Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...