Homeಮುಖಪುಟರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ. ಅದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ..

ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ..

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ನಿನ್ನೆ ರೈತರು ಆರೋಪಿಸಿದಂತೆ ಕಾರಿನ ಬಣ್ಣಕ್ಕೂ ಇಂದು ವೈರಲ್ ಆಗಿರುವ ಕಾರಿನ ಬಣ್ಣಕ್ಕೂ ಹೊಂದಾಣಿಕೆಯಾಗಿದೆ. ಅದೇ ರೀತಿ ಹಿಂದಿನಿಂದ ಬಂದು ಗುದ್ದಿದ್ದು ಸಹ ದಾಖಲಾಗಿದೆ. ವಿಡಿಯೋದಲ್ಲಿ ದಾಖಲಾಗಿರುವ ರೈತರೇ ಮೃತಪಟ್ಟಿರುವುದರಿಂದ ಈ ವಿಡಿಯೋಗೆ ಸಾಕಷ್ಟು ಮಾನ್ಯತೆ ಸಿಕ್ಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ “ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ನಿಮ್ಮ ಸರ್ಕಾರ ನನ್ನನ್ನು ಯಾವುದೇ ಎಫ್‌ಐಆರ್ ಅಥವಾ ಯಾವುದೇ ಆದೇಶವಿಲ್ಲದೆ ಕಳೆದ 28 ಗಂಟೆಗಳಿಂದ ಬಂಧನದಲ್ಲಿಟ್ಟಿದೆ. ಆದರೆ ಅನ್ನದಾತರ ಮೇಲೆ ಕಾರು ಹರಿಸಿದ ಈ ವ್ಯಕ್ತಿಯನ್ನುಇದುವರೆಗೂ ಬಂಧಿಸಿಲ್ಲ ಏಕೆ” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಎರಡು ವಿಡಿಯೋಗಳು ವೈರಲ್ ಆಗಿದ್ದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಲಾಗಿದೆ. ಮುಖ್ಯವಾಹಿನಿ ಮಾಧ್ಯಮಗಳು ಏಕೆ ಪ್ರಸಾರ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಭಾನುವಾರ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲಿನ ಹತ್ಯಾಕಾಂಡದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಸಚಿವ ಪಟ್ಟಿ ಮಾಡಿದ್ದವರಲ್ಲಿ ಒಬ್ಬ ಪತ್ರಕರ್ತ ಎಂದು ಮೃತನ ಕುಟುಂಬ ಸ್ಪಷ್ಟಪಡಿಸಿದೆ. ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಪ್ರತಿಭಟನೆಯನ್ನು ವರದಿ ಮಾಡಲು ಮುಂಜಾನೆಯೇ ಮನೆಯಿಂದ ಹೊರಟಿದ್ದ ರಮಣ್ ಕಶ್ಯಪ್ ನಾಪತ್ತೆಯಾಗಿದ್ದರು. ರಾತ್ರಿ 10 ರ ಸುಮಾರಿಗೆ ಲಖಿಂಪುರ್ ಖೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಿಂದ ಅವರು ಮೃತಪಟ್ಟಿರುವ ಸುದ್ದಿ ಮನೆಯವರಿಗೆ ತಲುಪಿತ್ತು.

ಮೃತ ರಮಣ್ ಕಶ್ಯಪ್ ಅವರ ಕುಟುಂಬವು, “ಕಶ್ಯಪ್ ವರದಿಗಾರರಾಗಿ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿರಲಿಲ್ಲ. ನನ್ನ ಮಗ ಪತ್ರಕರ್ತರಾಗಿದ್ದರು. ಮಿಶ್ರಾ ಅವರ ಮಗ ಆಶೀಶ್ ಮತ್ತು ಅವರ ಸಹಾಯಕರನ್ನು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...