Homeಮುಖಪುಟಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

- Advertisement -
- Advertisement -

ತೆಲುಗಿನ ಅದ್ಭುತ ಜೋಡಿ ಎಂದೇ ಖ್ಯಾತವಾಗಿದ್ದ ಸಮಂತಾ ಪ್ರಭು ಹಾಗೂ ನಾಗಚೈತನ್ಯ ಅವರು ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನಾ ಪಡೆದಿರುವುದಾಗಿ ಸಮಂತಾ ಅವರು ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಸಮಂತಾ ಹೀಗೆ ಬರೆದುಕೊಂಡಿದ್ದಾರೆ: “ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ


ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದು, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಸಮಂತಾ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

“ಹೃದಯ ಘಾಸಿಗೊಂಡ ಮತ್ತು ದಿಗ್ಭ್ರಮೆಯಾದ ಸಮಂತಾ ಅವರಿಗೆ ಈ ವಿವಾಹದಿಂದ ಪ್ರೀತಿ ಮತ್ತು ಒಡನಾಟ ಮಾತ್ರ ಬೇಕಿತ್ತು. ಆದರೆ ಈಗ ಅದು ಮುಗಿದಿದೆ. ಸಮಂತಾ ಅವರಿಗೆ ಪ್ರೀತಿ ಮತ್ತು ಒಡನಾಟದ ಹೊರತಾಗಿ ಬೇರೇನೂ ಅಗತ್ಯವಿರಲಿಲ್ಲ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವಿನ ಪ್ರೀತಿ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಈ ಜೋಡಿಯ ನಡುವೆ ಬಿರುಕು ಮೂಡಿರುವ ವಿಷಯಗಳು ಹರಿದಾಡಿದ್ದವು.  ಸಮಂತಾ ಅಕ್ಕಿನೇನಿ ಎಂಬುದನ್ನು ‘ಎಸ್‌’ ಎಂಬುದಾಗಿ ಅವರು ಬದಲಿಸಿದ್ದರಿಂದ ವಿಚ್ಛೇದನ ಕುರಿತು ಸುದ್ದಿಗಳು ಹರಿದಾಡಿದ್ದವು. ಚೈತನ್ಯ ಅವರ ಕುಟುಂಬವು ಅಮೀರ್‌ ಖಾನ್‌ ಅವರಿಗೆ ಆಯೋಜಿಸಿದ್ದ ಔತಣ ಕೂಟವು ಈ ಅನುಮಾನಗಳಿಗೆ ಬಲ ನೀಡಿತ್ತು. ಈಗ ವಿಚ್ಛೇದನ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ಈ ಆಘಾತದಿಂದ ಹೊರ ಬರಲು ಸಮಂತಾ ಅವರು ತಮ್ಮ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ತನ್ನ ವೈಯಕ್ತಿಕ ಜೀವನದ ಕಾರಣದಿಂದ ತನಗೆ ಸಂಬಂಧಿಸಿರುವ ಯಾವುದೇ ಪ್ರಾಜೆಕ್ಟ್‌ ನರಳಬಾರದು ಎಂದು  ಸಮಂತಾ ಬಯಸುತ್ತಾರೆ. ಸಮಂತಾ ಅವರು ತಮ್ಮ ವೃತ್ತಿಗೆ ಬದ್ಧರಾಗಿದ್ದು, ಅದನ್ನು ಸಾಕಷ್ಟು ಪ್ರೀತಿಸುತ್ತಾರೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...