Homeಮುಖಪುಟಜಿಎಸ್‌ಟಿ ಬಗ್ಗೆ ರಾಜ್ಯಗಳ ಭಯ ನಿಜವಾಗಿದೆ: ತಮಿಳುನಾಡು ಹಣಕಾಸು ಸಚಿವ

ಜಿಎಸ್‌ಟಿ ಬಗ್ಗೆ ರಾಜ್ಯಗಳ ಭಯ ನಿಜವಾಗಿದೆ: ತಮಿಳುನಾಡು ಹಣಕಾಸು ಸಚಿವ

- Advertisement -
- Advertisement -

‘ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಯಿಂದ ರಾಜ್ಯಗಳು ಸ್ವಾಯತ್ತತೆ ಕಳೆದುಕೊಳ್ಳುತ್ತದೆ ಎಂಬ ಭಯ ಈಗ ನಿಜವಾಗಿದೆ’, ಎಂದು ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಬುಧವಾರ ಹೇಳಿದ್ದಾರೆ. ಅವರು ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FICCI) ಆಯೋಜಿಸಿದ್ದ, ‘ದಕ್ಷಿಣ ಭಾರತ GST ಕಾನ್ಕ್ಲೇವ್‌’ನಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡುತ್ತಿದ್ದರು.

“ನನಗೆ ಸ್ಪಷ್ಟವಾದ ಒಂದು ವಿಷಯವೇನೆಂದರೆ, ಸ್ವಾಯತ್ತತೆಯ ಕಳೆದುಕೊಳ್ಳುವ ಭಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದೇನೆ. ತೆರಿಗೆ ವಿಧಿಸುವ ವಿಷಯಗಳಲ್ಲಿ ರಾಜ್ಯಗಳಿಗೆ ಈಗ ಬಹಳ ಕಡಿಮೆ ಸ್ವಾತಂತ್ರ್ಯವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

“ದೇಶದ ಕಾನೂನಿನ ಪ್ರಕಾರ, ನಮ್ಮ ಕೆಲಸವನ್ನು ಈಗ ದೃಢವಾಗಿ, ವಿಶ್ವಾಸಾರ್ಹವಾಗಿ, ಸಾಧ್ಯವಾದಷ್ಟು ಹೆಚ್ಚಿನ ಉಪಯುಕ್ತತೆಯನ್ನಾಗಿ ಮಾಡಬೇಕು. ಜಿಎಸ್‌ಟಿಯ ನಿರ್ಬಂಧಗಳ ಒಳಗೆ, ವ್ಯವಸ್ಥೆಗಳ ಸುಧಾರಣೆಯ ವಿಷಯದಲ್ಲಿ ಸಾಕಷ್ಟು ವಿಷಯಗಳು ತಲೆಕೆಳಗಾಗಿದೆ” ಎಂದು ಅವರು ಹೇಳಿದ್ದಾರೆ.

ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಕೂಡಾ ತ್ಯಾಗರಾಜನ್‌ ಅವರ ಹೇಳಿಕೆಯನ್ನೇ ಪ್ರತಿಧ್ವನಿಸಿ, ಜಿಎಸ್ಟಿ ಫೆಡರಲಿಸಂನ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. “ಜಿಎಸ್‌ಟಿ ಬಗ್ಗೆ ನಾವು ಏನು ಅಂದುಕೊಂಡಿದ್ದೆವೋ ಅದುವೆ ಪ್ರಾಯೋಗಿಕವಾಗಿ ಆಗುತ್ತಿದೆ” ಎಂದು ಹೇಳಿದ ಅವರು, ಜಿಎಸ್‌ಟಿಯಿಂದಾಗಿ ರಾಜ್ಯ ಸರ್ಕಾರಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. 2022 ರ ಜುಲೈ ತಿಂಗಳಿನಿಂದ ಆದಾಯದ ನಷ್ಟಕ್ಕೆ ರಾಜ್ಯಗಳಿಗೆ ಒಕ್ಕೂಟ ಸರ್ಕಾರದಿಂದ ಪರಿಹಾರ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ನೀತಿ ಮತ್ತು ರಾಜ್ಯಗಳ ಬಗೆಗಿನ ಧೋರಣೆಯನ್ನು ಸಮಸ್ಯೆಯೆಂದು ದೂಷಿಸಿದ ಅವರು, ಬಲಿಷ್ಠ ಆರ್ಥಿಕತೆಗಾಗಿ ಉದ್ಯಮಗಳು ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ: ಲಾಕ್‌ಡೌನ್‌ ನಂತರ ಮೊದಲ ಬಾರಿಗೆ 1.05 ಲಕ್ಷ ಕೋಟಿ ಸಂಗ್ರಹ!

ಕರ್ನಾಟಕ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಅವರು, “ಜಿಎಸ್‌ಟಿಯಲ್ಲಿ ಇನ್ನೂ ಕೆಲವು ಪ್ರಮುಖ ಸಮಸ್ಯೆಗಳಿದ್ದು, ಅದನ್ನು ಪರಿಹರಿಸಬೇಕಾಗಿದೆ” ಎಂದು ಹೇಳಿದ್ದಾರೆ. ಆದರೆ, ಜಿಎಸ್‌ಟಿಯಿಂದಾಗಿ ತೆರಿಗೆ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆ ಉಂಟಾಗಿದೆ. ಇಂತಹ ಪ್ರಮುಖ ತೆರಿಗೆ ಸುಧಾರಣೆಗೆ ನಾಂದಿ ಹಾಡಿದ ಪ್ರಧಾನಿ, ಒಕ್ಕೂಟ ಸರ್ಕಾರದ ಹಣಕಾಸು ಸಚಿವರು ಮತ್ತು ಜಿಎಸ್‌ಟಿ ಕೌನ್ಸಿಲ್ ಸದಸ್ಯರಿಗೆ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಎಫ್ಐಸಿಸಿಐ ತೆಲಂಗಾಣ ಅಧ್ಯಕ್ಷ ಟಿ.ಮುರಳೀಧರನ್ ಅವರು ಮಾತನಾಡಿ, “ಈ ಸಭೆಯು ಜಿಎಸ್‌ಟಿಯಲ್ಲಿ ಒಕ್ಕೂಟ ಸರ್ಕಾರ ಮತ್ತು ರಾಜ್ಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಪ್ರಯತ್ನವಾಗಿದೆ. ಜಿಎಸ್‌ಟಿ ಹಂಚಿಕೆ ಸೂತ್ರದಲ್ಲಿ ದಕ್ಷಿಣದ ರಾಜ್ಯಗಳಿಗೆ ಬೃಹತ್‌ ಮಟ್ಟದಲ್ಲಿ ಸೋಲುಂಡಿದೆ” ಎಂದು ಹೇಳಿದ್ದಾರೆ.

ಎಫ್ಐಸಿಸಿಐ ಪ್ರಸ್ತುತ ನಡೆದ ಚರ್ಚೆಯ ಆಧಾರದ ಮೇಲೆ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.

ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...