Homeಕರ್ನಾಟಕಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

ಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

- Advertisement -
- Advertisement -

ಕೊಪ್ಪಳದ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ದೇವಾಸ್ಥಾನ ಪ್ರವೇಶಿಸಿದಕ್ಕೆ ದಂಡ ಹಾಕಿದ್ದ ಪ್ರಕರಣವನ್ನು ಬಯಲಿಗೆಳೆದ ವರದಿಗಾರನಿಗೆ ಜೀವಭಯ ಇದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಸ್ಥಳೀಯ ಸುದ್ದಿವಾಹಿನಿ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ತಮಗೆ ಜೀವ ಭಯ ಇದೆ ಎಂದು ರಕ್ಷಣೆ ನೀಡುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸುದ್ದಿವಾಹಿನಿಯ ಸುದ್ದಿ ಸಂಪಾದಕರು ಮತ್ತು ದಲಿತ ಮುಖಂಡರ ಜೊತೆಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇದನ್ನು ಸೆ.24 ರಂದು ಜಿಬಿ ನ್ಯೂಸ್ ವರದಿಗಾರ ಸುಂದರರಾಜ್ ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಸ್ಥಳೀಯರಿಂದ ದೂರವಾಣಿ ಕರೆ ಮೂಲಕ ಮಾಹಿತಿ ಪಡೆದಿದ್ದ ಸುಂದರರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳಿಯರನ್ನು ಮಾತಾಡಿಸಿ, ವಿವರಗಳನ್ನು ವಿಡಿಯೋ ಮೂಲಕ ದಾಖಲು ಮಾಡಿಕೊಂಡು ಈ ಬಗ್ಗೆ ಸುದ್ದಿ ಮಾಡಿದ್ದರು. ಇದರಿಂದ ಮುಖ್ಯವಾಹಿನಿಯ ಮಾಧ್ಯಮಗಳು ಗಮನ ಕೊಟ್ಟವು. ಇದರ ಜೊತೆಗೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಅಸ್ಪೃಶ್ಯತೆ ಆಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ’ನಾನು ನಾಗನಕಲ್ ಪ್ರಕರಣವನ್ನು ಹೊರಗೆಳೆದ ಬಳಿಕ, ಕಳೆದೆರಡು ದಿನಗಳಿಂದ ಅಪರಿಚಿತ ವಾಹನಗಳು ನನ್ನ ವಾಹನವನ್ನು ಹಿಂಬಾಲಿಸುತ್ತಿವೆ. ಹೀಗಾಗಿ ನಾನು ಆತಂಕಗೊಂಡು ಪೊಲೀಸರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ಯಾರು ಕರೆ ಮಾಡಿ ಅಥವಾ ಎದುರು ಬಂದು ಬೆದರಿಕೆ ಹಾಕಿಲ್ಲ. ಆದರೆ, ನಾನು ಓಡಾಡುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಅನುಭವ ಆಯಿತು. ಮುನ್ನೆಚ್ಚರಿಕೆಯಾಗಿ ನಾನು ದೂರು ನೀಡಿದ್ದೇನೆ” ಎಂದಿದ್ದಾರೆ.

ಇನ್ನು ವರದಿಗಾರನಿಗೆ ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಮಹಿಳಾ ಮುನ್ನಡೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಕೋಮು ಸೌಹಾರ್ದತೆ ವೇದಿಕೆ ಬೆಂಬಲ ನೀಡಿವೆ.

“ಸಾಮಾಜಿಕ ಅವ್ಯವಸ್ಥೆ ಬಗ್ಗೆ ವರದಿ ಮಾಡಿದ ಜಿಬಿ ನ್ಯೂಸ್ ಟೀಮ್‌ಗೆ ರಕ್ಷಣೆ ನೀಡುವುದು ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ ಕೂಡ. ಪ್ರಾಮಾಣಿಕ ಮಾಧ್ಯಮ ಮಿತ್ರರ ಜೊತೆಗೆ ನಾವಿದ್ದೇವೆ” ಎಂದು
ಹೋರಾಟಗಾರ ಕರಿಯಪ್ಪ ಗುಡಿಮನಿ ಹೇಳಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ. ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...