Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...