Homeಮುಖಪುಟಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

ಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

- Advertisement -
- Advertisement -

ಕಳೆದ ವರ್ಷ ಅಕ್ಟೋಬರ್‌ 5 ರಂದು ಉತ್ತರ ಪ್ರದೇಶದ ಹತ್ರಾಸ್‌‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ ರವರನ್ನು ದೇಶದ್ರೋಹದ ಮೇಲೆ ಬಂಧಿಸಿ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅವರು ‘ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು’ ಎಂಬುದೇ ಅವರ ವಿರುದ್ಧ ಸಾಕ್ಷ್ಯ ಎಂದು ಪರಿಗಣಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಸಿದ್ದೀಕ್ ಕಪ್ಪನ್‌ ಜವಾಬ್ದಾರಿಯುತ ಪತ್ರಕರ್ತನಂತೆ ಬರೆದಿಲ್ಲ. ಅವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ, ಮಾವೋವಾದಿಗಳು ಮತ್ತು ಕಮ್ಯುನಿಷ್ಟರ ಬಗ್ಗೆ ಸಿಂಪಥಿ ತೋರುವ ಲೇಖನಗಳನ್ನು ಮಾತ್ರ ಬರೆದರು ಎಂದು ಅವರು ವಿರುದ್ಧ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ಒಟ್ಟು 5000 ಪುಟಗಳ ಚಾರ್ಜ್‌ ಶೀಟ್ ಕೇಸ್‌ ಡೈರಿಯನ್ನು ಸಹ ಒಳಗೊಂಡಿದ್ದು, ಅವರು ಮಲೆಯಾಳಂ ಮಾಧ್ಯಮಗಳಿಗೆ ಬರೆದ 36 ಲೇಖನಗಳನ್ನು ಸಾಕ್ಷ್ಯಗಳಾಗಿ ಬಳಸಲಾಗಿದೆ. ಅವುಗಳಲ್ಲಿ ಕೋವಿಡ್ ಸಂದರ್ಭದಲ್ಲಿ ನಡೆದ ನಿಜಾಮುದ್ದೀನ್ ಮರ್ಕಜ್ ಸಭೆ, ಸಿಎಎ ವಿರೋಧಿ ಹೋರಾಟಗಳು, ದೆಹಲಿ ಗಲಭೆ, ರಾಮಜನ್ಮಭೂಮಿ ವಿವಾದ ಮತ್ತು ಶಾರ್ಜಿಲ್ ಇಮಾಮ್ ವಿರುದ್ಧ ಚಾರ್ಜ್‌ಶೀಟ್‌ ಕುರಿತ ಲೇಖನಗಳು ಮುಖ್ಯವಾದವುಗಳಾಗಿವೆ.

“ಅಲಿಘರ್ ಮುಸ್ಲಿಂ ವಿವಿಯಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆ ಕುರಿತು, ಮುಸ್ಲಿಮರನ್ನು ಪೊಲೀಸರು ಥಳಿಸಿದರು, ಪಾಕಿಸ್ತಾನಕ್ಕೆ ಹೋಗುವಂತೆ ನಿಂದಿಸಲಾಯಿತು” ಎಂದು ಬರೆದಿದ್ದಾರೆ. ಅಲ್ಲದೆ ದೆಹಲಿ ಗಲಭೆ ಸಂದರ್ಭದಲ್ಲಿ ಮುಸ್ಲಿಮರನ್ನು ಹೆಸರನ್ನು ಬಳಸಿ ಅವರು ಪ್ರಚೋದನೆಗೊಳ್ಳುವಂತೆ ಮಾಡಿದ್ದಾರೆ. ಒಟ್ಟಿನಲ್ಲಿ ಇವರು ಕೇವಲ ಮುಸ್ಲಿಮರನ್ನು ಪ್ರಚೋದಿಸುವ ಲೇಖನಗಳನ್ನೆ ಬರೆದಿದ್ದಾರೆ. ಇದು ಪಿಎಫ್ಐ ಸಂಘಟನೆಯ ಅಜೆಂಡಾವಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ದೂರಲಾಗಿದೆ. ಇದನ್ನು ಏಪ್ರಿಲ್‌ನಲ್ಲಿ ಸಲ್ಲಿಸಲಾಗಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಬಳಸಿಕೊಂಡು ಗಲಭೆ ಸೃಷ್ಟಿಸಲು ಪಿಎಫ್‌ಐ ಬಯಸಿತ್ತು. ಸಿದ್ದೀಕ್ ಕಪ್ಪನ್ ಆ ಸಂಘಟನೆಯ ಥಿಂಕ್ ಟ್ಯಾಂಕ್ ಥರ ಕೆಲಸ ಮಾಡುತ್ತಿದ್ದರು. ಅವರು ನಿಷೇಧಿತ ಸಂಘಟನೆ ಸಿಮಿ ನಡೆಸಿದ ಭಯೋತ್ಪಾದನೆಯನ್ನು ನಿರಾಕರಿಸಲು ಪ್ರಯತ್ನಿಸಿದ್ದಾನೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಕಪ್ಪನ್ ಪ್ರಚೋದಿಸಿದ್ದಾರೆ ಎಂಬುದಕ್ಕೆ ಇಬ್ಬರು ಸಾಕ್ಷಿಗಳನ್ನು ಸಹ ಒದಗಿಸಲಾಗಿದೆ.

ಇದನ್ನು ಕಪ್ಪನ್ ವಕೀಲರು ತೀವ್ರವಾಗಿ ವಿರೋಧಿಸಿದ್ದಾರೆ. ಘಟನೆ ನಡೆದ ಉತ್ತರ ಪ್ರದೇಶ ಹತ್ರಾಸ್ ಸ್ಥಳದಲ್ಲಿ ಸಿದ್ದೀಕ್ ಕಪ್ಪನ್ ಇರಲೇ ಇಲ್ಲ. ಘಟನೆ ನಡೆದ ಎರಡು ದಿನಗಳ ನಂತರ ಹತ್ರಾಸ್‌ಗೆ ಹೋಗುವ ದಾರಿಯಲ್ಲಿ ಅವರನ್ನು ಬಂಧಿಸಲಾಯಿತು. ಹೀಗಿದ್ದಾಗ ಅವರು ಅಲ್ಲಿ ಗಲಭೇ ಪ್ರಚೋದಿಸಲು ಸಾಧ್ಯವೇ ಇಲ್ಲ. ಅವರು ಸ್ಥಳಕ್ಕೆ ಹೋಗದಿದ್ದರೆ ಅವರ ವಿರುದ್ಧ ಸಾಕ್ಷಿಗಳು ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಪತ್ರಕರ್ತ ಸಿದ್ದೀಕ್ ಕಪ್ಪನ್ ಮತ್ತು ಇತರ ಮೂವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಜೂನ್ 16 ರಂದು ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.ನ ಯುಎಪಿಎ ಅಡಿಯಲ್ಲಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...