Homeಕರ್ನಾಟಕಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ...

ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

- Advertisement -
- Advertisement -

ಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ವಿಧಿಸಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣ ನಡೆದ್ದು ಹಲವು ದಿನಗಳಾಗಿದ್ದು, ಮಿಯಾಪುರದಲ್ಲಿ ಮಗು ಪೋಷಕರಿಗೆ ದಂಡ ವಿಧಿಸಿದ್ದ ಪ್ರಕರಣ ಹೊರ ಬಂದ ಮೇಲೆ ಇದು ಮುನ್ನಲೆಗೆ ಬಂದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಸ್ವಯಂ ಪ್ರೇರಣೆಯಿಂದ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ.

ಗ್ರಾಮದ ದೇವಸ್ಥಾನದ ಪೂಜಾರಿ ಬಸವರಾಜ ಬಡಿಗೇರ, ಆಡಳಿತ ಮಂಡಳಿಯ ರೇವಣಯ್ಯಸ್ವಾಮಿ ಗಾಲಿಮಠ, ಶೇಖರಪ್ಪ ರೇವಣಕಿ, ಶಂಕ್ರಪ್ಪ ಗುಂಜಳ್ಳಿ, ಪ್ರಶಾಂತ ತಮ್ಮಣ್ಣನವರ, ಬಸವರಾಜ ತಳವಾರ, ಕಾಡಪ್ಪ ನಾಯಕ ಮತ್ತು ದುರುಗೇಶ ಸಂಕನಾಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇತ್ತಿಚೆಗೆ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು 25 ಸಾವಿರ ರೂಪಾಯಿ ದಂಡ ದಂಡ ವಿಧಿಸಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

“ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು” ಎಂದು  ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ ಆಗ್ರಹಿಸಿದ್ದರು.


ಇದನ್ನೂ ಓದಿ: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...