Homeಮುಖಪುಟಶಿಕ್ಷಕ; ಅರಿವು ಮತ್ತು ಆಚರಣೆ - ಡಾ. ಸಿ.ಬಿ. ಐನಳ್ಳಿ

ಶಿಕ್ಷಕ; ಅರಿವು ಮತ್ತು ಆಚರಣೆ – ಡಾ. ಸಿ.ಬಿ. ಐನಳ್ಳಿ

ಶಿಕ್ಷಕರನ್ನ ದೈವತ್ವಕ್ಕೇರಿಸುವ ಸಂದೇಶಗಳಿಗೂ ಮತ್ತು ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ

- Advertisement -
- Advertisement -

ಶಿಕ್ಷಕರ ದಿನಾಚರಣೆಯ ದಿನ ಹರಿದಾಡುವ ವಾಟ್ಸಪ್ ಸಂದೇಶಗಳು ಮತ್ತು ಪ್ರೊಫೈಲ್ ಫೋಟೋಗಳು ಶಿಕ್ಷಕರನ್ನ ದೈವತ್ವಕ್ಕೇರಿಸಿ ಏಕಮುಖಿಯಾಗಿ ವೈಭವೀಕರಿಸುತ್ತಿರುತ್ತವೆ. ಗೌರವಿಸುವುದು ಅಪೇಕ್ಷಣೀಯ. ಆದರೆ ಇಂಥ ವೈಭವೀಕೃತ ಸಂದೇಶಗಳಿಗೂ ಮತ್ತು ನಮ್ಮ ತರಗತಿಗಳಲ್ಲಿ ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ ಎನಿಸುತ್ತದೆ. ಜ್ಞಾನವೆಂದರೆ ಅಕ್ಷರದ ತಿಳುವಳಿಕೆಯ ಮೂಲಕ ಗಳಿಸುವ ಮಾಹಿತಿ ಮತ್ತು ಶಿಕ್ಷಕರೆಂದರೆ ಅಕ್ಷರದ ತಿಳುವಳಿಕೆ ನೀಡಿ ಸಿದ್ಧಜ್ಞಾನವನ್ನು ನಮಗೆ ಪೂರೈಸುವವರು ಎಂಬ ದೃಷ್ಟಿಕೋನದಿಂದ ಉಂಟಾಗಿರುವ ಪರಿಣಾಮವಿದು.     ಅನಾರೋಗ್ಯಕರ ಸ್ಪರ್ಧೆಯಿಂದ ನರಳುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಈ ಕಾಲಘಟ್ಟದಲ್ಲಂತೂ, ಸುಲಭೋಪಾಯಗಳ ಮೂಲಕ ಅತಿ ಹೆಚ್ಚು ಅಂಕಗಳಿಸುವ ಕಲೆಯನ್ನ ಕಲಿಸುವವರು ಶ್ರೇಷ್ಠ ಶಿಕ್ಷಕರು ಎಂಬಂತಾಗಿದೆ; ಪರಿಣಾಮವಾಗಿ ಶಿಕ್ಷಕರಿಗೆ ಇರಬೇಕಿದ್ದ ಅರಿವಿನ ಪ್ರಚೋದಕ ಮತ್ತು ಅರಿವಿನ ಉತ್ಪಾದಕರ ಪಾತ್ರ ಅಲಕ್ಷ್ಯಕ್ಕೊಳಗಾದಂತಿದೆ.

ಮಾನವಿಕಗಳಂತಹ ಜ್ಞಾನಶಿಸ್ತುಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಅರಿವಿನ ಕೊಡು-ಕೊಳ್ಳುವಿಕೆಯಲ್ಲಿ ಕೆಲವೊಮ್ಮೆ ವಿದ್ಯಾರ್ಥಿಗಿರುವ ನೈಜ ಬದುಕಿನ ತಿಳುವಳಿಕೆ ಶಿಕ್ಷಕರ ಅಕಾಡೆಮಿಕ್ ಜ್ಞಾನವನ್ನು ಗೊಂದಲಕ್ಕೀಡುಮಾಡಿರುವುದು ಕೂಡಾ ಸೂಕ್ಷ್ಮ  ಸಂವೇದನೆಯುಳ್ಳ ಶಿಕ್ಷಕರ ಅನುಭವಕ್ಕೆ ಬಂದಿರುತ್ತದೆ. ಆದರೆ ನಿಗದಿಪಡಿಸಿದ ಪಠ್ಯದಲ್ಲಿರುವ ಸಂಗತಿಯೇ ಆತ್ಯಂತಿಕ ಸತ್ಯವೆಂಬ ಹುಸಿನಂಬಿಕೆಯಲ್ಲಿರುವವರಿಗೆ ಇದು ಗಮನಿಸಬೇಕಾದ ಸಂಗತಿಯೆನಿಸುವುದಿಲ್ಲ. ಬಹಳಷ್ಟು ಸಲ, ನಮ್ಮ ಸಾಂಪ್ರದಾಯಿಕ ಬೋಧನೆ-ಕಲಿಕೆಯ ಸಂದರ್ಭಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ಸಂಬಂಧವನ್ನ ಒಂದು ಅಧಿಕಾರದ  ಶ್ರೇಣಿಕೃತ  ಸಂಬಂಧದಂತೆ ಗ್ರಹಿಸಿರುವುದು ವಿದ್ಯಾರ್ಥಿಗಳ ಅರಿವಿನ ಸ್ವಚ್ಛಂದ ಮತ್ತು ಸ್ವತಂತ್ರ  ಅರಳುವಿಕೆಯನ್ನು ಸ್ವಲ್ಪಮಟ್ಟಿಗೆ ತಡೆದಂತೆ  ಕಾಣುತ್ತದೆ.

ಇಂತಹ ಗ್ರಹಿಕೆಗೆ ಕಾರಣವಾಗಿರುವ ನಮ್ಮ ಒಟ್ಟಾರೆ ಶಿಕ್ಷಣದ ಕ್ರಮವನ್ನು ನಿಕಷಕ್ಕೊಡ್ಡಬೇಕಿದೆ.  ಕಂಠಪಾಠ, ನೆನಪಿನ ಶಕ್ತಿ, ಸಾಮಾಜಿಕವಾಗಿ ವಿನಯಶೀಲ ನಡೆ-ನುಡಿ, ಸಮಾಜದ ಮುಖ್ಯಧಾರೆಯ ಮೌಲ್ಯವ್ಯವಸ್ಥೆ – ಇವುಗಳನ್ನು ಮಕ್ಕಳಲ್ಲಿ ರೂಢಿಸುವುದಕ್ಕೆ ಮಾತ್ರ  ಶಿಕ್ಷಣದ ವ್ಯವಸ್ಥೆ ಸೀಮಿತವಾದಂತಿದೆ.  ಪದವಿ ಹಂತದ ಸಮಾಜವಿಜ್ಞಾನಗಳು ಮತ್ತು ಮಾನವಿಕಗಳ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಚಿಂತನಶೀಲರನ್ನಾಗಿ ಮಾಡುವ ಪಾಠಗಳ ಪ್ರಮಾಣ ಎಷ್ಟಿದೆ? ಚಿಂತನಶೀಲತೆಯನ್ನು ಹುಟ್ಟಿಸದ ಶಿಕ್ಷಣ ಸ್ಥಾಪಿತವ್ಯವಸ್ಥೆ ಮತ್ತು ಯಥಾಸ್ಥಿತಿಯನ್ನು  ರಕ್ಷಿಸುತ್ತದೆ. ಆದ್ದರಿಂದ ನಮ್ಮ ಒಟ್ಟಾರೆ ಶಿಕ್ಷಣ ವ್ಯವಸ್ಥೆ ಯಾರ ದೃಷ್ಟಿಕೋನದಿಂದ ರೂಪಿಸಲ್ಪಟ್ಟಿದೆ ಎಂಬುದನ್ನು ಪುನರ್ ವಿಮರ್ಶಿಸಿಕೊಳ್ಳಬೇಕಿದೆ.

ಯಾವ ಸೈದ್ಧಾಂತಿಕತೆಯೂ ವೈಚಾರಿಕತೆಯೂ ಮತ್ತು ಜ್ಞಾನ ವ್ಯವಸ್ಥೆಯೂ ಆತ್ಯಂತಿಕವಲ್ಲ.   ಮನುಷ್ಯನ ನಾಗರಿಕತೆಯ ವಿಕಸನ ಪರಿಪೂರ್ಣವಾಗಿಲ್ಲ ; ಅದೊಂದು ಪ್ರಕ್ರಿಯೆಯಾದ್ದರಿಂದ  ಪರಿಪೂರ್ಣತೆ ಎಂಬುದು ಇರುವುದೂ ಇಲ್ಲ. ಸದ್ಯ, ನಾಗರೀಕತೆಯ ವಿಕಸನದ ಯಾವುದೋ ಒಂದು ಬಿಂದುವಿನಲ್ಲಿರುವ ನಾವು, ಸ್ಥಾಪಿತ ಸಂಪ್ರದಾಯಗಳು ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯನ್ನ ನಿರಂತರ ನಿಕಷಕ್ಕೊಡ್ಡುತ್ತಾ ವಿಕಸನದ ಪರಿಪೂರ್ಣತೆ ಎಂಬ ಮುಗಿಯದ ಹಾದಿಯಲ್ಲಿ ನಾಲ್ಕು ಹೊಸ ಹೆಜ್ಜೆ ಮುಂದಿಡಬೇಕಿದೆ. ಈ ಹಾದಿಯಲ್ಲಿ  ಮುನ್ನಡೆಸಲು, ಸಮಾಜದ ನಾನಾ ಸಮಸ್ಯೆಗಳಿಗೆ ತಾತ್ವಿಕ ಕಾರಣಗಳನ್ನು ತಿಳಿದು, ಅವುಗಳಿಗೆ  ಮದ್ದು ಅರೆಯುವಂತಹ ಚಿಂತನಶೀಲತೆಯನ್ನು ಹುಟ್ಟಿಸುವ ಶಿಕ್ಷಣಕ್ರಮ ಇಂದಿನ ಅಗತ್ಯ.  ಜಿಡ್ಡು ಕೃಷ್ಣಮೂರ್ತಿ ಮುಕ್ತವಾಗಿ ಮತ್ತು ನಿರ್ಭಯವಾಗಿ ಆಲೋಚಿಸುವಂತೆ ಕಲಿಸುವುದೇ ಶಿಕ್ಷಣದ ಬಹುಮುಖ್ಯವಾದ ಕಾರ್ಯ ಎನ್ನುತ್ತಾರೆ. ಈ  ದಿಸೆಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಿದ್ದಾರೆಯೇ? ಇದಕ್ಕೆ  ಅನುವು ಮಾಡಿಕೊಡುವಂತಹ ಶೈಕ್ಷಣಿಕ ನೀತಿ ರೂಪಿಸುವ ರಾಜಕೀಯ ವ್ಯವಸ್ಥೆ ನಮ್ಮಲ್ಲಿದೆಯೇ? ಇಂಥ ಮುಕ್ತ ಮತ್ತು ನಿರ್ಭಯ ಆಲೋಚನಾಕ್ರಮವನ್ನು ಪ್ರೋತ್ಸಾಹಿಸುವ ಕೆಲವೇ ಕೆಲವು ಉನ್ನತ ಶಿಕ್ಷಣದ ಸಂಸ್ಥೆಗಳು ಇಂದು ಕೇಡಿನ ಕೇಂದ್ರಗಳಂತೆ ಕೀಳೀಕರಿಸಲ್ಪಟ್ಟಿರುವುದು ಈ ಬಗ್ಗೆ ನಮ್ಮನ್ನು ನಿರಾಶರನ್ನಾಗಿಸುತ್ತದೆ.

ಜ್ಞಾನವೆಂಬುದು ಕೂಡ ಒಂದು ನಿರ್ಮಿತಿ. ಹಾಗಾಗಿ ಶಿಕ್ಷಣವೆಂದರೆ ಲೋಕವನ್ನು ಮತ್ತು ಅದು ಜ್ಞಾನವೆಂದು ಮುಂದಿಡುವ ಸಂಗತಿಯನ್ನು ವ್ಯಾಖ್ಯಾನಿಸುವ ವಿಶ್ಲೇಷಿಸುವ ತಾತ್ವಿಕರಿಸುವ ಸಾಮರ್ಥ್ಯವನ್ನು ಕೊಡುವುದು; ಆ ಮೂಲಕ ಲೋಕದ ಬಗೆಗಿನ ಜ್ಞಾನವನ್ನು ತಾವೇ ಕಟ್ಟಿಕೊಳ್ಳುವಂತೆ ಮಾಡುವುದು. ಬಸವಣ್ಣ, ಅಂಬೇಡ್ಕರ್, ಗಾಂಧಿ ತಮ್ಮ ಲೋಕಜ್ಞಾನವನ್ನು  ಸೃಜಿಸಿಕೊಂಡದ್ದು ಹೀಗೆಯೇ ಅಲ್ಲವೇ? ಬದುಕಿನ ಬಗೆಗಿನ ಸಹಜ ಕುತೂಹಲ, ಗುಮಾನಿ,  ಪ್ರಶ್ನಿಸುವಿಕೆ ಮತ್ತು ಪರ್ಯಾಯ ಆಲೋಚನಾ ಕ್ರಮಗಳು ಸಂಶೋಧನಾ ಹಂತದಲ್ಲಿ ಮಾತ್ರ  ಹುಟ್ಟಬೇಕಾದ ಮತ್ತು ಚರ್ಚಿಸಬೇಕಾದ ಸಂಗತಿಗಳೆಂದುಕೊಳ್ಳದೆ, ಇದಕ್ಕೆ ಪೂರಕವಾದ ಪಠ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪರಿಚಯಿಸಬೇಕಿದೆ.  ಯಾಕೆಂದರೆ, ಇಂದು ಮಾಹಿತಿ ಮತ್ತು ಜ್ಞಾನದ ನಡುವಿನ ವ್ಯತ್ಯಾಸವನ್ನು ಕೂಡ ಗುರುತಿಸದಂತಹ ಸ್ಥಿತಿಯಲ್ಲಿ ಯುವಜನಾಂಗವಿದೆ.

‘ಅರಿವಿಂಗೆ ಬಂಧವುಂಟಲ್ಲದೆ ಅರುಹಿಸಿಕೊಂಬವಂಗುಂಟೆ ಬಂಧ? ಅರಿದಿಹೆನೆಂಬ ಭ್ರಮೆ, ಅರುಹಿಸಿಕೊಂಡಿಹೆನೆಂಬ ಕುರುಹು, ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ’. ವಚನಕಾರ ಮಾದಾರ ದೂಳಯ್ಯನ ಈ  ಮಾತುಗಳಲ್ಲಿರುವ ಎಚ್ಚರ ನಮಗಿಂದು ಅಗತ್ಯವೆನಿಸುತ್ತದೆ. ನೀಡಿದ ಜ್ಞಾನದ ಬಗ್ಗೆ ಶಿಕ್ಷಕ ಮತ್ತು  ಗಳಿಸಿದ ಜ್ಞಾನದ ಬಗ್ಗೆ ವಿದ್ಯಾರ್ಥಿ ಇಬ್ಬರೂ ಅದು ಆತ್ಯಂತಿಕವೆಂದು ಭಾವಿಸದೆ, ಜ್ಞಾನವೆಂಬುದು ಒಂದು ಮುಕ್ತ ಅಂತ್ಯವುಳ್ಳ ಅರಿವಿನ ಪ್ರವಾಹವೆಂಬುದನ್ನು ಅರಿತು, ನಿರಂತರವಾಗಿ ಕ್ರಿಯಾಶೀಲರಾಗಿದ್ದಾಗ ಹೊಸ ಸಂಶೋಧಕರು, ಚಿಂತಕರು, ತತ್ವಜ್ಞಾನಿಗಳು, ವಿಜ್ಞಾನಿಗಳು  ಹುಟ್ಟಬಲ್ಲರು.

  • ಡಾ. ಸಿ.ಬಿ. ಐನಳ್ಳಿ
ಡಾ. ಸಿ. ಬಿ. ಐನಳ್ಳಿ

(ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯವರು. ಇಂಡಿಯನ್-ಅಮೇರಿಕನ್ ಲೇಖಕಿ ‘ಜುಂಪಾ ಲಾಹಿರಿಯ ಕೃತಿಗಳಲ್ಲಿ ವಸ್ತು ಮತ್ತು ತಂತ್ರಗಳ ಅಧ್ಯಯನ’ಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.)


ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...