Homeಮುಖಪುಟ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

- Advertisement -
- Advertisement -

ಒಕ್ಕೂಟ ಸರ್ಕಾರವು ಬುಧವಾರವಷ್ಟೇ ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪಿಎಂ ಪೋಷಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

‘ತಿಥಿ ಭೋಜನ’ ಯೋಜನೆಯನ್ನು ಗುಜರಾತ್ ರಾಜ್ಯದಲ್ಲಿ ಮೊದಲು ಆರಂಭಿಸಲಾಗಿತ್ತು. ಗುಜರಾತ್‌ನಲ್ಲಿ ಈ ಯೋಜನೆ ಯಶಸ್ವಿಯಾದ ನಂತರ, ಒಕ್ಕೂಟ ಸರ್ಕಾರವು ಈ ಯೋಜನೆಯನ್ನು ಎಲ್ಲಾ ರಾಜ್ಯಗಳಲ್ಲಿ ಆರಂಭಿಸಲು ನಿರ್ದೇಶಿಸಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧುಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಗೌತಮ್ ಮಾಚಯ್ಯ ಅವರು, “Tika ಉತ್ಸವದ ನಂತರ ಈಗ ತಿಥಿ ಭೋಜನ ಪ್ರಾರಂಭವಾಗಿದೆ. ದೇಶದ ವೈವಿಧ್ಯತೆಯನ್ನು ಮರೆತು ನೀವು ಒಂದು ಭಾಷೆಯನ್ನು ಮುಂದೆ ತಂದಾಗ ಇದು ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಪಲ್ಲವಿ ಇಡೂರು ಅವರು, “ತಿಥಿ ಭೋಜನ, ಒಂದು ದೇಶ, ಒಂದು ಭಾಷೆಯ ಅಡ್ಡ ಪರಿಣಾಮ! ಮಧ್ಯಾಹ್ನದ ಊಟದ ಯೋಜನೆಯನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಅದರ ಪ್ಯಾಕೇಜ್ ಅನ್ನು ವಿಚಿತ್ರವಾದ ಹೆಸರುಗಳೊಂದಿಗೆ ಉಲ್ಲೇಖಿಸಲಾಗಿದೆ !” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆನಂದ ಗುಂಡುರಾವ್ ಅವರು, “Tika ಉತ್ಸವದಿಂದ ತಿಥಿ ಭೋಜನದವರೆಗೆ. ಕನ್ನಡ ಭಾಷೆಯಲ್ಲಿ ತಿಥಿ ಭೋಜನ ಎಂದರೆ ಶ್ರಾದ್ಧದ ಊಟಕ್ಕೆ ಸಮಾನವಾಗಿದೆ” ಎಂದು ಹೇಳಿದ್ದಾರೆ.

ಭರತ್ ಪಿ ಅವರು, “ವಾವ್ ಹಬ್ಬದ ದಿನ ‘ತಿಥಿ ಭೋಜನ’…! ಇದನ್ನು ಸಂಪ್ರದಾಯವಾದಿಗಳು ಒಪ್ಪುತ್ತಾರ. ಹುಚ್ಚರ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಎಂ. ಅವರು, “Tika ಉತ್ಸವ ಆಯ್ತು, ಈಗ ತಿಥಿ ಭೋಜನ ಅಂತೆ. ಕನ್ನಡಿಗರದು ಎಂತಾ ಪುಣ್ಯ! ನಮ್ಮ ರಾಜ್ಯದ ನಾಯಕರಿಗೆ ಕನಿಷ್ಠ ನಾಡಿಗೆ ಇರಬೇಕಾದ ಸ್ವಾಯತ್ತತೆ ಬಗ್ಗೆ ಕಿಂಚಿತ್ತಾದರೂ ಅರಿವಿದಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...