Homeಮುಖಪುಟಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಮತ ಎಣಿಕೆ ನಡೆಯುತ್ತಿರುವಾಗ ನಿಮಗೆ ತಿಳಿದಿರಬೇಕಾದ ಸಂಗತಿಗಳು

ಒಟ್ಟು ರಾಜ್ಯಗಳು & ಕೇಂದ್ರಾಡಳಿತ ಪ್ರದೇಶಗಳು: 36 (29 ರಾಜ್ಯಗಳು & 7 ಕೇಂದ್ರಾಡಳಿತ ಪ್ರದೇಶಗಳು)

- Advertisement -
- Advertisement -

||ನಾನು ಗೌರಿ ಡೆಸ್ಕ್||

ಮತ ಎಣಿಕೆ ನಡೆಯುತ್ತಿರುವ ದಿನ ನಿಮಗೆ ಈ ಸಂಖ್ಯೆಗಳು ನೆರವಾಗಬಲ್ಲವು
ಒಟ್ಟು ಲೋಕಸಭಾ ಸದಸ್ಯರು: 545
ಚುನಾಯಿತರಾಗುವ ಸದಸ್ಯರು: 543
ನಾಮನಿರ್ದೇಶಿತ ಆಂಗ್ಲೋ ಇಂಡಿಯನ್ ಸದಸ್ಯರು: 2
(ಕಳೆದ ಲೋಕಸಭೆಯಲ್ಲಿ ನಾಮಕರಣಗೊಂಡ ಭಾಜಪ ಪಕ್ಷದ ಇಬ್ಬರು ಸದಸ್ಯರೆಂದರೆ ಕೇರಳದ ರಿಚರ್ಡ್ ಹೇ ಮ್ತು ಪ.ಬಂಗಾಳದ ಜಾರ್ಜ್ ಬೇಕರ್)

ಈ ಸಾರಿ ಚುನಾವಣೆ ನಡೆದದ್ದು: 542 ಕ್ಷೇತ್ರಗಳು
ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಂದೂಡಲಾಗಿದೆ. ಡಿಎಂಕೆ ಅಭ್ಯರ್ಥಿ ಕಾತಿರ್ ಆನಂದ್ ಅವರ ಕಟ್ಟಡದಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಯಿತು ಎನ್ನುವ ಕಾರಣಕ್ಕೆ ಚುನಾವಣಾ ಆಯೋಗವು ಈ ತೀರ್ಮಾನ ತೆಗೆದುಕೊಂಡಿದೆ. ಅಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಬೇಕಿತ್ತು.

ಇದನ್ನೂ ಓದಿ: ಎಕ್ಸಿಟ್ ಪೋಲ್ ಕುರಿತು

ದೇಶದ ಒಟ್ಟು ಮತದಾನ ಕೇಂದ್ರಗಳು: 10.35 ಲಕ್ಷ
ಮತದಾನದ ಹಂತಗಳು: ಏಪ್ರಿಲ್ 11ರಿಂದ ಮೇ 19ರವರೆಗೆ 7 ಹಂತಗಳು
ಜೊತೆ ಜೊತೆಗೇ ಅಸೆಂಬ್ಲಿ ಚುನಾವಣೆಯೂ ನಡೆದ ರಾಜ್ಯಗಳು: ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒರಿಸ್ಸಾ ಮತ್ತು ಸಿಕ್ಕಿಂ.
(ತೆಲಂಗಾಣಕ್ಕೂ ಈಗಲೇ ನಡೆಯಬೇಕಿತ್ತು, ಆದರೆ ಅದರ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬೇಗನೇ ಅಸೆಂಬ್ಲಿ ವಿಸರ್ಜಿಸಿದ್ದರಿಂದ 6 ತಿಂಗಳು ಮುಂಚೆಯೇ ಅಲ್ಲಿ ಚುನಾವಣೆ ನಡೆಯಿತು)
ಉಪಚುನಾವಣೆಗಳು: ಇದಲ್ಲದೇ 13 ರಾಜ್ಯಗಳ 46 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಕುಂದಗೋಳ ಮತ್ತು ಕಲಬುರ್ಗಿಯ ಚಿಂಚೋಳಿ ಕ್ಷೇತ್ರಗಳೂ ಇವೆ.

2014ರಲ್ಲಿದ್ದ 9 ಲಕ್ಷ ಮತದಾನ ಕೇಂದ್ರಗಳಿಂದ 2019ರಲ್ಲಿ ಸುಮಾರು 10.35 ಲಕ್ಷ ಮತದಾನ ಕೇಂದ್ರಗಳಿಗೆ ಏರಿಕೆಯಾಗಿದೆ.
ಅದೇ ರೀತಿ 2014ರಲ್ಲಿದ್ದ 81.4 ಕೋಟಿ ಮತದಾರರ ಸಂಖ್ಯೆಯೂ 2019ರ ಹೊತ್ತಿಗೆ 90 ಕೋಟಿಗೆ ಏರಿಕೆಯಾಗಿದೆ. ಅವರಲ್ಲಿ 18ರಿಂದ 19 ವಯಸ್ಸಿನವರೇ 1.5 ಕೋಟಿ.

ಈ ಸಾರಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುವ ತೃತೀಯ ಲಿಂಗಿಗಳ ಸಂಖ್ಯೆ: 38,000
ಮೊಟ್ಟ ಮೊದಲ ಬಾರಿಗೆ ದೇಶದ ಎಲ್ಲಾ ಎಲೆಕ್ಟ್ರಾನಿಕ್ ಮತ ಯಂತ್ರಗಳಿಗೆ ವಿವಿಪ್ಯಾಟ್ ಜೋಡಿಸಲಾಗಿದೆ.
ವಿವಿಪ್ಯಾಟ್ ಎಂದರೆ (Voter verified Paper Audit Trial ಮತಯಂತ್ರದಲ್ಲಿ ಮತದಾರರು ಮತ ಹಾಕಿದ ನಂತರ ಅದಕ್ಕೆ ಜೋಡಿಸಿದ ಡಬ್ಬದಲ್ಲಿ, ಅವರು ಯಾರಿಗೆ ಮತ ಹಾಕಿದ್ದಾರೋ, ಅವರಿಗೇ ಮತ ಹಾಕಲಾಗಿದೆಯಾ ಇಲ್ಲವಾ ಎಂಬುದನ್ನು ಒಂದು ಮುದ್ರಿತ ಚೀಟಿಯಲ್ಲಿ ತೋರಿಸಲಾಗುತ್ತದೆ. ಆ ಚೀಟಿಯು ಪಾರದರ್ಶಕ ಗಾಜಿನ ಒಳಗೆ 7 ಸೆಕೆಂಡುಗಳ ಕಾಲ ಇರುತ್ತದೆ.
ಈ ಸಾರಿ ಎಲ್ಲಾ ಇವಿಎಂಗಳಲ್ಲೂ ಅಭ್ಯರ್ಥಿಯ ಭಾವಚಿತ್ರವನ್ನೂ ಮುದ್ರಿಸಲಾಗಿದೆ.

ಮತ ಎಣಿಕೆ ಕೇಂದ್ರಗಳು: 542

ನೋಡಿ: ಚುನಾವಣಾ ಆಯೋಗದ ವೆಬ್ ಸೈಟ್

ಮತ ಎಣಿಕೆ ಹೇಗೆ ನಡೆಯುತ್ತದೆ?
ಸಾಮಾನ್ಯವಾಗಿ ಮೊದಲು ಅಂಚೆ ಮತಗಳ ಎಣಿಕೆ, ನಂತರ ಯಾವುದಾದರೂ ಒಂದು ಮತಯಂತ್ರದ ಮತ ಎಣಿಕೆಗೂ ವಿವಿಪ್ಯಾಟ್‍ನಲ್ಲಿನ ಮತಚೀಟಿಗಳ ಎಣಿಕೆಗೂ ತಾಳೆ ಮಾಡುವುದು, ಆ ನಂತರ ಎಲ್ಲಾ ಮತಯಂತ್ರಗಳಲ್ಲಿನ ಮತಗಳ ಎಣಿಗೆ ಮಾಡುವುದು ಹೀಗೆ ನಡೆಯುತ್ತಿತ್ತು.
ಆದರೆ, ಈ ಸಾರಿ ಆಯೋಗ ಬೇರೆ ಕ್ರಮವನ್ನು ಅನುಸರಿಸಲಿದೆ. ಅಂಚೆ ಮತಗಳ ಎಣಿಕೆಯ ಜೊತೆಗೇ ಮತಯಂತ್ರಗಳ ಎಣಿಕೆಯೂ ಆರಂಭವಾಗುತ್ತದೆ. ಇನ್ನೆರಡು ಸುತ್ತು ಮತಯಂತ್ರಗಳ ಎಣಿಕೆ ಇದೆ ಎನ್ನುವಾಗ ನಿಲ್ಲಿಸಿ, ಅಂಚೆ ಮತಗಳ ಎಣಿಕೆ ಸಂಪೂರ್ಣವಾಗಿದೆಯೇ ಪರಿಶೀಲಿಸುತ್ತಾರೆ. ಅಂಚೆ ಮತಗಳ ಎಣಿಕೆ ಮುಗಿದಿದ್ದರೆ ಉಳಿದೆರಡು ಸುತ್ತುಗಳನ್ನೂ ಮುಗಿಸಲಾಗುತ್ತದೆ. ಆ ನಂತರ ಪ್ರತಿ ಅಸೆಂಬ್ಲಿಗೆ 5 ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮಾಡಿ, ಆ ಮತಗಳಿಗೂ ಸಂಬಂಧಿಸಿದ ಮತಯಂತ್ರದಲ್ಲಿನ ಮತಗಳಿಗೂ ತಾಳೆಯಾಗುತ್ತದಾ ಎಂಬುದನ್ನು ಪರಿಶೀಲಿಸುತ್ತಾರೆ.
ಆ ನಂತರ ಮತ ಎಣಿಕೆ ಪ್ರಕ್ರಿಯೆಯನ್ನು ಮುಗಿಸುತ್ತಾರೆ.
ಒಂದು ವೇಳೆ ಪ್ರತಿ ಅಸೆಂಬ್ಲಿ ಕ್ಷೇತ್ರದ ತಲಾ 5 ವಿವಿಪ್ಯಾಟ್ ಮತಚೀಟಿಗಳನ್ನು ಎಣಿಸಿದಾಗ, ಯಾವುದಾದರೂ ಒಂದರಲ್ಲಿ ತಾಳೆಯಾಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಿರುವಾಗ, ಆ ಲೋಕಸಭಾ ಕ್ಷೇತ್ರದ ಎಲ್ಲಾ ವಿವಿಪ್ಯಾಟ್‍ಗಳ ಮತಚೀಟಿಗಳನ್ನೂ ಎಣಿಕೆ ಮಾಡಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಳ್ಳಿ ಹಾಕಿದೆ.


ಹಾಗೆಯೇ ಮೊದಲು ವಿವಿಪ್ಯಾಟ್ ಮತಚೀಟಿಗಳ ಎಣಿಕೆ ಮುಗಿಸಿ, ನಂತರ ಮತಯಂತ್ರ (ಇವಿಎಂ)ಗಳ ಮತಗಳನ್ನು ಎಣಿಸಿಬೇಕು ಎಂಬ ಮನವಿಯನ್ನೂ ಆಯೋಗ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...