Homeಮುಖಪುಟ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

- Advertisement -
- Advertisement -

ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಆಡಳಿತವು ತನ್ನನ್ನು ಬಿಡುಗಡೆ ಮಾಡಿದರೆ ತಾನು ಜಲಸಮಾಧಿ ಆಗುವುದಾಗಿ ಮಾಧ್ಯಮಗಳಿಗೆ ಅವರು ಹೇಳಿದ್ದಾರೆ.

ಪರಮಹಂಸ ಅವರನ್ನು ಹಿಂದೂ ಮಹಾಸಭಾ ಕೂಡಾ ಬೆಂಬಲಿಸಿದ್ದು, ಅಕ್ಟೋಬರ್ 2 ರಂದು ಒಂದು ಲಕ್ಷ ಕಾರ್ಯಕರ್ತರು ಅಯೋಧ್ಯೆಯ ಸರಯೂ ನದಿಯಲ್ಲಿ ಜಲಸಮಾಧಿ ಆಗುತ್ತೇವೆ ಎಂದು ಹೇಳಿದ್ದರು. ಹೀಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ‘ಅಕ್ಟೋಬರ್‌ 2 ರೊಳಗೆ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆ’: ಪರಮಹಂಸ ಆಚಾರ್ಯ

ಬೆಳಿಗ್ಗೆಯಿಂದಲೇ ಆಶ್ರಮದಲ್ಲಿ ಹೋಮ-ಹವನಗಳನ್ನು ಮಾಡಿದ್ದ ಪರಮಹಂಸ ಅವರು, ಹನ್ನೆರೆಡು ಗಂಟೆಗೆ ಜಲಸಮಾಧಿ ಆಗುವುದಾಗಿ ಹೇಳಿದ್ದರು. ಅದರೊಳಗೆ ಒಕ್ಕೂಟ ಸರ್ಕಾರದ ಪ್ರತಿನಿಧಿ ತನ್ನ ಬೇಡಿಕೆಯ ಬಗ್ಗೆ ಆಸ್ವಾಸನೆ ನೀಡುತ್ತಾರೆ ಎಂದು ನನಗೆ ಭರವಸೆ ಇದೆ ಎಂದು ತಿಳಿಸಿದ್ದರು.

ಆದರೆ ಪೊಲೀಸರು ಅವರನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾನು ಜಲಸಮಾಧಿ ಆಗುತ್ತೇನೆ ಎಂದು ಸರ್ಕಾರ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಬಿಡುಗಡೆ ಮಾಡಿದರೆ ತಾನು ಜಲ ಸಮಾಧಿ ಆಗುತ್ತೇನೆ. ಆದರೂ ನಾನು ಸರಯೂ ನದಿಯಿಂದ ನೀರನ್ನು ತಂದಿದ್ದೇನೆ. ಹನ್ನೆರೆಡು ಗಂಟೆಗೆ ಇದರಲ್ಲಿ ಮೂಗು ಮುಳುಗಿಸಿ ಜಲಸಮಾಧಿ ಆಗುತ್ತೇನೆ. ಭಗವಂತನ ಇಚ್ಛೆ ಇದ್ದರೆ ಇದರಲ್ಲಿ ಸಫಲನಾಗುತ್ತೇನೆ” ಎಂದು ಸಣ್ಣ ನೀರಿನ ಕ್ಯಾನ್‌ ಅನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ!.

ಆದರೆ ಸರ್ಕಾರ ಅವರ ಗೃಹ ಬಂಧನವನ್ನು ಮುಂದುವರೆಸಿದೆ. ಬಗ್ಗೆ ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪರಮಹಂಸ ಅವರು, “ಸರ್ಕಾರ ನನ್ನನ್ನು 1 ವರ್ಷ ಗೃಹಬಂಧನದಲ್ಲಿರಿಸಿದರೂ, ನಾನು ಹೊರಬಂದ ತಕ್ಷಣ ಜಲಸಮಾಧಿ ಆಗುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ಈ ನಡುವೆ ಪರಮಹಂಸ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

 

ಪರಮಹಂಸ ಅವರು, ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ರಾಷ್ಟ್ರೀಯತೆಯನ್ನು ಅಧೀಕೃತವಾಗಿ ಕೊನೆಗೊಳಿಸಬೇಕು ಎಂದು ಕೂಡಾ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...