Homeಮುಖಪುಟ‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

- Advertisement -
- Advertisement -

ಉತ್ತರ ಪ್ರದೇಶದ ಲಿಖಿಂಪುರ ಜಿಲ್ಲೆಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಕೊಂದ ಪ್ರಕರಣವನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಪ್ರತಿಭಟಿಸುವ ಹಕ್ಕನ್ನು ‘ಸಂಪೂರ್ಣ ಹಕ್ಕು’ ಎನ್ನಬಹುದೇ, ಇಲ್ಲವೇ ಎಂದು ನಿರ್ಧರಿಸಲಿದೆ ಎಂದು ವರದಿಯಾಗಿದೆ.

ದಿಲ್ಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರೈತರ ಸಂಘಟನೆಯಾದ ಕಿಸಾನ್ ಮಹಾಪಂಚಾಯತ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

“ಮೂರು ವಿವಾದಾತ್ಮಕ ಕಾನೂನುಗಳನ್ನು ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ಹಿಡಿದಿರುವಾಗ ಪ್ರತಿಭಟನೆ ಮಾಡುತ್ತಿರುವುದು ಸರಿಯೇ?” ಎಂದು ಜಸ್ಟೀಸ್‌ ಎ.ಎಂ.ಖಾನ್‌ವಿಲ್ಕರ್‌ ಮತ್ತು ಜಸ್ಟೀಸ್‌ ಸಿ.ಟಿ.ರವಿಕುಮಾರ್‌ ಅವರಿದ್ದ ಪೀಠವು ರೈತರ ಸಂಘಟನೆಯನ್ನು ಪ್ರಶ್ನಿಸಿದೆ.

“ಮೂರು ವಿವಾದಿತ ಕಾನೂನುಗಳ ಪ್ರಕರಣ ನ್ಯಾಯಾಲಯದಲ್ಲಿರುವಾಗ ರೈತರು ಪ್ರತಿಭಟಿಸಬಹುದೇ ಎಂದು ಕೋರ್ಟ್‌ ನಿರ್ಧರಿಸಲಿದೆ” ಎಂದು ಪೀಠವು ಹೇಳಿರುವುದಾಗಿ ವರದಿಯಾಗಿದೆ.

ಕಳೆದ 2020ರ ಸೆಪ್ಟೆಂಬರ್‌‌ನಲ್ಲಿ ಕೇಂದ್ರ ಸರ್ಕಾರ ವಿವಾದಿತ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಶುರುವಾಗಿ ಇಡೀ ದೇಶವನ್ನು ವ್ಯಾಪಿಸಿ, ಪ್ರತಿಭಟನೆ ಮುಂದುವರಿದಿದೆ. ರೈತರ ಪ್ರತಿಭಟನೆಯ ಕಾವು ಹೆಚ್ಚಾದ ಬಳಿಕ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸದಂತೆ ತಡೆ ನೀಡಿತ್ತು.

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌, ಭಾನುವಾರ ನಡೆದ ಘಟನೆಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದರು. ಜಸ್ಟೀಸ್‌ ಖಾನ್‌ವಿಲ್ಕರ್‌ ಮಾತನಾಡಿ, “ಈ ರೀತಿಯ ಘಟನೆಗಳು ನಡೆದಾಗ ಯಾರೂ ಜವಾಬ್ದಾರಿಯನ್ನು ಹೊರುವುದಿಲ್ಲ. ದೈಹಿಕ ಹಾಗೂ ಆಸ್ತಿಪಾಸ್ತಿ ಹಾನಿಯಾಗುತ್ತದೆ. ಯಾರೂ ಹೊಣೆಗಾರಿಕೆ ಹೊರುವುದಿಲ್ಲ” ಎಂದಿದ್ದಾರೆ.

“ಕೃಷಿ ಕಾನೂನುಗಳ ವಿಷಯವನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವುದರಿಂದ ಯಾವುದೇ ಪ್ರತಿಭಟನೆ ನಡೆಸಬಾರದು” ಎಂದು ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಬ್ಬರೂ ವಾದಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.

“ಉನ್ನತ ಮಟ್ಟದ ಸಾಂವಿಧಾನಿಕ ನ್ಯಾಯಾಂಗದ ಮುಂದೆ ಪ್ರಕರಣ ಇದ್ದಾಗ , ಯಾರೂ ರಸ್ತೆಗಿಳಿಯಬಾರದು. ಅವರು ನಮ್ಮನ್ನು ನಂಬಬೇಕು” ಎಂದು ಮೆಹ್ತಾ ಹೇಳಿದ್ದಾರೆ.

`ಪ್ರತಿಭಟಿಸುವುದು ಸಂಪೂರ್ಣ ಹಕ್ಕು’ ಎಂಬುದನ್ನು ಸುಪ್ರೀಂ ಕೋರ್ಟ್ ಯಾವ ರೀತಿ ನೋಡಬಹುದು, ರೈತರ ಬೇಡಿಕೆಯಾದ ಮೂರು ವಿವಾದಿತ ಕಾಯ್ದೆಗಳ ಸಂಪೂರ್ಣ ರದ್ದು ಬೇಡಿಕೆಯನ್ನು ಯಾವ ರೀತಿ ವಿಶ್ಲೇಷಿಸಬಹುದು ಎಂಬುದು ಸದ್ಯದ ಕುತೂಹಲವಾಗಿದೆ.

ಇದನ್ನೂ ಓದಿರಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...