Homeಮುಖಪುಟರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ...

ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಮೇಲೆ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕು ಮತ್ತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ವರುಣ್ ಗಾಂಧಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ಅಕ್ಟೋಬರ್‌ 3ರಂದು ನಡೆದ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು ‘ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿರ್ದಯವಾಗಿ ಹೊಸಕಿಹಾಕುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಗೆ ನಾಗರಿಕರು ಮತ್ತು ದೇಶವು ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯ ಒಂದು ದಿನ ಮೊದಲು ಅಹಿಂಸೆಯ ಆರಾಧಕ ಮಹಾತ್ಮಗಾಂಧಿ ಅವರ ಜಯಂತಿ ಆಚರಿಸಿದ್ದೇವೆ. ಮರುದಿನವೇ ಲಖಿಂಪುರ್ ಖೇರಿಯಲ್ಲಿ ಅನ್ನದಾತರ ಹತ್ಯೆ ನಡೆದಿರುವುದು ಅಕ್ಷಮ್ಯ” ಎಂದು ವರುಣ್‌ ಗಾಂಧಿ ಬರೆದಿದ್ದಾರೆ.

ಹೋರಾಟನಿರತ ರೈತರು ನಮ್ಮ ಸೋದರರು, ನಮ್ಮ ನಾಗರಿಕರು. ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಿದ್ದಾರೆ ಮತ್ತು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಆಧಾರದ ಮೇಲೆ ಪ್ರತಿಭಟನೆ ಮಾಡುತ್ತಿದ್ದಾರೆ. ಅಂತಹವರ ಜೊತೆ ನಾವು ತಾಳ್ಮೆಯಿಂದ ವರ್ತಿಸಬೇಕು. ನಾವು ಯಾವುದೇ ಸಂದರ್ಭದಲ್ಲಿ ನಮ್ಮ ರೈತರೊಂದಿಗೆ ಗಾಂಧಿವಾದ ಮತ್ತು ಪ್ರಜಾತಾಂತ್ರಿಕ ರೀತಿಯಲ್ಲೇ ಕಾನೂನಿನ ಚೌಕಟ್ಟಿನೊಳಗೆ ಸಂವೇದನೆಶೀಲತೆಯೊಂದಿಗೆ ವ್ಯವಹರಿಸಬೇಕು. ಈ ಘಟನೆಯಲ್ಲಿ ಹುತಾತ್ಮರಾಗಿರುವ ರೈತ ಸೋದರರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ ಮತ್ತು ಅವರ ಕುಟುಂಬದವರ ದುಃಖವನ್ನು ಹಂಚಿಕೊಳ್ಳೂತ್ತೇನೆ” ಎಂದಿದ್ದಾರೆ.

”ನಿಮ್ಮಲ್ಲಿ ನನ್ನ ಮನವಿ ಏನೆಂದರೆ, ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಐಪಿಸಿ 302ರ ಪ್ರಕಾರ ಪ್ರಕರಣ ದಾಖಲಿಸಬೇಕು, ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸಿಬಿಐ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಸಂತ್ರಸ್ತ ರೈತ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಜೊತೆಗೆ ಭವಿಷ್ಯದಲ್ಲಿ ರೈತರ ವಿಷಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸುತ್ತೀರೆಂದು ಭಾವಿಸುತ್ತೇನೆ” ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....