Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...