Homeಮುಖಪುಟಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಸಿಂಧಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ಸಿಂಧಗಿ ಕ್ಷೇತ್ರಕ್ಕೆ ನಾಜಿಯಾ ಶಕೀಲಾ ಅಂಗಡಿ ಅವರನ್ನು, ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದ್ದು, “ಮುಸ್ಲಿಂ ಮತಗಳನ್ನು ಒಡೆದು ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಯತ್ನಿಸಿದೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ. ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಏಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ’ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಸಿಂಧಗಿಯ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್, ಅಶೋಕ್‌ ಮನಗೂಳಿ ಅವರನ್ನು ಆಯ್ಕೆ ಮಾಡಿದೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು ಶ್ರೀನಿವಾಸ ಮಾನೆ ಆಕಾಂಕ್ಷಿಗಳು. ನಾವು ಯಾರಿಗೆ ಟಿಕೆಟ್‌ ಕೊಟ್ಟರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. 2–3 ದಿನಗಳಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ’  ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಆರೋಪಕ್ಕೆ ಎಚ್‌ಡಿಕೆ ಪ್ರತಿಕ್ರಿಯೆ

ಸಿಂಧಗಿ, ಹಾನಗಲ್ ಜೆಡಿಎಸ್ ಅಭ್ಯರ್ಥಿಗಳ ಬಗ್ಗೆ ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್ ಕೊಡುವುದು ಬಿಡುವುದು ನಮ್ಮ ಪಕ್ಷದ ಆಂತರಿಕ ವಿಚಾರ. ಅವರಿಗೆ ಟಿಕೆಟ್ ಕೊಡಿ, ಇವರಿಗೆ ಟಿಕೆಟ್ ಕೊಡಿ ಎಂದು ಹೇಳಲು ಸಿದ್ದರಾಮಯ್ಯ ಯಾರು? ಹೂ ಈಸ್ ಸಿದ್ದರಾಮಯ್ಯ?” ಎಂದಿದ್ದಾರೆ.

“ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇದು ನಮ್ಮ ಪಕ್ಷಕ್ಕೆ ಸಂಬಂಧಪಟ್ಟ ವಿಚಾರ. ಇದು ನಮ್ಮ ನಿಲುವೂ ಕೂಡ. ಈ ಉಸಾಬರಿ ಸಿದ್ದರಾಮಯ್ಯ ಅವರಿಗೆ ಏಕೆ?” ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಅಭ್ಯರ್ಥಿ ಹಾಕಿದರೆ ಬಿಜೆಪಿ ಜತೆ ಸೇರಿಕೊಂಡಿದ್ದಾರೆ ಅಂತ ಆರೋಪ ಮಾಡುತ್ತಾರೆ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಜತೆ ಕೈ ಜೋಡಿಸಿದ್ದಾರೆ ಅನ್ನುತ್ತಾರೆ. ಓಬಿಸಿ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಹೊರಟಿದ್ದಾರೆ ಎನ್ನುತ್ತಾರೆ. ಹಾಗಾದರೆ ನಾವು ಯಾರನ್ನು ಅಭ್ಯರ್ಥಿ ಮಾಡಬೇಕು? ಬೇರೆಯವರ ಮರ್ಜಿಗೆ ತಕ್ಕಂತೆ ನಾವು ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕೆ? ಎಂದು ಕೇಳಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಟಿಕೆಟ್ ಕೊಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಆ ಸಮುದಾಯಕ್ಕೆ 20ಕ್ಕೂ ಹೆಚ್ಚು ಟಿಕೆಟ್ ನೀಡುತ್ತೇವೆ. ಯಾರನ್ನು ಅಭ್ಯರ್ಥಿ ಮಾಡಬೇಕು? ಮಾಡಬಾರದು? ಎನ್ನುವುದು ನಮ್ಮ ವಿವೇಚನೆ. ನಮಗೆ ಹಾಗೆ ಮಾಡಿ, ಹೀಗೆ ಮಾಡಿ ಎಂದು ಹೇಳುವುದಕ್ಕೆ ಸಿದ್ದರಾಮಯ್ಯ ಯಾರು ಎಂದಿದ್ದಾರೆ.

ಜಾತಿ ರಾಜಕೀಯ ಮಾಡಬಾರದು ಅಂತ ಅದೇ ಕಾಂಗ್ರೆಸ್ ಪಕ್ಷದವರೇ ಹೇಳುತ್ತಾರೆ. ಇವರು ನೋಡಿದರೆ ಮಾಡೋದು ಜಾತಿ ರಾಜಕೀಯವನ್ನೇ. ಒಕ್ಕಲಿಗ ಸಮುದಾಯದವರು ನಮ್ಮನ್ನು ಕೈ ಬಿಡೋದಿಲ್ಲ. ಇದು ಅವರಿಗೆ ಗೊತ್ತಿರಲಿ. ಈಗ ಮತ್ತೆ ನಮ್ಮ ಸಮುದಾಯದ ನಾಯಕರನ್ನು ಹೈಜಾಕ್ ಮಾಡಲು ಹೊರಟಿದ್ದಾರಲ್ಲ? ಅದನ್ನು ಏನಂತಾರೆ ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...