Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...