Homeಮುಖಪುಟ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ. “ಪ್ರಧಾನಮಂತ್ರಿ ಪೋಶನ್ ಯೋಜನೆ ಅಥವಾ ಪಿಎಂ-ಪೋಶನ್ ಯೋಜನೆ” ಎಂದು ಬಿಸಿಯೂಟ ಯೋಜನೆಯ ಹೆಸರನ್ನು ಬುಧವಾರ ಬದಲಾಯಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆಗೆ 1.30 ಸಾವಿರ ಕೋಟಿ ವೆಚ್ಚ ಮಾಡುವುದಾಗಿ ಒಕ್ಕೂಟ ಸರ್ಕಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಯೋಜನೆಯು ದೇಶಾದ್ಯಂತ 11.2 ಲಕ್ಷ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗೆ ದಾಖಲಾದ 11.8 ಕೋಟಿ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ಈ ಯೋಜನೆಯು 2021-22 ರಿಂದ 2025-26 ರವರೆಗಿನ ಐದು ವರ್ಷಗಳ ಅವಧಿಗೆ ಒಕ್ಕೂಟ ಸರ್ಕಾರದಿಂದ 54,061.73 ಕೋಟಿ ಮತ್ತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತದಿಂದ 31,733.17 ಕೋಟಿಗಳ ಆರ್ಥಿಕ ವೆಚ್ಚವನ್ನು ಹೊಂದಿದೆ.

ಆಹಾರ ಧಾನ್ಯಗಳ ಮೇಲೆ 45,000 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವನ್ನು ಒಕ್ಕೂಟ ಸರ್ಕಾರ ಭರಿಸುತ್ತದೆ. ಆದ್ದರಿಂದ, ಯೋಜನೆಯ ಒಟ್ಟು ಬಜೆಟ್ 1,30,794.9 ಕೋಟಿ ಆಗಿರುತ್ತದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ನಡೆಯುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಅಥವಾ ಬಾಲವಾಡಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸರ್ಕಾರ ಹೇಳಿದೆ. ಪ್ರಸ್ತುತವಾಗಿ ಈ ವಿದ್ಯಾರ್ಥಿಗಳನ್ನು ಯೋಜನೆಯಲ್ಲಿ ಸೇರಿಸಲಾಗಿಲ್ಲ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

“ಯೋಜನೆಯ ಅಡಿಯಲ್ಲಿ ನೀಡುವ ಆಹಾರವನ್ನು ಸರ್ಕಾರ ನಿರ್ಧರಿಸುವುದಿಲ್ಲ. ಇದನ್ನು ರಾಜ್ಯಗಳು ನಿರ್ಧರಿಸಬಹುದು. ರಾಜ್ಯಗಳು ತಮ್ಮ ಸ್ಥಳೀಯ ಪೌಷ್ಟಿಕಾಂಶದ ವಸ್ತುಗಳನ್ನು ಸೇರಿಸಲು ಅನುಮತಿಸಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

“ಈ ಮೊದಲು ಈ ಅವಕಾಶ ಇರಲಿಲ್ಲ …ಬದಲಾಗಿ, ಅಧಿಕ ರಕ್ತಹೀನತೆ ಇರುವ ಜಿಲ್ಲೆಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕಾಂಶದ ವಸ್ತುಗಳನ್ನು ಒದಗಿಸುವುದಕ್ಕಾಗಿ ವಿಶೇಷ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನೆಯನ್ನು ಯೋಜನೆಯ ಅಡಿಯಲ್ಲೆ ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಯೋಜನೆಯನ್ನು ಐದು ವರ್ಷಗಳ ನಂತರ ನವೀಕರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿ ಹೆಸರಿಡಲು PM ಏನಾದರೂ ಅವರ ಮನೆಯಿಂದ ಹಣ ತಂದು ಶಾಲಾ ಮಕ್ಕಳಿಗೆ ಅನ್ನದಾನ ಮಾಡುತ್ತಿದ್ದಾರೆಯೇ? ಜನರು ಕಟ್ಟಿದ ತೆರಿಗೆಯಿಂದಲೇ ತಾನೇ ಸರ್ಕಾರಗಳು ಇಂಥ ಯೋಜನೆಗಳನ್ನು ರೂಪಿಸುವುದು?

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...