Homeಮುಖಪುಟಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿಂಧಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ಸಿಂಧಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರನ್ನು, ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದ್ದು, “ಮುಸ್ಲಿಂ ಮತಗಳನ್ನು ಒಡೆದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಯತ್ನಿಸಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ. ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ’ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಸಿಂಧಗಿಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್, ಅಶೋಕ್‌ ಮನಗೂಳಿ ಅವರನ್ನು ಆಯ್ಕೆ ಮಾಡಿದೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’  ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಎಚ್‌ಡಿಕೆ ಪ್ರತಿಕ್ರಿಯೆ

ಸಿಂಧಗಿ, ಹಾನಗಲ್ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್ ಕೊಡುವುದು ಬಿಡುವುದು ನಮ್ಮ ಪಕ್ಷದ ಆಂತರಿಕ ವಿಚಾರ. ಅವರಿಗೆ ಟಿಕೆಟ್ ಕೊಡಿ, ಇವರಿಗೆ ಟಿಕೆಟ್ ಕೊಡಿ ಎಂದು ಹೇಳಲು ಸಿದ್ದರಾಮಯ್ಯ ಯಾರು? ಹೂ ಈಸ್ ಸಿದ್ದರಾಮಯ್ಯ?” ಎಂದಿದ್ದಾರೆ.

“ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ಇದು ನಮ್ಮ ನಿಲುವೂ ಕೂಡ. ಈ ಉಸಾಬರಿ ಸಿದ್ದರಾಮಯ್ಯ ಅವರಿಗೆ ಏಕೆ?” ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಅಭ್ಯರ್ಥಿ ಹಾಕಿದರೆ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಅಂತ ಆರೋಪ ಮಾಡುತ್ತಾರೆ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದಾರೆ ಅನ್ನುತ್ತಾರೆ. ಓಬಿಸಿ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಹೊರಟಿದ್ದಾರೆ ಎನ್ನುತ್ತಾರೆ. ಹಾಗಾದರೆ ನಾವು ಯಾರನ್ನು ಅಭ್ಯರ್ಥಿ ಮಾಡಬೇಕು? ಬೇರೆಯವರ ಮರ್ಜಿಗೆ ತಕ್ಕಂತೆ ನಾವು ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆ? ಎಂದು ಕೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಟಿಕೆಟ್ ಕೊಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಆ ಸಮುದಾಯಕ್ಕೆ 20ಕ್ಕೂ ಹೆಚ್ಚು ಟಿಕೆಟ್ ನೀಡುತ್ತೇವೆ. ಯಾರನ್ನು ಅಭ್ಯರ್ಥಿ ಮಾಡಬೇಕು? ಮಾಡಬಾರದು? ಎನ್ನುವುದು ನಮ್ಮ ವಿವೇಚನೆ. ನಮಗೆ ಹಾಗೆ ಮಾಡಿ, ಹೀಗೆ ಮಾಡಿ ಎಂದು ಹೇಳುವುದಕ್ಕೆ ಸಿದ್ದರಾಮಯ್ಯ ಯಾರು ಎಂದಿದ್ದಾರೆ.

ಜಾತಿ ರಾಜಕೀಯ ಮಾಡಬಾರದು ಅಂತ ಅದೇ ಕಾಂಗ್ರೆಸ್ ಪಕ್ಷದವರೇ ಹೇಳುತ್ತಾರೆ. ಇವರು ನೋಡಿದರೆ ಮಾಡೋದು ಜಾತಿ ರಾಜಕೀಯವನ್ನೇ. ಒಕ್ಕಲಿಗ ಸಮುದಾಯದವರು ನಮ್ಮನ್ನು ಕೈ ಬಿಡೋದಿಲ್ಲ. ಇದು ಅವರಿಗೆ ಗೊತ್ತಿರಲಿ. ಈಗ ಮತ್ತೆ ನಮ್ಮ ಸಮುದಾಯದ ನಾಯಕರನ್ನು ಹೈಜಾಕ್ ಮಾಡಲು ಹೊರಟಿದ್ದಾರಲ್ಲ? ಅದನ್ನು ಏನಂತಾರೆ ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...