Homeಮುಖಪುಟಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಏಷ್ಯಾದ 2 ನೇ ಶ್ರೀಮಂತ ವ್ಯಕ್ತಿಯಾಗಿ ‘ಅದಾನಿ’; ಒಂದು ದಿನದ ಆದಾಯ 1,002 ಕೋಟಿ!

ಇದೇ ಮೊದಲ ಬಾರಿಗೆ ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸಹೋದರರು ಕಾಣಿಸಿಕೊಂಡಿದ್ದಾರೆ.

- Advertisement -
- Advertisement -

ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಸಂಪತ್ತು ಕಳೆದ ಒಂದ ವರ್ಷದಲ್ಲಿ ನಾಲ್ಕು ಪಟ್ಟು ಹೆಚ್ಚಿದ್ದು, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಕಳೆದ ವರ್ಷ ಅವರ ಸಂಪತ್ತು  1.40 ಲಕ್ಷ ಕೋಟಿ ರೂ. ಇತ್ತು. ಈ ವರ್ಷಕ್ಕೆ ಅದು 5.05 ಲಕ್ಷ ಕೋಟಿಗೆ ರೂ. ಹೆಚ್ಚಾಗಿದೆ ಎಂದು ಗುರುವಾರ ಬಿಡುಗಡೆಯಾದ ‘IIFL ವೆಲ್ತ್‌‌ ಹುರುನ್‌ ಇಂಡಿಯಾ ರಿಚ್‌- 2021’ ರ ಪಟ್ಟಿ ಹೇಳಿದೆ.

ಈ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ (RIL) ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಸತತ ಹತ್ತು ವರ್ಷಗಳಲ್ಲೂ ಅಗ್ರ ಸ್ಥಾನ ಕಾಯ್ದಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಅವರು ಒಟ್ಟು 7.18 ಲಕ್ಷ ಕೋಟಿ ರೂ. ಆದಾಯ ಗಳಿಸಿಕೊಂಡಿದ್ದಾರೆ ಎಂದು ಪಟ್ಟಿ ಹೇಳಿದೆ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ತೆರಿಗೆ ವಿಧಿಸಿ, ಬಡಜನರಿಗೆ ಪರಿಹಾರ ಒದಗಿಸಿ: ರಾಜ್ಯಾದ್ಯಂತ ಜನಾಗ್ರಹ ಪ್ರತಿಭಟನೆ

ಅದಾನಿ ಅವರು ಈ ವರ್ಷ ಚೀನಾದ ಬಾಟಲ್ ವಾಟರ್ ಉತ್ಪಾದಕ ಜಾಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಶ್ರೀಮಂತರಾಗಿದ್ದಾರೆ. ಅದಾನಿಯ ಒಂದು ದಿನದ ಆದಾಯ 1,002 ಕೋಟಿಗೆ ಏರಿದೆ ಎಂದು ವರದಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಅದಾನಿ ಸಹೋದರರು (ಗೌತಮ್ ಮತ್ತು ವಿನೋದ್ ಶಾಂತಿಲಾಲ್ ಅದಾನಿ) ಅಗ್ರ 10 ಶ್ರೀಮಂತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ವರದಿಯ ಪ್ರಕಾರ, ವಿನೋದ್ ಶಾಂತಿಲಾಲ್ ಅದಾನಿ ಅವರ ಸಂಪತ್ತು 1.31 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಅವರು ಪಟ್ಟಿಯ ಎಂಟನೇ ಸ್ಥಾನದಲ್ಲಿದ್ದಾರೆ.

ಹುರುನ್ ಇಂಡಿಯಾ ಶ್ರೀಮಂತ ಪಟ್ಟಿ-2021: ಈ ವರ್ಷ ಟಾಪ್ 10 ಶ್ರೀಮಂತ ಭಾರತೀಯರ ಪಟ್ಟಿ ಹೀಗಿದೆ

  • ಮುಖೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್): 7,18,000 ಕೋಟಿ ರೂ.
  • ಗೌತಮ್ ಅದಾನಿ (ಅದಾನಿ ಗ್ರೂಪ್): 5,05,900 ಕೋಟಿ ರೂ.
  • ಶಿವ್ ನಾಡಾರ್ (HCL): 2,36,600 ಕೋಟಿ ರೂ.
  • ಎಸ್ಪಿ ಹಿಂದುಜಾ (ಹಿಂದುಜಾ ಗ್ರೂಪ್): 2,20,000 ಕೋಟಿ ರೂ.
  • ಲಕ್ಷ್ಮಿ ಮಿತ್ತಲ್ (ಆರ್ಸೆಲರ್ ಮಿತ್ತಲ್): 1,74,400 ಕೋಟಿ ರೂ.
  • ಸೈರಸ್ ಪೂನವಲ್ಲ (ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ): 1,63,700 ಕೋಟಿ ರೂ.
  • ರಾಧಕಿಶನ್ ದಮಾನಿ (ಅವೆನ್ಯೂ ಸೂಪರ್ಮಾರ್ಟ್ಸ್): 1,54,300 ಕೋಟಿ ರೂ.
  • ವಿನೋದ್ ಶಾಂತಿಲಾಲ್ ಅದಾನಿ (ಅದಾನಿ ಗ್ರೂಪ್): 1,31,600 ಕೋಟಿ ರೂ.
  • ಕುಮಾರ್ ಮಂಗಳಂ ಬಿರ್ಲಾ (ಆದಿತ್ಯ ಬಿರ್ಲಾ): 1,22,200 ಕೋಟಿ ರೂ.
  • ಜೈ ಚೌಧರಿ (Zscaler): 1,21,600 ಕೋಟಿ ರೂ.

ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್ಯ

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಮ್ಯುನಿಷ್ಟ್‌ ಪಕ್ಷ(ಮಾರ್ಕ್ಸ್‌‌ವಾದಿ)ದ ಪಾಲಿಟ್‌ಬ್ಯೂರೋ ಸದಸ್ಯ ಸೀತಾರಾಮ್ ಯೆಚೂರಿ, “ನಿರುದ್ಯೋಗವು ಹೆಚ್ಚಾದಂತೆ, ಹಸಿವಿನ ಮಟ್ಟವು ಹೆಚ್ಚಾಗುತ್ತಿದೆ. ಬಡತನ ಮತ್ತು ಏರುತ್ತಿರುವ ಹಣದುಬ್ಬರವು ಜನರ ಜೀವನವನ್ನು ನಾಶಪಡಿಸುತ್ತಿದೆ. ಆದರೆ ಶ್ರೀಮಂತರು ಮಾತ್ರ ಇನ್ನೂ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಈ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ಸಂಪನ್ಮೂಲಗಳನ್ನು ಹೆಚ್ಚು ಮಾಡುವುದಕ್ಕಾಗಿ ಅತಿ ಶ್ರೀಮಂತರಿಗೆ ಹೆಚ್ಚು ತೆರಿಗೆ(ಸೂಪರ್‌ ರಿಚ್ ಟ್ಯಾಕ್ಸ್‌)ಯನ್ನು ಹಾಕುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ವರದಿ ಬಿಡುಗಡೆಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಉದ್ಯೋಗ ನಷ್ಟ ಮತ್ತು ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಆದಾಯ ಕುಸಿದಿದೆ. ಆದರೆ, ದೇಶದ ಉದ್ಯಮಪತಿಗಳ ಸಂಪತ್ತು ಹೆಚ್ಚಾಗುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶ್ರೀಮಂತರ ಪರವಾಗಿ ರೂಪಿಸುತ್ತಿರುವ ನೀತಿಗಳೇ ಕಾರಣ” ಎಂದು ಹಲವಾರು ಜನರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಲಿಯನೇರ್ ಬೂಮ್: ಶ್ರೀಮಂತರ ಜೇಬುಗಳನ್ನು ಸೇರಿದ ಕೋವಿಡ್ ಕ್ಯಾಷ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...