Homeಮುಖಪುಟವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

ವಿವಾದಗಳಿಂದ ಸುದ್ದಿಯಾಗಿದ್ದ ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

- Advertisement -
- Advertisement -

ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ ಮತ್ತು ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುನಿರೀಕ್ಷಿತ ಗಂಗೂಬಾಯಿ ಕಾಥಿಯಾವಾಡಿ ಚಲನಚಿತ್ರ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ವಿವಾದಗಳಿಂದ ಸುದ್ದಿಯಾಗಿದ್ದ ಈ ಚಿತ್ರವು ಮುಂದಿನ ವರ್ಷ ಜನವರಿ 6 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ ಎಂದು ಚಿತ್ರ ತಂಡ ಘೋಷಿಸಿದೆ.  ಕೊರೊನಾ ಕಾರಣದಿಮದ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರಗಳು ತೆರೆಯುವ ಘೋಷಣೆಯಾಗುತ್ತಿದಂತೆ ಸಾಲು ಸಾಲು ಚಿತ್ರಗಳು ತೆರೆ ಕಾಣಲು ಸಜ್ಜಾಗಿವೆ.

ಗಂಗೂಬಾಯಿ ಕಾಥಿಯಾವಾಡಿ ಚಿತ್ರ ಈ ವರ್ಷದ ಜುಲೈ 30 ರಂದು ಬಿಡುಗಡೆಯಾಗಬೇಕಿತ್ತು, ಆದರೆ ಮುಂದೂಡಲ್ಪಟ್ಟಿತ್ತು. ಈ ಚಿತ್ರ ಓಟಿಟಿ ವೇದಿಕೆಗಳಲ್ಲಿ ಬಿಡುಗಡೆಯಾಗುವ ವದಂತಿಗಳು ಹರಡಿದ್ದ ಹಿನ್ನೆಲೆ ಸ್ಪಷ್ಟನೆ ನೀಡಿದ್ದ ಚಿತ್ರ ನಿರ್ಮಾಣ ಸಂಸ್ಥೆ ಪಿಇಎನ್ ಇಂಡಿಯಾ ಲಿಮಿಟೆಡ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ನಟಿ ಆಲಿಯಾ ಭಟ್ ಗಂಗೂಬಾಯಿಯಾಗಿ ಕಾಣಿಸಿಕೊಂಡಿದ್ದಾರೆ. 1960 ರ ಸಮಯದಲ್ಲಿ ಮುಂಬೈನ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತರಲ್ಲಿ ಒಬ್ಬರು ಗಂಗೂಬಾಯಿ ಎನ್ನಲಾಗಿದೆ. ಈ ಚಲನಚಿತ್ರವು ಎಸ್. ಹುಸೇನ್ ಜೈದಿ ಅವರ “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ.

ಈ ವರ್ಷದ ಮಾರ್ಚ್‌ನಲ್ಲಿ ಗಂಗೂಬಾಯಿ ಕಾಥಿಯಾವಾಡಿಯವರ ದತ್ತು ಪುತ್ರ ಎಂದು ಹೇಳಿಕೊಳ್ಳುವ ಬಾಬೂಜೀ ಶಾ, ಬಾಲಿವುಡ್ ನಟಿ ಆಲಿಯಾ ಭಟ್, ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಮತ್ತು ಬನ್ಸಾಲಿ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಚಲನಚಿತ್ರವು “ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬಯಿ” ಕಾದಂಬರಿಯಿಂದ ಸ್ಫೂರ್ತಿ ಪಡೆದಿದೆ ಎಂದು ಬಾಬೂಜೀ ಶಾ ಹೇಳಿದ್ದಾರೆ. ಈ ಕಾದಂಬರಿಯ ಕೆಲವು ಭಾಗಗಳು ಮಾನಹಾನಿಕರವಾಗಿದ್ದು, ಗಂಗೂಬಾಯಿ ಕಾಥಿಯಾವಾಡಿಯವರ ಪ್ರತಿಷ್ಠೆಗೆ ಕಳಂಕ ತರುತ್ತವೆ. ಆಕೆಯ ಖಾಸಗಿತನದ ಹಕ್ಕಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದರು.

All about 'Matriarch of Kamathipura' Gangubai Kathiawadi, the woman who Alia Bhatt plays in Sanjay Leela Bhansali's film

ವಿಚಾರಣೆಯಲ್ಲಿ ಬನ್ಸಾಲಿ ಮತ್ತು ಆಲಿಯಾ ಭಟ್ ಪರ ಹಾಜರಾಗಿದ್ದ ಹಿರಿಯ ವಕೀಲ ಆಬಾದ್ ಪೊಂಡಾ, ಬಾಬೂಜೀ ಶಾ ಅಸ್ತಿತ್ವದ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ವಾದಿಸಿದ್ದರು. ಇತ್ತ ಮತ್ತೊಂದು ಹೈಕೋರ್ಟ್ ಪೀಠ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿತ್ತು. ಈಗ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಿಸಿದೆ.


ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...