆ ಬರದೇ ಹೋದರೂ, ತನಗೊಂದು ವಿಶೇಷ ಸ್ಥಾನ ಕಲ್ಪಿಸಿಕೊಳ್ಳಲು ಅವರು ದೆಹಲಿಯ ದಾರಿ ತುಳಿದಿದ್ದಾರೆ.


ಯುಪಿಎ ಸರ್ಕಾರವೂ ಆಗದು, ತೃತೀಯ ರಂಗ ಮಾತ್ರವೇ ಅಧಿಕಾರಕ್ಕೆ ಬರುವುದೂ ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಹುಟ್ಟಿಕೊಳ್ಳಬಹುದಾದ ಹೊಸ ರಂಗಕ್ಕೆ ಸಂಚಾಲಕರಾಗಿ ಚಂದ್ರಬಾಬು ನಾಯ್ಡು ಸಹಜ ಆಯ್ಕೆಯಾಗಿರುತ್ತಾರೆ. ಅದಕ್ಕೆ ಬೇಕಾದಷ್ಟು ಕೆಲಸವನ್ನು ಅವರೀಗಾಗಲೇ ಮಾಡಿದ್ದಾರೆ. ಮುಖ್ಯಮಂತ್ರಿಯಾಗದೇ ಇದ್ದರೂ ಅಂತಹ ರಂಗವೊಂದರ ಸಂಚಾಲಕರಾಗಿ, ಅಮರಾವತಿ (ಆಂಧ್ರದ ಹೊಸ ರಾಜಧಾನಿ)ಯಲ್ಲೋ ಅಥವಾ ದೆಹಲಿಯಲ್ಲೋ ಕೂತು ಪತ್ರಿಕಾಗೋಷ್ಠಿ ಮಾಡಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಘೋಷಿಸುವ ಅವಕಾಶ ಅವರದ್ದಾಗಿರುತ್ತದೆ.


ಈ ಮೂಲಕ ಮುಖ್ಯಮಂತ್ರಿಯಾಗದೇ ಹೋದರೂ ಆಂಧ್ರದ ಉದ್ಧಾರಕನಾಗಿ ನಾಯ್ಡುವೇ ಇರುತ್ತಾರೆ. ನಿಧಾನಕ್ಕೆ ಜಗನ್‍ರನ್ನು ಹಣಿದು, ತನಗೋ ಅಥವಾ ತನ್ನ ಮಗ ನಾರಾ ಲೋಕೇಶ್‍ಗೋ ಮುಂದಿನ ಅವಧಿಯಲ್ಲಿ ಸ್ಥಾನ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಚಂದ್ರಬಾಬು ನಾಯ್ಡು ಅವರಿಗೆ ಈ ಲೆಕ್ಕಾಚಾರವೂ ಇರುವುದರಲ್ಲಿ ಸಂದೇಹವೇನಿಲ್ಲ. ಮೋದಿಯನ್ನು ಪ್ರಧಾನಿಯಾಗದಂತೆ ತಡೆಯಬೇಕು ಮತ್ತು ದೇಶದ ಪ್ರಜಾತಂತ್ರವು ಬಹಳ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ಇದು ತನ್ನ ಕರ್ತವ್ಯ ಎಂದು ಹೇಳುತ್ತಿರುವ ಅವರ ಮಾತುಗಳು ಸಂಪೂರ್ಣ ಸುಳ್ಳಲ್ಲದಿರಬಹುದು. ಆದರೆ, ಈ ಲೆಕ್ಕಾಚಾರ ಇಲ್ಲವೇ ಇಲ್ಲ ಎಂದೂ ಹೇಳಲಾಗದು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ಅವರ ಅಭ್ಯರ್ಥಿ ಪ್ರಣಬ್ ಮುಖರ್ಜಿ

ಆದರೆ, ಯಾವ ಸಾಧ್ಯತೆ ಎಷ್ಟು ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಾಗುವುದು ಮೇ 23ರ ಸಂಜೆಯೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...