Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...