Homeಅಂಕಣಗಳುಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

- Advertisement -
- Advertisement -

ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ ಭಾರತದಲ್ಲಿ ನಡೆಯಿತು. ಮೊದಲನೆಯದರಿಂದ, ತಾನು ನಡೆಸಿದ ಹೀನಾಯ ಅಪರಾಧವನ್ನು ಒಪ್ಪಿಕೊಳ್ಳುವ ಒತ್ತಡ ಪ್ರಭುತ್ವದ ಮೇಲೆ ಸೃಷ್ಟಿಯಾದರೆ, ಎರಡನೆಯ ಘಟನೆಯಲ್ಲಿ ಫೋಟೋಜರ್ನಲಿಸ್ಟ್ ಆಗಿ ತೆರಳಿದ್ದ ವ್ಯಕ್ತಿಯೊಬ್ಬನ ಹಿಂಸಾತ್ಮಕ ಮತ್ತು ಅಮಾನವೀಯ ನಡತೆಯ ಕಾರಣದಿಂದಾಗಿ ಪ್ರಭುತ್ವದ ಅಪರಾಧಗಳು ಹಿನ್ನೆಲೆಗೆ ನೂಕಲ್ಪಟ್ಟವು.

ಮೊದಲನೆಯದು; ರಕ್ತ ಮೆತ್ತಿಕೊಂಡ ಅಮೆರಿಕ ಸ್ಟೇಟ್‌ಗೆ ಮುಜುಗರ ಉಂಟುಮಾಡಿದ ಜರ್ನಲಿಸಂ

ಆಫ್ಘಾನಿಸ್ತಾನವನ್ನು ಆಗಸ್ಟ್ 15ರ ಹೊತ್ತಿಗೆ ತಾಲಿಬಾನ್ ಬಹುತೇಕ ಸಂಪೂರ್ಣವಾಗಿ ವಶಪಡಿಸಿಕೊಂಡ ಮೇಲೆ, ಅಮೆರಿಕನ್ ಮಿತ್ರ ಪಡೆಗಳು ಕಾಬೂಲ್‌ನಿಂದ ಹಿಂದಿರುಗಲು ಇನ್ನೂ ಹರಸಾಹಸ ಪಡುತ್ತಿದ್ದವು. ಆಗಸ್ಟ್ 26ರಂದು ಕಾಬೂಲ್ ವಿಮಾನ ನಿಲ್ದಾಣದ ಬಳಿ ನಡೆದ ಸ್ಫೋಟವೊಂದರಿಂದ ಸುಮಾರು 180ಕ್ಕೂ ಹೆಚ್ಚು ಜನ ಮೃತಪಟ್ಟರು ಮತ್ತು ಹಲವರು ಗಾಯಗೊಂಡಿದ್ದರು. ಇದರಲ್ಲಿ ಅಮೆರಿಕ, ಬ್ರಿಟನ್ ಮತ್ತು ಅಫ್ಘನ್ ಪ್ರಜೆಗಳೂ ಸೇರಿದ್ದರು. ಇಸ್ಲಾಮಿಕ್ ಸ್ಟೇಟ್ ಇದರ ಹೊಣೆ ಹೊತ್ತಿದೆ ಎಂದು ವರದಿಯಾಗಿತ್ತು.

ಅಮೆರಿಕಾ

ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದರು. ಇದರಿಂದ ತನ್ನ ಕಣ್ಗಾವಲನ್ನು ಹೆಚ್ಚಿಸಿಕೊಂಡಿದ್ದ ಅಮೆರಿಕನ್ ಸೇನೆ, ಆಫ್ಘಾನಿಸ್ತಾನದ ನೆಲದಲ್ಲಿ ಆಗಸ್ಟ್ 29ರಂದು ಹಲವು ಸಂಶಯಾತ್ಮಕ ಚಲನವಲನಗಳನ್ನು ಗುರುತಿಸಿರುವುದಾಗಿ ಮತ್ತು ಐಸಿಸ್ ’ಸುರಕ್ಷಿತ ಮನೆ’ಗೆ ಹೋಗಿಬರುತ್ತಿರುವ ವ್ಯಕ್ತಿಯನ್ನು ಪತ್ತೆಹಚ್ಚಿರುವುದಾಗಿ ಹೇಳಿ, ಡ್ರೋನ್ ಕ್ಷಿಪಣಿ ದಾಳಿ ನಡೆಸಿ, ಮೂವರನ್ನು ಕೊಂದುಹಾಕಿದ್ದರ ಬಗ್ಗೆ ತಿಳಿಸಿತ್ತು.

ಅಮೆರಿಕದ ಪ್ರತಿಷ್ಟಿತ ಪತ್ರಿಕೆಯಾದ ’ದ ನ್ಯೂಯಾರ್ಕ್ ಟೈಮ್ಸ್’ ಸೆಪ್ಟಂಬರ್ ಎರಡನೇ ವಾರದಲ್ಲಿ ಮಾಡಿದ ತನಿಖಾ ಪತ್ರಿಕೋದ್ಯಮ ಅಮೆರಿಕ ಸೇನೆಯ ಮೇಲಿನ ಸುಳ್ಳುಗಳನ್ನು ಬಯಲು ಮಾಡಿತ್ತು. ಅಮೆರಿಕದ ಮಿಸೈಲ್ ದಾಳಿಯಿಂದ ಮೃತಪಟ್ಟಿದ್ದು ಐಸಿಸ್ ಉಗ್ರಗಾಮಿಗಳಲ್ಲ, ಬದಲಿಗೆ ಸಾಮಾನ್ಯ ಆಫ್ಘನ್ ನಾಗರಿಕರು ಎಂದು ಆ ವರದಿ ಬಹಿರಂಗಪಡಿಸಿತ್ತು. ಹಾಗೂ ಅಮೆರಿಕ ಸೇನೆ ತಿಳಿಸಿದಂತೆ ಮೃತಪಟ್ಟವರು ಕೇವಲ ಮೂರು ಜನರಲ್ಲ ಬದಲಿಗೆ ಏಳು ಮಕ್ಕಳನ್ನು ಸೇರಿಸಿ 10 ಸಾಮಾನ್ಯ ನಾಗರಿಕರು ಬಲಿಯಾಗಿರುವುದನ್ನು ವರದಿ ತಿಳಿಸಿತ್ತು. ಅಲ್ಲದೆ, ನೇರ ಕ್ಷಿಪಣಿ ದಾಳಿಯಿಂದಲ್ಲದೆ, ತಾನು ದಾಳಿ ಮಾಡಿದ ಕಾರಿನಲ್ಲಿ ಇದ್ದ ಸ್ಫೋಟಕ ವಸ್ಥುಗಳು ಸಿಡಿದ ಕಾರಣಕ್ಕೆ ಅಲ್ಲಿ ಮೃತರ ಸಂಖ್ಯೆ ಹೆಚ್ಚಿತ್ತು ಎಂಬ ಅಮೆರಿಕ ಸೇನೆಯ ಹೇಳಿಕೆ ಕೂಡ ಸುಳ್ಳಿನಿಂದ ಕೂಡಿದ್ದು ಎಂದು ಆ ಪತ್ರಿಕಾ ವರದಿ ಮತ್ತು ತನಿಖಾ ವಿಡಿಯೋ ಸಾಬೀತುಪಡಿಸಿತ್ತು.

ಹಲವು ದೇಶಗಳ ಮೇಲಿನ ತನ್ನ ಸುದೀರ್ಘ ಯುದ್ಧದಲ್ಲಿ ಎಷ್ಟೋ ಬಾರಿ ಸಾಮಾನ್ಯ ನಾಗರಿಕರ ಮೇಲೆ ದಾಳಿ ಮಾಡಿ ಕೊಂದಿರುವ ಆರೋಪಗಳಿಂದ ನುಣುಚಿಕೊಂಡಿದ್ದ ಅಮೆರಿಕ ಆಡಳಿತ ವ್ಯವಸ್ಥೆಗೆ ಈ ಬಾರಿ ಭಾರಿ ಮುಜುಗರ ತಂದೊಡ್ಡಿದ್ದು ’ದ ನ್ಯೂಯಾರ್ಕ್ ಟೈಮ್ಸ್’ನ ಪತ್ರಿಕೋದ್ಯಮ. ಕ್ಯಾಲಿಫೋರ್ನಿಯಾ ಮೂಲದ ’ನ್ಯೂಟ್ರಿಶನಲ್ ಅಂಡ್ ಎಜುಕೇಶನಲ್ ಇಂಟರ್‌ನ್ಯಾಷನಲ್’ ಎಂಬ ನೆರವು ನೀಡುವ ಸಂಸ್ಥೆಯೊಂದಿಗೆ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಜೆಮಾರಿ ಅಹ್ಮದಿಯ ಚಲನವಲನವನ್ನು ಐಎಸ್ ಉಗ್ರರ ಚಲನವಲನ ಎಂದು ಕರೆದು, ಅಮೆರಿಕ ಸೇನೆ ಆತನ ಕಾರಿನ ಮೇಲೆ ದ್ರೋಣ್ ಕ್ಷಿಪಣಿ ನಡೆಸಿದ್ದರ ಪರಿಣಾಮವಾಗಿ ಆತನ ಜೊತೆಗೆ ಏಳು ಪುಟ್ಟ ಮಕ್ಕಳು ಸೇರಿದಂತೆ 10 ಜನರನ್ನು ಆಹುತಿ ತೆಗೆದುಕೊಂಡಿತ್ತು. ಆದರೆ ಅಂದು ಜೆಮಾರಿ ಅಹ್ಮದಿಯ ಎಲ್ಲಾ ಚಲನವಲನಗಳು ಎಂದಿನ ದಿನದ ಸಾಮಾನ್ಯ ಕೆಲಸದ ಭಾಗವಾಗಿತ್ತು ಎಂದು ತನಿಖಾ ವರದಿ ಸಾಬೀತುಪಡಿಸಿತ್ತು.

ಚಿತ್ರ ಕೃಪೆ: ದ ನ್ಯೂಯಾರ್ಕ್ ಟೈಮ್ಸ್

ಭಯೋತ್ಪಾದನೆ ವಿರುದ್ಧದ ಯುದ್ಧ ಎಂದು ಹೇಳಿಕೊಂಡು ನಡೆಸುವ ಇಂತಹ ನಾಗರಿಕ ಹತ್ಯೆಗಳಿಗೆ ಪರಿಹಾರವೇನು? ಇದಕ್ಕೆ ಅಮೆರಿಕ ಪ್ರಭುತ್ವ ಬೆಲೆತೆತ್ತುವುದು ಯಾವಾಗ? ಈಗ ಇದೊಂದು “ದುರಂತಮಯ ತಪ್ಪು” ಎಂದು ಅಮೆರಿಕ ಪ್ರಭುತ್ವ ಒಪ್ಪಿಕೊಂಡಿದ್ದರೂ, ಹೋದ ಅಮಾಯಕ ಜೀವಗಳನ್ನು ಮರಳಿ ತರಬಲ್ಲದೇ ಅದು? ಕೊನೆ ಪಕ್ಷ ಈ ತಪ್ಪುಗಳನ್ನು ಜಗತ್ತಿನ ಮುಂದೆ ತೋರಿಸಲು, ಒಂದು ಪ್ರಭುತ್ವ ನಡೆಸಬಲ್ಲ ಹೀನಾಯ ಕೃತ್ಯಗಳನ್ನು ಬಯಲಿಗೆಳೆಯಲು ಅದೇ ದೇಶದ ಕೆಲವಾದರೂ ಪತ್ರಕರ್ತರು ಇನ್ನೂ ತಮ್ಮ ಸಿಟ್ಟನ್ನು, ತಾವೂ ನಿಭಾಯಿಸಬೇಕಿರುವ ಕರ್ತವ್ಯವನ್ನು ಜೀವಂತವಾಗಿರಿಸಿಕೊಂಡಿದ್ದಾರೆ ಎಂಬುದೇ ನಿಟ್ಟುಸಿರು!

ಎರಡನೆಯದು; ದೇಹ ತಣ್ಣಗಾಗುವ ಮುನ್ನವೇ ಅದರ ಮೇಲೆ ಕುಪ್ಪಳಿಸಿ ಗುದ್ದಿದ ಫೋಟೋಗ್ರಾಫರ್!

ಪ್ರವಾಸ ಕೈಗೊಂಡಿದ್ದ ಈ ದೇಶದ ಪ್ರಧಾನಿ ಅಮೆರಿಕ ನೆಲದಲ್ಲಿ, ಆಫ್ಘಾನಿಸ್ತಾನ ಭಯೋತ್ಪಾದನೆಯ ನೆಲವಾಗುವುದರ ಬಗ್ಗೆ ಒಂದು ಕಡೆ ಆತಂಕ ವ್ಯಕ್ತಪಡಿಸುತ್ತಿದ್ದರೆ, ತಮ್ಮದೇ ದೇಶದ ರಾಜ್ಯವಾದ ಅಸ್ಸಾಂನ ಪೊಲೀಸರು ಸಾಮಾನ್ಯ ನಾಗರಿಕರ ಮೇಲೆ ಗುಂಡುಹಾರಿಸಿ ಕನಿಷ್ಟ ಇಬ್ಬರನ್ನು ಹತ್ಯೆಗೈದಿದ್ದರು. ಅಷ್ಟು ಸಾಲದು ಎಂಬಂತೆ, ಪೊಲೀಸರ ಜೊತೆಗೆ ತೆರಳಿದ್ದ ಫೋಟೋಜರ್ನಲಿಸ್ಟ್ ಒಬ್ಬ ಆಗತಾನೆ ಗುಂಡುಬಿದ್ದು ನೆಲಕ್ಕುರುಳಿದ ವ್ಯಕ್ತಿಯ ಮೃತ ದೇಹ ತಣ್ಣಗಾಗುವ ಮುಂಚೆಯೇ, ಆ ದೇಹದ ಮೇಲೆ ಕುಪ್ಪಳಿಸುವ, ಆ ದೇಹಕ್ಕೆ ಗುದ್ದುವ ವಿಡಿಯೋ ಮತ್ತು ಫೋಟೋಗಳು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದವು. ತನ್ನ ಮುಂದೆ ಘಟಿಸಿದ ಒಂದು ಸಾವು ಕೊನೆಪಕ್ಷ ಮನುಷ್ಯನ ಕ್ರೌರ್ಯವನ್ನು ಅದುಮಿಟ್ಟುಕೊಳ್ಳುವಂತೆ ಮಾಡಿ, ಸಣ್ಣ ವೇದನೆಯನ್ನೂ ಸೃಷ್ಟಿಸಲು ಸಾಧ್ಯವಾಗದೆ ಹೋದರೆ, ಎಂತಹ ವಿಕೃತ ಸಮಾಜವನ್ನು ಸೃಷ್ಟಿಸುತ್ತಿದ್ದೇವೆ ಎಂಬುದಕ್ಕೆ ಅದು ದ್ಯೋತಕವಾಗಿತ್ತು.

ಅಸ್ಸಾಂನ ರಾಜಧಾನಿ ಗೌಹಾಟಿಯಿಂದ ಸುಮಾರು 70 ಕಿಲೋಮೀಟರ ದೂರದಲ್ಲಿರುವ ಧೋಲಾಪುರ್‌ನಲ್ಲಿ ಅನಧಿಕೃತವಾಗಿ ವಾಸವಾಗಿದ್ದಾರೆ ಎಂದು ಆರೋಪಿಸಲಾಗಿರುವ ಪೂರ್ವ ಬಂಗಾಳ ಮೂಲದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸುಮಾರು 800 ಕುಟುಂಬಗಳನ್ನು ಅವರ ಟಿನ್ ಶೆಡ್‌ಗಳಿಂದ ತೆರವುಗೊಳಿಸುವ ಯೋಜನೆಯ ಭಾಗವಾಗಿ ಸೆಪ್ಟಂಬರ್ 20- 23ರ ನಡುವೆ ಪೊಲೀಸರು ಅಲ್ಲಿ ನೆರೆದಿದ್ದರು. ಸರಿಯಾದ ನೋಟಿಸ್ ಸಿಗದಿದ್ದಕ್ಕೆ ಕಂಗಾಲಾಗಿದ್ದ ಆ ಕುಟುಂಬಗಳ ಜನರು ಪ್ರತಿರೋಧ ತೋರಿದ್ದಾರೆ. ಒಬ್ಬ ವ್ಯಕ್ತಿ ಬೆತ್ತವೊಂದನ್ನು ಹಿಡಿದು ಪೊಲೀಸರತ್ತ ನುಗ್ಗಿ ಬರುವ ಒಂದು ದೃಶ್ಯವನ್ನು ಕೂಡ ವಿಡಿಯೋದಲ್ಲಿ ಕಾಣಬಹುದು. ಆದರೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಪೊಲೀಸರಿಗೆ ಆ ಗುಂಪನ್ನು ಚದುರಿಸುವುದು ಕಷ್ಟವೇನಿರಲಿಲ್ಲ. ಬದಲಿಗೆ ಏಕಾಏಕಿ ಗುಂಡಿನ ಸುರಿಮಳೆಗೈದು ಇಬ್ಬರ ಹತ್ಯೆಗೆ ಮತ್ತು ಹಲವರ ಗಾಯಗಳಿಗೆ ಕಾರಣವಾಗಿದ್ದಾರೆ. ಕೆಲವರು ಪೊಲೀಸರು ಕೂಡ ಗಾಯಗೊಂಡಿದ್ದಾರೆ.

ಜನಸಾಮಾನ್ಯರ ಮೇಲಿನ ದರ್ಪ ಮತ್ತು ಪೊಲೀಸರ ಹದ್ದುಮೀರಿದ ವರ್ತನೆ ಒಂದು ಕಡೆಯಾದರೆ, ಅವರ ಜೊತೆಗೆ ತೆರಳಿದ್ದ ಫೋಟೋಗ್ರಾಫರ್, (ಈಗ ಘಟನೆಯ ನಂತರ ಬಂಧಿತನಾಗಿದ್ದಾನೆ) ಬಿಜೋಯ್ ಬನಿಯಾನ ವರ್ತನೆ ಇಡೀ ಮನುಕುಲಕ್ಕೆ ನಾಚಿಕೆ ತರುವಂತಿತ್ತು! ಅದರ ನಂತರ ಅಸ್ಸಾಂನ ಪತ್ರಿಕೆಗಳು ಈ ಘಟನೆಯನ್ನು ವರದಿ ಮಾಡಿದ ರೀತಿ ಕೂಡ, ಆಡಳಿತ ವ್ಯವಸ್ಥೆಯ ಪರವಾದ ನಿಲುವನ್ನೇ ವಹಿಸಿದ್ದವು ಎಂದು ಮುಂದಿನ ದಿನದ ದಿನಪತ್ರಿಕೆಗಳ ಬರಹಗಳನ್ನು ವಿಶ್ಲೇಷಿಸಿರುವ ’ನ್ಯೂಸ್‌ಲಾಂಡ್ರಿ’ ಪತ್ರಿಕೆ ತಿಳಿಸಿದೆ.

ಜನರಲ್ ಡೈಯರ್ ಮತ್ತವನ ಸಂತತಿ ಸತ್ತರೂ ಜಲಿಯನ್‌ವಾಲಾ ಬಾಗ್ ದುರಂತ ಹಲವು ರೂಪಗಳಲ್ಲಿ ಮರುಕಳಿಸುತ್ತಿರುತ್ತದೆ ಎಂಬುದಕ್ಕೆ ಅಸ್ಸಾಂನ ಈ ಘಟನೆಯೇ ಸಾಕ್ಷಿ. ಆದರೆ ನಾಗರಿಕ ಸಮಾಜದ ಒಂದು ವರ್ಗ ಅಂತಹ ಡೈಯರ್‌ಗಳ ಇಂದಿನ ಅವತಾರಗಳ ಪರ ವಹಿಸಿ ನಿಲ್ಲುತ್ತಿರುವುದು ಈ ಯುಗದ ದುರಂತವಷ್ಟೇ!


ಇದನ್ನೂ ಓದಿ: ಅಸ್ಸಾಂ: ಕ್ಯಾಮರಾ ಮುಂದೆಯೆ ಪೊಲೀಸರಿಂದ ಕ್ರೂರವಾಗಿ ಹತ್ಯೆಯಾದ ವ್ಯಕ್ತಿ ಅಕ್ರಮ ನಿವಾಸಿಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...