Homeಮುಖಪುಟಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

- Advertisement -
- Advertisement -

ತೆಲುಗಿನ ಅದ್ಭುತ ಜೋಡಿ ಎಂದೇ ಖ್ಯಾತವಾಗಿದ್ದ ಸಮಂತಾ ಪ್ರಭು ಹಾಗೂ ನಾಗಚೈತನ್ಯ ಅವರು ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನಾ ಪಡೆದಿರುವುದಾಗಿ ಸಮಂತಾ ಅವರು ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಸಮಂತಾ ಹೀಗೆ ಬರೆದುಕೊಂಡಿದ್ದಾರೆ: “ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ


ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದು, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಸಮಂತಾ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

“ಹೃದಯ ಘಾಸಿಗೊಂಡ ಮತ್ತು ದಿಗ್ಭ್ರಮೆಯಾದ ಸಮಂತಾ ಅವರಿಗೆ ಈ ವಿವಾಹದಿಂದ ಪ್ರೀತಿ ಮತ್ತು ಒಡನಾಟ ಮಾತ್ರ ಬೇಕಿತ್ತು. ಆದರೆ ಈಗ ಅದು ಮುಗಿದಿದೆ. ಸಮಂತಾ ಅವರಿಗೆ ಪ್ರೀತಿ ಮತ್ತು ಒಡನಾಟದ ಹೊರತಾಗಿ ಬೇರೇನೂ ಅಗತ್ಯವಿರಲಿಲ್ಲ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವಿನ ಪ್ರೀತಿ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಈ ಜೋಡಿಯ ನಡುವೆ ಬಿರುಕು ಮೂಡಿರುವ ವಿಷಯಗಳು ಹರಿದಾಡಿದ್ದವು.  ಸಮಂತಾ ಅಕ್ಕಿನೇನಿ ಎಂಬುದನ್ನು ‘ಎಸ್‌’ ಎಂಬುದಾಗಿ ಅವರು ಬದಲಿಸಿದ್ದರಿಂದ ವಿಚ್ಛೇದನ ಕುರಿತು ಸುದ್ದಿಗಳು ಹರಿದಾಡಿದ್ದವು. ಚೈತನ್ಯ ಅವರ ಕುಟುಂಬವು ಅಮೀರ್‌ ಖಾನ್‌ ಅವರಿಗೆ ಆಯೋಜಿಸಿದ್ದ ಔತಣ ಕೂಟವು ಈ ಅನುಮಾನಗಳಿಗೆ ಬಲ ನೀಡಿತ್ತು. ಈಗ ವಿಚ್ಛೇದನ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ಈ ಆಘಾತದಿಂದ ಹೊರ ಬರಲು ಸಮಂತಾ ಅವರು ತಮ್ಮ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ತನ್ನ ವೈಯಕ್ತಿಕ ಜೀವನದ ಕಾರಣದಿಂದ ತನಗೆ ಸಂಬಂಧಿಸಿರುವ ಯಾವುದೇ ಪ್ರಾಜೆಕ್ಟ್‌ ನರಳಬಾರದು ಎಂದು  ಸಮಂತಾ ಬಯಸುತ್ತಾರೆ. ಸಮಂತಾ ಅವರು ತಮ್ಮ ವೃತ್ತಿಗೆ ಬದ್ಧರಾಗಿದ್ದು, ಅದನ್ನು ಸಾಕಷ್ಟು ಪ್ರೀತಿಸುತ್ತಾರೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...