Homeಕರ್ನಾಟಕಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

ಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಗಳ ಉಸ್ತುವಾರಿಗಳ ಪಟ್ಟಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಬಿಜೆಪಿ ಕೈಬಿಟ್ಟಿತ್ತು. ಈ ಬಗ್ಗೆ ವಿಜಯೇಂದ್ರ ಅವರ ಅಭಿಮಾನಿಗಳು ಬಿಜೆಪಿ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಅವರನ್ನು ಉಸ್ತುವಾರಿಗಳ ಪಟ್ಟಿಗೆ ಅವರ ಹೆಸರನ್ನು ಸೋಮವಾರ ಸೇರಿಸಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ವಿಜಯೇಂದ್ರ ಅವರ ಹೆಸರು ಬಿಜೆಪಿ ಕೈಬಿಟ್ಟ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಪಕ್ಷದ ಉನ್ನತ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಅವರು ಟ್ವಿಟರ್‌ನಲ್ಲಿ ಖಂಡಿಸಿದ್ದರು. “ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಪಕ್ಷವು ಅಕ್ಟೋಬರ್ 1 ರಂದು ಘೋಷಿಸಿದ್ದ ಉಸ್ತುವಾರಿಗಳ ಗುಂಪಿನಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರ ಹೆಸರು ಇರಲಿಲ್ಲ. ಅವರ ಅಭಿಮಾನಿಗಳ ಆಕ್ರೊಶ ವ್ಯಕ್ತವಾದ ನಂತರ, ಸೋಮವಾರ ಪಕ್ಷವು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹಾನಗಲ್‌ ಉಸ್ತುವಾರಿಯಾಗಿ ಅವರನ್ನು ಸೇರಿಸಿದ್ದಾರೆ. ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್ ಮತ್ತು ಸಂಸತ್ ಸದಸ್ಯ ಶಿವಕುಮಾರ ಉದಾಸಿ ಸೇರಿದಂತೆ ಒಟ್ಟು 13 ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಉಸ್ತುವಾರಿಯಾಗಿ, ಸಚಿವರಾದ ಗೋವಿಂದ್ ಕಾರಜೋ‌ಲ್, ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಪಟ್ಟಿಯಲ್ಲಿ ಇದ್ದಾರೆ.

ಸಿಂದಗಿಯಲ್ಲಿ ಜೆಡಿ(ಎಸ್) ಶಾಸಕರಾದ ಎಂ.ಸಿ. ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಅವರ ಮರಣದಿಂದಾಗಿ ಉಪಚುನಾವಣೆಗಳು ನಡೆಯುತ್ತಿದೆ.

ಕೆ.ಆರ್. ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರೇ ಹಾನಗಲ್ ಅಭ್ಯರ್ಥಿ ಎಂದು ಊಹಿಸಲಾಗಿತ್ತು.

ಇದನ್ನೂ ಓದಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಮೂಲಗಳ ಪ್ರಕಾರ, ಹಾನಗಲ್‌‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯಲ್ಲಿ ದಿವಂಗತ ಮಾಜಿ ಶಾಸಕ ಸಿ.ಎಂ. ಉದಾಸಿಯವರ ಸೊಸೆ, ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಕಲ್ಯಾಣ್ ಕುಮಾರ್ ಶೆಟ್ಟರ್ ಮತ್ತು ಶಿವರಾಜ್ ಸಜ್ಜನರ್‌ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಸಿಂದಗಿಯಲ್ಲಿ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ್, ಅಶೋಕ್ ಅಲ್ಲಾಪುರ, ಶಂಬುಲಿಂಗ ಕಕ್ಕಲಮೇಲಿ, ಸಿದ್ದು ಬಿರಾದಾರ್ ಮತ್ತು ಸಂಗನಗೌಡ ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಜೆಡಿ(ಎಸ್) ಈಗಾಗಲೇ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿಯಲ್ಲಿ ಮತ್ತು ನಿಯಾಜ್ ಶೇಖ್ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ದಿವಂಗತ ಎಂ.ಸಿ. ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಅವರನ್ನು ಸಿಂದಗಿಯಿಂದ ಅಭ್ಯರ್ಥಿಯಾಗಿ ಅಂತಿಮಗೊಳಿಸಿದೆ. ಹಾನಗಲ್‌ನಲ್ಲಿ ಮಾಜಿ ಎಂಎಲ್‌ಸಿ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಯಾಗಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...