Homeಚಳವಳಿಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಪ್ರತಿಭಟನಾ ನಿರತ ರೈತರ ಮೇಲೆ ಉತ್ತರ ಪ್ರದೇಶದಲ್ಲಿ ನಡೆದ ಕ್ರೌರ್ಯ ಹಾಗೂ ಆನಂತರದ ರೈತರ ಪ್ರತಿರೋಧಕ್ಕೆ ಸಂಬಂಧಿಸಿದಂತಹ ಹತ್ತು ಅಂಶಗಳು...

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಮತ್ತು ಕೇಂದ್ರದ ಸಹಾಯಕ ಗೃಹಸಚಿವ ಅಜಯ್‌ ಮಿಶ್ರಾ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಒಂಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ರೈತರ ಹತ್ಯೆಯಾಗಿದ್ದು, ನಂತರ ನಡೆದ ರೈತರ ಪ್ರತಿರೋಧದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

 ಹತ್ತು ಪ್ರಮುಖ ಅಂಶಗಳು

1. ಕೇಂದ್ರ ಸಹಾಯಕ ಗೃಹ ಸಚಿವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟಿಸುತ್ತಿದ್ದ ರೈತರ ಮೇಲೆ ಹರಿದಿವೆ. ಇದರಿಂದ ನಾಲ್ವರು ರೈತರು ಹುತಾತ್ಮರಾಗಿದ್ದಾರೆ. ಆಕ್ರೋಶಗೊಂಡ ರೈತರು ಎರಡು ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, ಅವುಗಳಿಗೆ ಬೆಂಕಿ ಹಂಚಿದ್ದಾರೆ ಎನ್ನಲಾಗಿದೆ. ಈ ಎಸ್‌ಯುವಿಗಳಲ್ಲಿ ಇದ್ದ ನಾಲ್ವರು ಮೃತಪಟ್ಟಿದ್ದಾರೆ ಎಂದು ಲಖಿಂಪುರ್‌-ಖೇರಿ ಜಿಲ್ಲಾ ದಂಡಾಧಿಕಾರಿ ಅರವಿಂದ ಕುಮಾರ್‌ ಚೌರಾಸಿಯಾ ತಿಳಿಸಿದ್ದಾರೆ.

2. ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾ ಅವರೇ ಒಂದು ಎಸ್‌‌ಯುವಿ ಚಾಲನೆ ಮಾಡುತ್ತಿದ್ದ ಎಂದು ರೈತರು ಆರೋಪಿಸಿದ್ದು, ಸಚಿವರು ರೈತರ ಆರೋಪವನ್ನು ಹಲ್ಲಗಳೆದಿದ್ದಾರೆ. ವಾಹನ ಹರಿದು ಮೂವರು ಸಾವನ್ನಪ್ಪಿದರೆ ಆಶಿಷ್‌ ಮಿಶ್ರಾ ಓರ್ವ ರೈತನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳಾಗಿವೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆ: ಸಚಿವರ ಮೇಲೆ ಕೊಲೆ ಪ್ರಕರಣ ದಾಖಲಿಸಲು ಎಸ್‌ಕೆಎಂ ಒತ್ತಾಯ

3. “ಕೆಲವು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಕಪ್ಪು ಭಾವುಟವನ್ನು ತೋರಿಸುತ್ತಾ, ಕಲ್ಲುಗಳನ್ನು ಎಸೆದರು, ಇದು ಗಲಭೆಗೆ ತಿರುಗಿ, ಇಬ್ಬರು ರೈತರು ಕಾರಿನ ಅಡಿ ಬಂದು ಸಾವನ್ನಪ್ಪಿದರು. ಮೂವರು ಬಿಜೆಪಿ ಕಾರ್ಯಕರ್ತರು ಹಾಗೂ ಕಾರಿನ ಚಾಲಕನನ್ನು ಹೊಡೆದು ಸಾಯಿಸಲಾಯಿತು” ಎಂದು ಸಚಿವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

4. “ಸಚಿವರಿಗೆ ಘೇರಾವ್‌ ಹಾಕಲು  ರೈತರು ಉದ್ದೇಶಿಸಿದ್ದರು. ಘೇರಾವ್‌ ಕೊನೆಗೊಂಡ ನಂತರ ಹೆಚ್ಚಿನ ರೈತರು ಹಿಂತಿರುಗಿದ್ದರು. ಈ ವೇಳೆ ಮೂರು ಬೆಂಗಾವಲು ವಾಹನಗಳು ರೈತರ ಮೇಲೆ ನುಗ್ಗಿದವು. ಒಬ್ಬ ರೈತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೆ ಕೆಲವರು ಆಸ್ಪತ್ರೆಯಲ್ಲಿ ಮೃತಪಟ್ಟರು” ಎಂದು ರೈತ ನಾಯಕ ದರ್ಶನ್‌ ಪಾಲ್‌ ಹೇಳಿದ್ದಾರೆ.

5. ವಾಹನಗಳು ನುಗ್ಗಿದ್ದರಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ ಒಕ್ಕೂಟದ ಭಾಗವಾದ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕ ತೇಜೇಂದ್ರ ಎಸ್‌.ವಿರಾಕ್‌ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೈತ ಒಕ್ಕೂಟ ತಿಳಿಸಿದೆ.

6. ರೈತರು ಈ ಇಬ್ಬರು ಸಚಿವರ ಭೇಟಿಯನ್ನು ವಿರೋಧಿಸಿ ಒಂದೆಡೆ ಸೇರಿದ್ದರು.  ಇತ್ತೀಚೆಗೆ ರೈತರ ಹೋರಾಟದ ಕುರಿತು ಸಚಿವ ಮಿಶ್ರಾ ಅವಹೇಳನಕಾರಿಯಾಗಿ ಮಾತನಾಡಿದ್ದು ರೈತರ ಪ್ರತಿಭಟನೆಗೆ  ಕಾರಣವಾಗಿತ್ತು. ಕೃಷಿ ಕಾಯ್ದೆಗಳ ಕುರಿತು ಪ್ರತಿಭಟನೆಯನ್ನು ಸಚಿವರು ಕೇವಲವಾಗಿ ಕಂಡಿದ್ದರು. ಇದು ರೈತ ಸಮುದಾಯಕ್ಕೆ ಬೇಸರ ತಂದಿತ್ತು.

ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿಯನ್ನು ವಿರೋಧಿಸಿ ಉತ್ತರ ಪ್ರದೇಶದ ಲಿಖಿಮ್‌ಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಗಳು ಮೂವರು ರೈತರ ಮೇಲೆ ವಾಹನ ಹತ್ತಿಸಿದ್ದಾರೆ. ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಹೇಳಿದೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವರ್ಚ್ಯೂವಲ್‌‌ ವೇದಿಕೆ ಮೂಲಕ ಪತ್ರಿಕಾಗೋಷ್ಠಿ ನಡೆಸಿರುವ ಸಂಯುಕ್ತಾ ಕಿಸಾನ್‌ ಮೋರ್ಚಾ, ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ.

ಘಟನಾ ಸ್ಥಳದಲ್ಲಿದ್ದ ಸೀತಾಪುರದ ರಿಚಾ ಸಿಂಗ್‌‌, “ಮಿಶ್ರಾ ಇಳಿಯಲಿರುವ ಹೆಲಿಪ್ಯಾಡ್‌ ಬಳಿ ರೈತರು ಸೇರಿದ್ದರು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದರು. ಮಿಶ್ರಾ ಬಂದಿಳಿದು ಕಾರ್ಯಕ್ರಮಕ್ಕೆ ತೆರಳಿದರು. ನಾವು ಅವರನ್ನು ಹಿಂಬಾಲಿಸಲಿಲ್ಲ. ನಮ್ಮ ಪ್ರತಿಭಟನೆಯನ್ನು ಹೆಲಿಪ್ಯಾಡ್‌ನಲ್ಲೇ ಮುಂದುವರಿಸಿದೆವು. ಕೆಲವರು ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಚಿವರು ಹೋದ ಬಳಿಕವೂ ನಮ್ಮ ಘೋಷಣೆಗಳನ್ನು ಕೂಗಿದೆವು. ನಂತರ ನಮ್ಮ ದಾರಿಯಲ್ಲಿ ನಾವು ನಡೆದೆವು” ಎಂದಿದ್ದಾರೆ.

ಗುಂಡಿನ ದಾಳಿ ಹಾಗೂ ಹತ್ಯೆ ನಡೆದಾಗ ಸ್ಥಳದಲ್ಲಿದ್ದ ರಿಚಾ ಸಿಂಗ್ ಜೊತೆ ಇದ್ದ ಗುರುಮ್ನೀತ್‌‌ ಮಂಗತ್‌ ಅವರೂ ಹೇಳಿಕೆ ನೀಡಿದ್ದು, “ಸಚಿವರು ಹೋದ ಬಳಿಕ ರೈತರು ಚದುರಿದರು. ಆ ವೇಳೆಗೆ ಸಚಿವರ ಮಗ ಆಶೀಶ್‌ ಮಿಶ್ರಾ, ಆತನ ಸಹೋದರ ಹಾಗೂ ಕೆಲವು ಗೂಂಡಾಗಳು ಮೂರು ಕಾರುಗಳಲ್ಲಿ ಸುಮಾರು 3.15ರ ವೇಳೆಗೆ ಬಂದರು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರು. ರೈತರ ಮೇಲೆ ನುಗ್ಗಿಸಿದರು. ಜೊತೆಗೆ ರೈತರ ಮೇಲೆ ಬಂದೂಕಿನ ಮಳೆಗರೆದರು. ಹತ್ತಿರದಲ್ಲಿದ್ದ ರೈತನಿಗೆ ಗುಂಡು ತಾಕಿ, ಆತ ಮೃತಪಟ್ಟ” ಎಂದು ಹೇಳಿದ್ದಾರೆ.

7. ಶಾಂತಿಯನ್ನು ಕಾಪಾಡಿಕೊಳ್ಳಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ಮನವಿ ಮಾಡಿದ್ದಾರೆ. ಘಟನೆಯನ್ನು ‘ಆಕಸ್ಮಿಕ’ ಎಂದು ಕರೆದಿರುವ ಅವರು, “ಘಟನೆಯ ಕಾರಣಗಳನ್ನು ತನಿಖೆ ಮಾಡಲಾಗುವುದು. ಆರೋಪಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಎಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕೋರುತ್ತೇನೆ” ಎಂದಿದ್ದಾರೆ.

8. ಘಟನೆ ನಡೆದ ಲಿಖಿಂಪುರ್‌ ಪ್ರಾಂತ್ಯದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

9. ರೈತ ನಾಯಕ ನರೇಶ್ ಟಿಕಾಯತ್ ಅವರು ಭಾನುವಾರ ರಾತ್ರಿ ಸಿಸೋಲಿಯಲ್ಲಿ ತುರ್ತು ಸಭೆಯನ್ನು ಕರೆದಿದ್ದರು. ಮಾನವ ಹಕ್ಕುಗಳ ಹೋರಾಟಗಾರ ಚಂದ್ರಶೇಖರ್‌ ಆಜಾದ್ ಮತ್ತು ಇವರ ಭೀಮ್‌ ಆರ್ಮಿ ಲಿಖಿಂಪುರ್‌ ಖೇರಿಗೆ ದಾವಿಸುತ್ತಿದೆ ಎಂದು  ಎನ್‌ಡಿಟಿವಿ ವರದಿ ಮಾಡಿದೆ.

10. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ರಣದೀಪ್‌ ಸರ್ಜೇವಾಲಾ, ಕಪೀಲ್‌ ಸಿಬಾಲ್‌ ಮೊದಲಾದವರು ಘಟನೆಯನ್ನು ಖಂಡಿಸಿದ್ದಾರೆ. ಕೊಲೆಯಾದ ರೈತರ ಕುಟುಂಬಗಳನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಯಿತು ಮತ್ತು ಲಖಿಂಪುರ್ ಖೇರಿಗೆ ಪ್ರವೇಶಿಸಲು ಬಿಡಲಿಲ್ಲ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. 

 ಇದನ್ನೂ ಓದಿರಿ: ಲಖಿಂಪುರ್ ಖೇರಿಯಲ್ಲಿ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ- ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...