Homeಮುಖಪುಟರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ರೈತರ ವಿರುದ್ಧ ದೊಣ್ಣೆ ಎತ್ತಲು ಕಾರ್ಯಕರ್ತರಿಗೆ ಕರೆ ನೀಡಿದ ಹರ್ಯಾಣ ಸಿಎಂ: ವಿಡಿಯೋ ವೈರಲ್‌

ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ ಎಂದು ಹರಿಯಾಣ ಸಿಎಂ ಖಟ್ಟರ್‌, ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ.

- Advertisement -
- Advertisement -

“ಹೊಸದಾಗಿ ಹುಟ್ಟಿಕೊಂಡಿರುವ ರೈತ ಸಂಘಟನೆಗಳನ್ನು ನಿಯಂತ್ರಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ಉತ್ತರ ಹಾಗೂ ಪಶ್ಚಿಮ ಹರ್ಯಾಣದಲ್ಲಿ ಈ ಸಮಸ್ಯೆ ಇಲ್ಲ. ಇಲ್ಲೇ ನಮ್ಮವರನ್ನು ಸ್ವಯಂಸೇವರಕರನ್ನಾಗಿ ಮಾಡಿ. 500-1000ರ ಗುಂಪು ಮಾಡಿ. ಪ್ರತಿ ಜಾಗದಲ್ಲಿ ಮುಯ್ಯಿಗೆ ಮುಯ್ಯಿ ಎಂಬಂತೆ ಕೋಲು ಎತ್ತಿಕೊಳ್ಳಿ…”

-ಇದು ಹರಿಯಾಣದ ಮುಖ್ಯಮಂತ್ರಿ ಮನೋಹರ್‌‌ಲಾಲ್‌ ಖಟ್ಟರ್‌ ಅವರ ಪ್ರಚೋದನಾತ್ಮಕ ಹೇಳಿಕೆ. ರೈತ ಸಮುದಾಯದ ವಿರುದ್ಧ ಕಾರ್ಯಕರ್ತರನ್ನು ಖಟ್ಟರ್‌ ಪ್ರಚೋದಿಸಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಇದನ್ನೂ ಓದಿರಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

“ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ. ಕೋಲು ಎತ್ತಿಕೊಂಡರೆ ಸಮಯದ ಬಗ್ಗೆ ಚಿಂತೆ ಮಾಡಬೇಡಿ. ತಿಂಗಳೆರಡು ತಿಂಗಳಾದರೂ, ಇಲ್ಲಿ ಕಲಿಯುವುದಕ್ಕಿಂತ ಅಲ್ಲಿ ಕಲಿಯುತ್ತೀರಿ. ಲೀಡರ್‌ ಆಗಿಬಿಡಬಹುದು. ಇದು ಇತಿಹಾಸದಲ್ಲಿ ದಾಖಲಾಗಿ ಬಿಡುತ್ತದೆ” ಎಂದು ಹಿಂಸೆಗೆ ಪ್ರೇರೇಪಿಸಿದ್ದಾರೆ.

ಭಾನುವಾರ ನಡೆದ ಬಿಜೆಪಿಯ ಕಿಸಾನ್ ಮೋರ್ಚಾದ ಸಭೆಯಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಲು ಸಿದ್ದವಿರುವವರು ಸಂಘಟಿತರಾಗುವಂತೆ ಕರೆ ನೀಡಿದ್ದಾರೆ. ರೈತ ಹೋರಾಟ ಆರಂಭವಾದಾಗಿನಿಂದ ರೈತರ ವಿರುದ್ಧ ಮಾತನಾಡುತ್ತಾ ಬಂದಿರುವ ಖಟ್ಟರ್‌ ಈ ವಿಡಿಯೋ ಹೋರಾಟ ನಿರಂತರ ರೈತರನ್ನು ಇನ್ನಷ್ಟು ಕೆರಳಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ಪಂಜಾಬ್‌ನಲ್ಲಿ ನಂತರದಲ್ಲಿ ಹರ್ಯಾಣದಲ್ಲಿ ರೈತರು ಹೋರಾಟ ಆರಂಭಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿರುವ ಹರ್ಯಾಣ ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದಾಗಲೆಲ್ಲಾ, ತೀವ್ರವಾದ ಪ್ರತಿಭಟನೆ ವ್ಯಕ್ತವಾಗಲಾರಂಭಿಸಿತು.

ಕಳೆದ ತಿಂಗಳು ಬಸ್ತಾರಾ ಟಾಲ್‌ಪ್ಲಾಜ ಬಳಿ ಎಸ್‌ಡಿಎಂ ರೈತರ ತಲೆ ಒಡೆಯುವಂತೆ ಕರೆ ನೀಡಿದ್ದರು, ಆಗಲೂ ಹಿಂಸಾಚಾರ ನಡೆದಿತ್ತು. ಇದನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದರೂ ಕೂಡ. ಅಧಿಕಾರವನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಪ್ರತಿಕಾರದ ನಡೆಯನ್ನು ಅನುಸರಿಸುತ್ತಿರುವ ಖಟ್ಟರ್‌ ಅವರ ನಿಲುವನ್ನು ರೈತ ಸಂಘಟನೆಗಳು ತೀವ್ರವಾಗಿ ವಿರೋಧಿಸಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಲಾಖಿಮ್‌ಪುರ್‌ ಖೇರಿ ಹಿಂಸಾಚಾರವನ್ನು ಪ್ರತಿಭಟಿಸಿ, ಹಾಗೂ ಖಟ್ಟರ್‌ ಹೇಳಿಕೆಯನ್ನು ಖಂಡಿಸಿ ಅಕ್ಟೋಬರ್‌ 4ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಪಡೆ ರೈತರ ಮೇಲೆ ವಾಹನಗಳನ್ನು ಹತ್ತಿಸಿ, ನಾಲ್ವರು ರೈತರನ್ನು ಕೊಂದಿದ್ದಾರೆ. ಸಾಂವಿಧಾನಿಕವಾಗಿ ಹೋರಾಡುತ್ತಿರುವವರ ಮೇಲೆ ಬಿಜೆಪಿಯವರು ಪ್ರಯೋಗಿಸುತ್ತಿರುವ  ಕ್ರೌರ್ಯದ ಅಸ್ತ್ರ ಆತಂಕಕ್ಕೆ ಕಾರಣವಾಗಿದೆ.

ಛತ್ತೀಸ್‌ಘಡ ಮುಖ್ಯಮಂತ್ರಿ ಪ್ರತಿಕ್ರಿಯೆ

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಹೇಳಿಕೆ ಹಾಗೂ ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಆಗಿರುವ ದಾಳಿಯನ್ನು ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಕಟುವಾಗಿ ಟೀಕಿಸಿದ್ದಾರೆ.

“ಲಖಿಂಪುರ್‌‌ ಖೇರಿಗೆ ಭೇಟಿ ನೀಡಲು ಹಾಗೂ ಸಂತ್ರಸ್ತ ರೈತ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ನೀಡುತ್ತಿಲ್ಲ. ನಿನ್ನೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಸೀತಾಪುರಕ್ಕೆ ಅವರು ತೆರಳದಂತೆ, ಯಾವುದೇ ವಾರಂಟ್‌ ಇಲ್ಲದೆಯೂ ತಡೆದಿದ್ದಾರೆ” ಎಂದು ರಾಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

“ತನ್ನ ವಿರುದ್ಧದ ಯಾವುದೇ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಬಯಸುತ್ತಿದೆ. ಖಟ್ಟರ್‌ ಹೇಳಿಕೆ ಅವರ ಮನಸ್ಥಿತಿಯನ್ನು ಬಿಂಬಿಸುತ್ತಿದ್ದು, ಅವರು ಎಲ್ಲ ವಿರೋಧಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಇದು ಸರ್ವಾಧಿಕಾರವಾಗಿದೆ. ಇದನ್ನು ನಾವು ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...