Homeಮುಖಪುಟಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಮತ್ತೊಂದು ಉದ್ದಿಮೆಯನ್ನು ಕೈಚೆಲ್ಲಿದ ಸರ್ಕಾರ: ಟಾಟಾ & ಸನ್ಸ್‌ ತೆಕ್ಕೆಗೆ ಏರ್‌ ಇಂಡಿಯಾ?

ಟಾಟಾ ಏ‌‌ರ್‌ಲೈನ್ಸ್‌ ಸಂಸ್ಥೆಯು ಕಾಲನಂತರದಲ್ಲಿ ಏರ್‌ ಇಂಡಿಯಾ ಸಂಸ್ಥೆಯಾಗಿ ಬದಲಾಗಿತ್ತು. ನಷ್ಟದಲ್ಲಿದ್ದ ಸಂಸ್ಥೆಯನ್ನು ಮೇಲೆತ್ತುವಲ್ಲಿ ಸೋತಿರುವ ಕೇಂದ್ರ ಸರ್ಕಾರ, ಟಾಟಾ ಅಂಡ್‌ ಸನ್ಸ್‌‌ಗೆ ಏರ್‌ ಇಂಡಿಯಾವನ್ನು ಒಪ್ಪಿಸಲು ಹೊರಟಿದೆ.

- Advertisement -
- Advertisement -

ಚೇತರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಏರ್‌ ಇಂಡಿಯಾ ಸಂಸ್ಥೆಯನ್ನು ‘ಸಾಲ್ಟ್‌ ಟು ಸಾಫ್ಟ್‌ವೇರ್‌’ವರೆಗಿನ ವಿರಾಟ್‌ ಸಂಸ್ಥೆಯೆಂದೇ ಖ್ಯಾತವಾದ ಟಾಟಾ ಸಂಸ್ಥೆಗೆ ವಹಿಸಲಾಗುತ್ತಿದೆ ಎನ್ನಲಾಗಿದೆ. ವಿನ್ನಿಂಗ್‌ ಬಿಡ್ಡರ್‌ ಆಗಿ ಟಾಟಾ ಅಂಡ್‌ ಸನ್ಸ್‌ ಸಂಸ್ಥೆ ಆಯ್ಕೆಯಾಗಿದೆ ಎಂದು ವರದಿಯಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಸ್ಥಾಪಿತವಾಗಿದ್ದು ಟಾಟಾ ಸಂಸ್ಥೆಯಿಂದ. ಟಾಟಾ ಏರ್‌‌ಲೈನ್ಸ್ ಎಂದು ಸ್ಥಾಪಿತವಾದದ್ದು, ಸರ್ಕಾರದ ಒಡೆತನಕ್ಕೆ ಬಂದ ಮೇಲೆ ಏ‌ರ್‌ ಇಂಡಿಯಾ ಆಗಿತ್ತು. ಅರ್ಧ ಶತಮಾನದ ಬಳಿಕ ಏರ್‌‌ಇಂಡಿಯಾ ಸಂಸ್ಥೆ ಮತ್ತೆ ಟಾಟಾ & ಸನ್ಸ್‌‌ ಸಂಸ್ಥೆಯ ತೆಕ್ಕೆಗೆ ಒಳಪಡುತ್ತಿದೆ ಎಂದು ಉತ್ನತ ಮೂಲಗಳು ಹೇಳಿವೆ.

ಇದನ್ನೂ ಓದಿ: ಸಾರ್ವಜನಿಕ ಉದ್ದಿಮೆಗಳ ಮಾರಾಟ : ಕೇಂದ್ರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಟಾಟಾ & ಸನ್ಸ್‌‌ನ ಉದ್ಯಮಿ ಅಜಯ್‌ ಸಿಂಗ್‌‌ ಅವರಿಂದ ಬಂದಿದ್ದ ಆಹ್ವಾನವನ್ನು ಅಧಿಕಾರಿಗಳು ಸಚಿವರ ಪ್ಯಾನಲ್‌ ಮುಂದೆ ಇಟ್ಟಿದ್ದು, ಸಚಿವರುಗಳು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ವಿಷಯವನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಸಾಧ್ಯತೆ ಇದೆ ಎಂದು ‌ಮೂಲಗಳು ತಿಳಿಸಿವೆ.

“ನಾಗರಿಕ ವಿಮಾನಯಾನ ಸಚಿವಾಲಯದ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಹಣಕಾಸು ಸಚಿವಾಲಯದ ವಕ್ತಾರರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಟಾಟಾ ಸನ್ಸ್‌ನ ಪ್ರತಿನಿಧಿಯು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ” ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

1932ರಲ್ಲಿ ಕೈಗಾರಿಕಾ ಕ್ಷೇತ್ರದ ದಂತಕತೆ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಆರಂಭಿಸಿದ್ದರು. ಮುಂದೆ ಅದು ಏರ್‌ ಇಂಡಿಯಾ ಆಯಿತು. ಭಾರತದ ಮೊದಲ ಪರವಾನಗಿ ಪಡೆದ ಪೈಲಟ್‌ ಜೆಆರ್‌ಡಿ ಟಾಟಾ ಅವರಾಗಿದ್ದರು. ವಾಣಿಜ್ಯೋದ್ಯಮವಾಗಿ ಏರ್‌ಲೈನ್ಸ್‌ ಮಾರ್ಪಟ್ಟಿತು. 1940ರ ಅವಧಿಯಲ್ಲಿ ಸಾರ್ವಜನಿಕ ಕ್ಷೇತ್ರವಾಗಿ ಬದಲಾಯಿತು. ಶ್ರೀಮಂತರನ್ನು ಸೆಳೆಯಿತು. ಬಾಲಿವುಡ್‌ ನಟಿಯರ ಮೂಲಕ ಜಾಹೀರಾತು ನೀಡಿ, ಪ್ರಯಾಣಿಕರನ್ನು ಸೆಳೆಯಲಾಗುತ್ತಿತ್ತು.

1990ರ ಬಳಿಕ ಖಾಸಗಿಯವರು ಏರ್‌ಲೈನ್‌ ಆರಂಭಿಸಿ ಕಡಿಮೆ ವೆಚ್ಚದಲ್ಲಿ ವಿಮಾನ ಹಾರಾಟ ಆರಂಭಿಸಿದರು. ಏ‌‌ರ್‌ ಇಂಡಿಯಾ ನಷ್ಟಕ್ಕೆ ಜಾರಿತು. ಏರ್ ಇಂಡಿಯಾ 2007ರಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಏರ್‌ಲೈನ್ಸ್ ಲಿಮಿಟೆಡ್‌ನೊಂದಿಗೆ ವಿಲೀನಗೊಂಡ ನಂತರ, ನಷ್ಟಗಳು ಇನ್ನೂ ಹೆಚ್ಚಾಗತೊಡಗಿದವು. ಸುಮಾರು 600 ಬಿಲಿಯನ್ ರೂಪಾಯಿ ಸಾಲವನ್ನು ಏರ್‌ ಇಂಡಿಯಾ ಹೊಂದಿದೆ ಎನ್ನಲಾಗಿದೆ.

2013ರ ಹೊತ್ತಿಗೆ, ದೇಶದ ಅಂದಿನ ನಾಗರಿಕ ವಿಮಾನಯಾನ ಸಚಿವರು ಖಾಸಗೀಕರಣವು ಅದರ ಉಳಿವಿಗೆ ಮುಖ್ಯ ಎಂದು ಹೇಳಿದ್ದರು. 2017ರಲ್ಲಿ ಸರ್ಕಾರವು ಆ ಮಾರ್ಗವನ್ನು ಅನುಮೋದಿಸಿತು ಮತ್ತು ಪ್ರಕ್ರಿಯೆಯನ್ನು ಆರಂಭಿಸಲು ಒಂದು ಸಮಿತಿಯನ್ನು ರಚಿಸಿತು. ಹೀಗೆ ಏರ್‌ ಇಂಡಿಯಾವನ್ನು ಖಾಸಗಿಯವರಿಗೆ ನೀಡುವ ಪ್ರಕ್ರಿಯೆ ಆರಂಭವಾದವು. ಏರ್‌ ಇಂಡಿಯಾ ಖಾಸಗಿಯವರ ತೆಕ್ಕೆಗೆ ಹೋಗುವ ಮೂಲಕ, ಮತ್ತೊಂದು ಸಾರ್ವಜನಿಕ ಸಂಸ್ಥೆಯನ್ನು ಸರ್ಕಾರ ಮಾರಿದಂತಾಗುತ್ತಿದೆ. ಆದರೆ, ಮಾಧ್ಯಮಗಳ ವರದಿಯನ್ನು ಸರ್ಕಾರ ನಿರಾಕರಿಸಿದ್ದು, ತಪ್ಪಾಗಿ ವರದಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ನಾಶಮಾಡುತ್ತಿರುವುದು ಅಕ್ಷಮ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...