Homeಕರ್ನಾಟಕಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

ಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

- Advertisement -
- Advertisement -

ಮೈಸೂರಿನಲ್ಲಿ ನಡೆದ ಪೊಲೀಸ್ ತರಬೇತಿ ಅಕಾಡೆಮಿಯ ಆರನೇ ಬ್ಯಾಚ್‌ನಲ್ಲಿ ತರಬೇತಿ ಮುಗಿಸಿ ಮಂಗಳವಾರ ನಡೆದ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಭಾಗವಹಿಸಿದ್ದ ಒಟ್ಟು 242 ಮಹಿಳೆಯರಲ್ಲಿ, 38 ಮಂದಿ ಸ್ನಾತಕೋತ್ತರ ಪದವೀಧರರಾಗಿದ್ದರೆ, 182 ಮಂದಿ ಪದವೀಧರರಾಗಿದ್ದಾರೆ.

ಹೌದು, ಪೊಲೀಸ್ ಪೇದೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿತ್ತು. ಆದರೆ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಹೆಚ್ಚಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿ ಎಂಟು ತಿಂಗಳ ಅವಧಿಯ ತರಬೇತಿಯನ್ನು ಪಡೆದಿದ್ದಾರೆ.

ಇದರಲ್ಲಿ 13 ಕಾನ್ಸ್‌ಟೇಬಲ್‌ಗಳು ಎಂಎ ಪದವಿ ಪಡೆದಿದ್ದರೆ, ಇತರರು ಎಂಎಸ್‌ಸಿ ಮತ್ತು ಎಂಕಾಂ ಪದವೀಧರರು. ಅಲ್ಲದೆ, 14 ಎಂಜಿನಿಯರಿಂಗ್ ಮುಗಿಸಿದ್ದರೆ, 06 ಮಂದಿ ಬಿಬಿಎ ಮತ್ತು ಬಿಸಿಎ ಪದವೀಧರರು ಸೇರಿದ್ದಾರೆ. ಸರ್ಕಾರಿ ನೌಕರಿ ಪಡೆಯುವುದು ತೀವ್ರ ಅವಶ್ಯಕತೆಯೋ ಅಥವಾ ಪೊಲೀಸ್ ಪಡೆಯಲ್ಲಿ ಕೆಲಸ ಮಾಡುವ ಉತ್ಸಾಹ ಇದಕ್ಕೆ ಕಾರಣವೋ ತಿಳಿಯದಾಗಿದೆ.

ಈ 242 ಕಾನ್ಸ್‌ಟೇಬಲ್‌ಗಳಲ್ಲಿ 214 ಜನರು ಗ್ರಾಮೀಣ ಪ್ರದೇಶಗಳಿಂದ ಬಂದವರು, 28 ಮಂದಿ ನಗರ ಭಾಗಗಳವರು. ಅವರನ್ನು ಈಗ ಚಾಮರಾಜನಗರ, ಮೈಸೂರು, ತುಮಕೂರು, ಕೊಡಗು, ರಾಯಚೂರು, ಮಂಗಳೂರು, ಕಲಬುರಗಿ ಮತ್ತು ರಾಜ್ಯದ ಇತರ ಪೊಲೀಸ್ ಘಟಕಗಳಿಗೆ ನೇಮಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಈ ಹೊಸ ನೇಮಕಾತಿಗಳಲ್ಲಿ ಶೈಕ್ಷಣಿಕವಾಗಿ ವಿಶ್ವವಿದ್ಯಾನಿಲಯದ ಟಾಪರ್‌ಗಳೂ ಸೇರಿದ್ದಾರೆ. ಆಲ್ ರೌಂಡ್ ಬೆಸ್ಟ್ ಟ್ರೇನಿ ಪ್ರಶಸ್ತಿಯನ್ನು ಪಡೆದ ಲತಾ ಎಂ ಅವರು ಬಿಎ ಪದವಿಯಲ್ಲಿ ತನ್ನ ಜಿಲ್ಲೆಗೆ ಟಾಪರ್‌ ಆಗಿದ್ದರು. ಗುಂಡಿನ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸುಜಾತ ಎಸ್ ಬಿರಾದಾರ್, ಚಂದ್ರಕಲಾ ಬಿರಾದಾರ ಮತ್ತು ಚಿತ್ರಾ ಜಿ ತಮ್ಮ ತಮ್ಮ ಹಳ್ಳಿಯ ಮೊದಲ ಪೊಲೀಸ್ ಉದ್ಯೋಗ ಪಡೆದ ಯುವತಿಯರು.

ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅರ್ಹ ಮಹಿಳೆಯರು ಉದ್ಯೋಗಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಇದು ಒಳ್ಳೆಯ ಸಂಕೇತವಾಗಿದ್ದರೂ, ಹೆಚ್ಚಿನವರು ಇತರ ಸ್ಪರ್ಧಾತ್ಮಕ ಅಥವಾ ಅಂತರ-ವಿಭಾಗದ ಪರೀಕ್ಷೆಗಳನ್ನು ತೆಗೆದುಕೊಂಡು, ಈ ಹುದ್ದೆಗಳನ್ನು ಮತ್ತೆ ಖಾಲಿ ಮಾಡಿ ಹೋಗುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.


ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...