Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...