Homeಮುಖಪುಟಬೈಎಲೆಕ್ಷನ್‌: ಸಿಎಂ ಸ್ಥಾನ ಉಳಿಯಬೇಕಾದರೆ ಗೆಲ್ಲಲೇಬೇಕಾದ ದೀದಿಗೆ ಮುನ್ನಡೆ

ಬೈಎಲೆಕ್ಷನ್‌: ಸಿಎಂ ಸ್ಥಾನ ಉಳಿಯಬೇಕಾದರೆ ಗೆಲ್ಲಲೇಬೇಕಾದ ದೀದಿಗೆ ಮುನ್ನಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಮಮತಾ ಬ್ಯಾನರ್ಜಿಯವರು ಗೆಲ್ಲಲೇಬೇಕಾದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಭಬನೀಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಮಮತಾ ಬ್ಯಾನರ್ಜಿ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ದಕ್ಷಿಣ ಕೋಲ್ಕತ್ತಾದ ಭಬನಿಪುರ ಕ್ಷೇತ್ರದ ಮತ ಎಣಿಗೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. 21 ಸುತ್ತಿನ ಮತ ಎಣಿಕೆ ನಡೆಯಲಿದೆ. ಬಿಜೆಪಿಯು ವಕೀಲರಾದ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಕಣಕ್ಕೆ ಇಳಿಸಿತ್ತು. 41 ವರ್ಷದ ತ್ರಿಬ್ರೇವಾಲ್ ಇತ್ತೀಚಿನ ವಿಧಾನಸಭೆ ಚುನಾವಣೆ ಮತ್ತು 2015ರ ಮುನ್ಸಿಪಲ್ ಚುನಾವಣೆಯಲ್ಲಿ ಸೋತರೂ ಚುನಾವಣೆಯ ನಂತರದ ಹಿಂಸಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಅರ್ಜಿದಾರರಲ್ಲಿ ಒಬ್ಬರಾಗಿ ಪ್ರಸಿದ್ಧರಾಗಿದ್ದಾರೆ.

ಮಾರ್ಚ್‌ ಹಾಗೂ ಎಪ್ರಿಲ್‌ನಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಅಭ್ಯರ್ಥಿ ಹಾಗೂ ಈ ಹಿಂದೆ ಟಿಎಂಸಿ ನಾಯಕರಾಗಿದ್ದು, ಚುನಾವಣೆ ವೇಳೆಗೆ ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಅವರಿಂದ ಪರಾಜಿತರಾಗಿದ್ದರು.

ಭಬನಿಪುರ ಕ್ಷೇತ್ರವು ಮಮತಾ ಬ್ಯಾನರ್ಜಿಯವರ ಸಾಂಪ್ರದಾಯಿಕ ಕ್ಷೇತ್ರವಾಗಿತ್ತು. ಆದರೆ ಅದನ್ನು ತ್ಯಜಿಸಿದ್ದ ಮಮತಾ ಬ್ಯಾನರ್ಜಿಯವರು ಸುವೇಂದು ಅಧಿಕಾರಿ ಅವರನ್ನು ಮಣಿಸಲು ನಂದಿಗ್ರಾಮದಲ್ಲಿ ಕಣಕ್ಕಿಳಿದಿದ್ದರು. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಚುನಾವಣೆ ಸೋತರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ಆರು ತಿಂಗಳ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಹೀಗಾಗಿ ಬಂಗಾಳದ ಕೃಷಿ ಸಚಿವ ಶೋಭಂದೇಬ್ ಚಟ್ಟೋಪಾಧ್ಯಾಯ ಅವರನ್ನು ಶಾಸಕ ಸ್ಥಾನದಿಂದ ಕೆಳಗಿಳಿದರು, ಮಮತಾ ಬ್ಯಾನರ್ಜಿಯವರು ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಭಬನಿಪುರ ಹೊರತಾಗಿ ಮುರ್ಷಿದಾಬಾದ್‌‌ನ ಸಂಸರ್‌ಗಂಜ್ ಮತ್ತು ಜಂಗೀಪುರ ಕ್ಷೇತ್ರಗಳಲ್ಲೂ ಮತ ಎಣಿಕೆ ನಡೆಯುತ್ತಿದೆ. ಕ್ರಮವಾಗಿ ಈ ಕ್ಷೇತ್ರಗಳಲ್ಲಿ ಶೇ. 79.92 ಮತ್ತು ಶೇ. 77.63 ಮತದಾನ ನಡೆದಿದೆ.

ಇದನ್ನೂ ಓದಿರಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...