Homeಮುಖಪುಟಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

ಸರ್ಕಾರದ ಕ್ರೌರ್ಯವನ್ನು ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾನನ್ನು ಬಂಧಿಸಬೇಕು. ಸಚಿವ ಸ್ಥಾನದಿಂದ ಅಜಯ್‌‌ ಮಿಶ್ರಾರನ್ನು ಕಿತ್ತೊಗೆಯಬೇಕು ಎಂದು ಆಗ್ರಹಸಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ರವರು ಸ್ವಲ್ಪವು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ಇವರಿಬ್ಬರೂ ಬಂಡವಾಳಶಾಹಿಗಳ ಬೂಟು ನೆಕ್ಕುತ್ತಿದ್ದಾರೆ. ಹಾಗಾಗಿಯೇ ಪ್ರತಿನಿತ್ಯ ರೈತರ ಕೊಲೆಯಾಗುತ್ತಿದೆ” ಎಂದು ಕಿಡಿಕಾರಿದರು.

ಲಖೀಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮಕ್ಕೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಮತ್ತು ಈ ಘಟನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಉತ್ತರಪ್ರದೇಶ ಸರ್ಕಾರದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕವು ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಮನವಿಯನ್ನೂ ಕಳಿಸಿದೆ.

ಘಟನೆಯಲ್ಲಿ ನಾಲ್ವರು ರೈತರು ಹತ್ಯೆಯಾಗಿದ್ದಾರೆ. ಇನ್ನೂ ಹಲವು ರೈತ ನಾಯಕರು ಮತ್ತು ಪ್ರತಿಭಟನಾ ನಿರತ ರೈತರು ಗಂಭೀರ ಸ್ವರೂಪದಲ್ಲಿ ಘಾಯಗೊಳಿಸಿರುವ ಹೀನಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಪ್ರತಿಭಟನಾಕಾರರು ಅಗ್ರಹಿಸಿದ್ಧಾರೆ.

ಇತ್ತೀಚೆಗೆ, ಸಚಿವ ಸಚಿವ ಅಜಯ್ ಮಿಶ್ರಾ ತೆನಿ ಅವರು ರೈತರ ಪ್ರತಿಭಟನೆಯ ಕುರಿತು ಬಹಿರಂಗ ಬೆದರಿಕೆ ಹಾಕಿದ್ದರು. ಅವರ ಬೆದರಿಕೆಯನ್ನು ಖಂಚಿಸಿ, ಅವರು ಪ್ರತಿನಿಧಿಸುವ ಕ್ಷೇತ್ರವಾದ ಲಖೀಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸಚಿವರ ಬೆಂಗಾವಲು ಪಡೆಯ ವಾಹನ ಹರಿಸುವ ಮೂಲಕ ತಮ್ಮ ಬೆದರಿಕೆಯನ್ನು ಸಚಿವ ಸತ್ಯಗೊಳಿಸಿದ್ದಾರೆ. ಈ ಕೃತ್ಯ ಭಾರತದ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆಯ ಹಕ್ಕಿನ ತೀವ್ರ ಉಲ್ಲಂಘನೆಯೂ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ಧಾರೆ.

ಈ ಘಟನೆ ನಡೆದ ನಂತರವೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಹತ್ಯೆಯಾದ, ಗಾಯಗೊಂಡ ರೈತರನ್ನು ಅಥವಾ ಅವರ ಕುಟುಂಬಗಳನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲೀ ನೀಡಿಲ್ಲ. ಇದು ಹಾಡುಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಇಂತಹ ಗಂಭೀರ ಪ್ರಕರಣದ ಸಂದರ್ಭದಲ್ಲಿ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಬೇಕು.  ಉತ್ತರ ಪ್ರದೇಶದ ಸರ್ಕಾರ ಮತ್ತು ಹಿಂಸೆಗೆ ಕಾರಣರಾದ ಸಚಿವರ ಮೇಲೆ ಕೂಡಲೇ ಕ್ರಮಕೂಗೊಳ್ಳುವ ಭರವಸೆ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ರೈತ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಿಪಿಎಂ ಸಂಘಟನೆಯ ವರಲಕ್ಷ್ಮಿ, ವಿಮಲ ಮುಂತಾದವರು ಭಾಗವಹಿಸಿದ್ದರು.

ವಿಡಿಯೋ ನೋಡಿ


ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...