Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...