Homeಕರ್ನಾಟಕಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಕೊರೊನಾದಿಂದಾಗಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದ ಆದೇಶವನ್ನು ರಾಜ್ಯ ಸರ್ಕಾರ ಮಂಗಳವಾರ ವಾಪಾಸು ಪಡೆದಿದೆ. ಸರ್ಕಾರದ ಈ ನಿರ್ಧಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸೋಂಕಿನಿಂದ ಮೃತಪಟ್ಟ ಪ್ರತಿ ಕುಟುಂಬದವರಿಗೂ 5 ಲಕ್ಷ ರೂ. ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೇ, ಕೋವಿಡ್‌ನಿಂದ ಮೃತಪಟ್ಟವರ ಪ್ರತಿ ಕುಟುಂಬದವರಿಗೂ ರೂ.5 ಲಕ್ಷ ಪರಿಹಾರವನ್ನು ಕಡ್ಡಾಯವಾಗಿ ನೀಡಬೇಕು” ಎಂದು ಹೇಳಿದ್ದಾರೆ.

“ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರ, ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಭವಿಷ್ಯವನ್ನೇ ನಾಶ ಮಾಡಲು ಹೊರಟಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

“ಮೊದಲು ಕೊರೊನಾ ಸಾವಿನ ಸಂಖ್ಯೆಯನ್ನು ಸುಳ್ಳು ಲೆಕ್ಕ ನೀಡಿ ಕಡಿಮೆ ತೋರಿಸಿದಿರಿ, ಈಗ ಪರಿಹಾರದ ಮೊತ್ತವನ್ನು ಕೂಡಾ ಕಡಿತಗೊಳಿಸಿ ಸತ್ತವರ ಜೊತೆ ಬದುಕಿರುವ ಅವರ ಕುಟುಂಬವನ್ನೂ ಸಾಯಿಸಲು ಹೊರಟಿದ್ದೀರಿ. ನೊಂದವರ ಶಾಪ ಸರ್ಕಾರಕ್ಕೆ ತಟ್ಟದೆ ಇರಲಾರದು. ಕೆಪಿಸಿಸಿ ನಡೆಸಿರುವ ಸಮೀಕ್ಷೆಯ ಪ್ರಕಾರ ಕೊರೊನಾ ಸಾವಿನ ಸಂಖ್ಯೆ 3.17 ಲಕ್ಷ. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಅವರ ಸಮೀಕ್ಷೆ ಪ್ರಕಾರ ಇದು ಮೂರುವರೆಯಿಂದ ನಾಲ್ಕು ಲಕ್ಷ. ರಾಜ್ಯ ಸರ್ಕಾರ 37,603 ಸೋಂಕಿತರು ಮಾತ್ರ ಸತ್ತಿದ್ದಾರೆ ಎಂದು ಸುಳ್ಳು ಲೆಕ್ಕ ನೀಡಿದೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳನ್ನಾದರೂ ಕೊಡಲೇಬೇಕು ಎಂದು ಒತ್ತಾಯಿಸಿದ್ದೆವು. ಒಕ್ಕೂಟ ಸರ್ಕಾರವು ದಿನಾಂಕ 14-03-2020 ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ 4 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶ ಹೊರಡಿಸಿ ಅದೇ ಆದೇಶವನ್ನು ದಿನ ಮಾರ್ಪಡಿಸಿಕೊಂಡಿದೆ” ಎಂದು ಅವರು ನೆನಪಿಸಿಕೊಂಡಿದ್ದಾರೆ.

“ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ ಮರಣ ಹೊಂದಿದವರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ. ಆದರೆ ದಿನಾಂಕ; 28-09-2021 ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟರೆ, ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ ರೂ. 1 ಲಕ್ಷ ಮತ್ತು ಒಕ್ಕೂಟ ಸರ್ಕಾರದಿಂದ ರೂ. 50,000 ನೀಡುವುದಾಗಿ ಆದೇಶ ಹೊರಡಿಸಲಾಗಿದೆ” ಎಂದು ಅವರು ಅವರು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

“ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ದುರುದ್ದೇಶದಿಂದಲೇ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಿವೆ. ಕೋವಿಡ್ ಸೋಂಕು ಹೆಚ್ಚಿದ್ದಾಗ ಸರ್ಕಾರ ಸಮರ್ಪಕವಾದ ಚಿಕಿತ್ಸಾ ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತೆ ಮಾಡಿ, ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳುತ್ತಿವೆ. ಸರ್ಕಾರದ ಈ ನಡೆ ಅಮಾನವೀಯವಾಗಿದೆ” ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದ್ದಾರೆ.

“ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕೆಂಬ ನಿಯಮವನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ ಕೇವಲ ರೂ. 1.5 ಲಕ್ಷ (ಕೇಂದ್ರ, ರಾಜ್ಯಗಳೆರಡೂ ಸೇರಿ) ನೀಡಲಾಗುವುದೆಂದು ಹೇಳುತ್ತಿದೆ.
ರಾಜ್ಯ ಸರ್ಕಾರಗಳಿಗೆ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರವು ಒಕ್ಕೂಟ ಸರ್ಕಾರದಿಂದ ಆಗ್ರಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಿಂದ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...