Homeಮುಖಪುಟ`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು' ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

`ಬಡವರು ಮುಟ್ಟಿದಾಗ ವ್ಯಾಸಲಿನ್ ಹಚ್ಚಿಕೊಂಡರು’ ಎಂದು ಸಚಿವ ಹೆಬ್ಬಾರ್‌ ಹೇಳಿದ್ದು ಯಾರಿಗೆ?

ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದಿದ್ದಾರೆ.

- Advertisement -
- Advertisement -

25ರಿಂದ 30 ವರ್ಷ ಮಂತ್ರಿಯಾಗಿ ಅಧಿಕಾರ ನಡೆಸಿದವರಿಂದ ಮುಂಡಗೋಡನ್ನು ಅಭಿವೃದ್ಧಿ ಮಾಡಲಾಗಲಿಲ್ಲ. ಈಗ ಮುಂಡಗೋಡಿನ ಬಗ್ಗೆ ಕಾಳಜಿ ಶುರುವಾಗಿದೆ. ಕೊರೊನಾ ನೆಪದಲ್ಲಿ ಮಗನನ್ನು ಮುಂದೆ ಮಾಡಿ ಕಿಟ್ ಹಂಚಿದ್ದಾರೆ. ಹಾಗಿದ್ದರೆ ಹಳಿಯಾಳದಲ್ಲಿ ಬಡವರಿಲ್ಲವಾ? ಬಡವರು ಮುಟ್ಟಿದಾಗ ಕಿಸೆಯಿಂದ ವ್ಯಾಸಲಿನ್ ತೆಗೆದು ಕೈಗೆ ಹಚ್ಚಿಕೊಳ್ಳುವವರಿಂದ ಬಡವರ ಉದ್ಧಾರ ಸಾಧ್ಯವಾ ಎಂದು ಉತ್ತರ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಸಚಿವ ಹೆಬ್ಬಾರ್  ಅವರು ತವರು ಕ್ಷೇತ್ರದ ಮುಂಡಗೋಡಿನಲ್ಲಿ ವಿವಿಧ ಕಾಮಗಾರಿ ಉದ್ಘಾಟಿಸಿ ಮಾತನಾಡಿದ್ದು, ಇಪ್ಪತ್ತೈದು ವರ್ಷ ಇಲ್ಲಿಯ ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿಲ್ಲ. ಈಗ ಮಗನನ್ನು ಮುಂಡಗೋಡಲ್ಲಿ ಓಡಾಡಿಸಿ ಬಣ್ಣದ ಮಾತುಗಳಿಂದ ಜನರನ್ನು ಮರುಳಾಗಿಸಲು ಹವಣಿಸುತ್ತದ್ದಾರೆ. ಬಡವರಿಗೆ ನೆರವಾಗುವ ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಬಡವರಿಗೆ ನೆರವಾಗುವ ಮನಸ್ಸಿದ್ದರೆ ಹಲವು ಬಾರಿ ಮಂತ್ರಿಯಾಗಿದ್ದವರು ಹಳಿಯಾಳದಲ್ಲೇ ಕಿಟ್ ಹಂಚಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಹೊತ್ತಲ್ಲಿ 12-13 ದಿನ ಈ ಕ್ಷೇತ್ರದಲ್ಲಿ ವಾಸ್ತವ್ಯ ಮಾಡಿದ್ದರಲ್ಲ, ಏನಾಯಿತು? ನನ್ನನ್ನು ಸೋಲಿಸಲಾಯಿತಾ? ಮುಂಡಗೋಡಿನ ಜನರ ಆರ್ಶೀವಾದ ನನ್ನ ಮೇಲಿದೆ. ಹೊಸ ನಾಯಕರೀಗ ಮುಂಡಗೋಡಲ್ಲಿ ತಿರುಗಾಡುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ ಇವರಿಗೆ ಬಡವರ ನೆನಪಾಗುತ್ತದೆ. 25 ವರ್ಷ ಏನೂ ಮಾಡದ ಇವರನ್ನು ನಂಬಬೇಡಿ. ಸುಳ್ಳು ಹೇಳಿ ಜನರನ್ನು ಕರೆದುಕೊಂಡು ಹೋಗಿ ಮಾಲೆ ಹಾಕಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆಲ್ಲ ಯಾರೂ ಹೆದರಬೇಕಾದ ಅವಶ್ಯಕತೆಯಿಲ್ಲ. ಹಣ ಬಲದಿಂದ ಯಾರನ್ನೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಿಮ್ಮನ್ನು ಕಾಪಾಡುವ ಶಕ್ತಿ ನನಗಿದೆ ಎಂದು ಸಚಿವ ಹೆಬ್ಬಾರ್ ಹೇಳಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಮನೆ ಮನೆಗೆ ಕಿಟ್ ಹಂಚಿದ್ದೇನೆ. 550 ಕೋಟಿ ರೂ.ಗಳ ನೀರಾವರಿ ಯೋಜನೆ ತಂದಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಪಣ ತೊಟ್ಟಿದ್ದೇನೆ. ಮುಸ್ಲಿಮರ ಮುಂದೆ ನಾನು ಬಿಜೆಪಿಯಲ್ಲಿವುದನ್ನು ಟೀಕಿಸಲಾಗುತ್ತಿದೆ. ಆದರೆ ನನ್ನಿಂದಾಗಲಿ, ಬಿಜೆಪಿಯಿಂದಾಗಲಿ ಮುಸ್ಲಿಮರಿಗೆ ತೊಂದರೆ ಆಗಿಲ್ಲ ಎಂದಿರುವ ಹೆಬ್ಬಾರ್, ನಾನು ಯಾವುದೇ ಪಕ್ಷದಲ್ಲಿರಲಿ ಕ್ಷೆತ್ರದ ಅಭಿವೃದ್ಧಿಯೇ ನನ್ನ ಅಭಿಲಾಶೆ ಎಂದು ಹೇಳಿದ್ದಾರೆ.

ಯಾರೋ ಬಂದು ಜಾತಿಯೋ ಇನ್ನೊಂದೊ ಎಂದು ಗೊಂದಲ ಮೂಡಿಸಿದರೆ ಏನೂ ಆಗುವುದಿಲ್ಲ. ಕಿಟಕಿಯಿಂದ ನೋಡಬೇಕಾದ ಮಂತ್ರಿ ನಾನಲ್ಲ. ಹಲವು ಬಾರಿ ಮಂತ್ರಿಯಾದವರನ್ನು ನೀವು ಕಿಟಕಿಯಿಂದ ನೋಡಬೇಕಿತ್ತು ಎಂದು ಹೆಬ್ಬಾರ್ ಸಿಟ್ಟಿನಲ್ಲಿ ಮಾತನಾಡಿದ್ದು, ಜಿಲ್ಲೆಯ ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ವಾಗ್ದಾಳಿ ನಡೆಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಷೇತ್ರ ಪನರ್ ವಿಂಗಡಣೆಗೆ ಮೊದಲು ದೇಶಪಾಂಡೆಯವರ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಮುಂಡಗೋಡ ಸೇರಿತ್ತು. ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ದೇಶಪಾಂಡೆ ಅವರು ತಮ್ಮ ಮಗ ಪ್ರಶಾಂತ ದೇಶಪಾಂಡೆಯವರನ್ನು ಹೆಬ್ಬಾರ್ ವಿರುದ್ಧ ಸ್ಪರ್ಧೆಗಿಳಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಮಂತ್ರಿ ಹೆಬ್ಬಾರ್ ಆಡಿರುವ ಮಾತುಗಳು ವಿಶೇಷ ಅರ್ಥವನ್ನು ಹೊಮ್ಮಿಸುತ್ತಿವೆ.

ಇದನ್ನೂ ಓದಿರಿ: ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...