Homeಮುಖಪುಟಶಿಕ್ಷಕ; ಅರಿವು ಮತ್ತು ಆಚರಣೆ - ಡಾ. ಸಿ.ಬಿ. ಐನಳ್ಳಿ

ಶಿಕ್ಷಕ; ಅರಿವು ಮತ್ತು ಆಚರಣೆ – ಡಾ. ಸಿ.ಬಿ. ಐನಳ್ಳಿ

ಶಿಕ್ಷಕರನ್ನ ದೈವತ್ವಕ್ಕೇರಿಸುವ ಸಂದೇಶಗಳಿಗೂ ಮತ್ತು ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ

- Advertisement -
- Advertisement -

ಶಿಕ್ಷಕರ ದಿನಾಚರಣೆಯ ದಿನ ಹರಿದಾಡುವ ವಾಟ್ಸಪ್ ಸಂದೇಶಗಳು ಮತ್ತು ಪ್ರೊಫೈಲ್ ಫೋಟೋಗಳು ಶಿಕ್ಷಕರನ್ನ ದೈವತ್ವಕ್ಕೇರಿಸಿ ಏಕಮುಖಿಯಾಗಿ ವೈಭವೀಕರಿಸುತ್ತಿರುತ್ತವೆ. ಗೌರವಿಸುವುದು ಅಪೇಕ್ಷಣೀಯ. ಆದರೆ ಇಂಥ ವೈಭವೀಕೃತ ಸಂದೇಶಗಳಿಗೂ ಮತ್ತು ನಮ್ಮ ತರಗತಿಗಳಲ್ಲಿ ಶಿಕ್ಷಕರ ಉಪನ್ಯಾಸವನ್ನು ಬಹಳಷ್ಟು ವಿದ್ಯಾರ್ಥಿಗಳು ಎಳ್ಳಷ್ಟೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿರುವುದಕ್ಕೂ ಸಂಬಂಧವಿದೆ ಎನಿಸುತ್ತದೆ. ಜ್ಞಾನವೆಂದರೆ ಅಕ್ಷರದ ತಿಳುವಳಿಕೆಯ ಮೂಲಕ ಗಳಿಸುವ ಮಾಹಿತಿ ಮತ್ತು ಶಿಕ್ಷಕರೆಂದರೆ ಅಕ್ಷರದ ತಿಳುವಳಿಕೆ ನೀಡಿ ಸಿದ್ಧಜ್ಞಾನವನ್ನು ನಮಗೆ ಪೂರೈಸುವವರು ಎಂಬ ದೃಷ್ಟಿಕೋನದಿಂದ ಉಂಟಾಗಿರುವ ಪರಿಣಾಮವಿದು.     ಅನಾರೋಗ್ಯಕರ ಸ್ಪರ್ಧೆಯಿಂದ ನರಳುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಈ ಕಾಲಘಟ್ಟದಲ್ಲಂತೂ, ಸುಲಭೋಪಾಯಗಳ ಮೂಲಕ ಅತಿ ಹೆಚ್ಚು ಅಂಕಗಳಿಸುವ ಕಲೆಯನ್ನ ಕಲಿಸುವವರು ಶ್ರೇಷ್ಠ ಶಿಕ್ಷಕರು ಎಂಬಂತಾಗಿದೆ; ಪರಿಣಾಮವಾಗಿ ಶಿಕ್ಷಕರಿಗೆ ಇರಬೇಕಿದ್ದ ಅರಿವಿನ ಪ್ರಚೋದಕ ಮತ್ತು ಅರಿವಿನ ಉತ್ಪಾದಕರ ಪಾತ್ರ ಅಲಕ್ಷ್ಯಕ್ಕೊಳಗಾದಂತಿದೆ.

ಮಾನವಿಕಗಳಂತಹ ಜ್ಞಾನಶಿಸ್ತುಗಳಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವಿನ ಅರಿವಿನ ಕೊಡು-ಕೊಳ್ಳುವಿಕೆಯಲ್ಲಿ ಕೆಲವೊಮ್ಮೆ ವಿದ್ಯಾರ್ಥಿಗಿರುವ ನೈಜ ಬದುಕಿನ ತಿಳುವಳಿಕೆ ಶಿಕ್ಷಕರ ಅಕಾಡೆಮಿಕ್ ಜ್ಞಾನವನ್ನು ಗೊಂದಲಕ್ಕೀಡುಮಾಡಿರುವುದು ಕೂಡಾ ಸೂಕ್ಷ್ಮ  ಸಂವೇದನೆಯುಳ್ಳ ಶಿಕ್ಷಕರ ಅನುಭವಕ್ಕೆ ಬಂದಿರುತ್ತದೆ. ಆದರೆ ನಿಗದಿಪಡಿಸಿದ ಪಠ್ಯದಲ್ಲಿರುವ ಸಂಗತಿಯೇ ಆತ್ಯಂತಿಕ ಸತ್ಯವೆಂಬ ಹುಸಿನಂಬಿಕೆಯಲ್ಲಿರುವವರಿಗೆ ಇದು ಗಮನಿಸಬೇಕಾದ ಸಂಗತಿಯೆನಿಸುವುದಿಲ್ಲ. ಬಹಳಷ್ಟು ಸಲ, ನಮ್ಮ ಸಾಂಪ್ರದಾಯಿಕ ಬೋಧನೆ-ಕಲಿಕೆಯ ಸಂದರ್ಭಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ಸಂಬಂಧವನ್ನ ಒಂದು ಅಧಿಕಾರದ  ಶ್ರೇಣಿಕೃತ  ಸಂಬಂಧದಂತೆ ಗ್ರಹಿಸಿರುವುದು ವಿದ್ಯಾರ್ಥಿಗಳ ಅರಿವಿನ ಸ್ವಚ್ಛಂದ ಮತ್ತು ಸ್ವತಂತ್ರ  ಅರಳುವಿಕೆಯನ್ನು ಸ್ವಲ್ಪಮಟ್ಟಿಗೆ ತಡೆದಂತೆ  ಕಾಣುತ್ತದೆ.

ಇಂತಹ ಗ್ರಹಿಕೆಗೆ ಕಾರಣವಾಗಿರುವ ನಮ್ಮ ಒಟ್ಟಾರೆ ಶಿಕ್ಷಣದ ಕ್ರಮವನ್ನು ನಿಕಷಕ್ಕೊಡ್ಡಬೇಕಿದೆ.  ಕಂಠಪಾಠ, ನೆನಪಿನ ಶಕ್ತಿ, ಸಾಮಾಜಿಕವಾಗಿ ವಿನಯಶೀಲ ನಡೆ-ನುಡಿ, ಸಮಾಜದ ಮುಖ್ಯಧಾರೆಯ ಮೌಲ್ಯವ್ಯವಸ್ಥೆ – ಇವುಗಳನ್ನು ಮಕ್ಕಳಲ್ಲಿ ರೂಢಿಸುವುದಕ್ಕೆ ಮಾತ್ರ  ಶಿಕ್ಷಣದ ವ್ಯವಸ್ಥೆ ಸೀಮಿತವಾದಂತಿದೆ.  ಪದವಿ ಹಂತದ ಸಮಾಜವಿಜ್ಞಾನಗಳು ಮತ್ತು ಮಾನವಿಕಗಳ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಚಿಂತನಶೀಲರನ್ನಾಗಿ ಮಾಡುವ ಪಾಠಗಳ ಪ್ರಮಾಣ ಎಷ್ಟಿದೆ? ಚಿಂತನಶೀಲತೆಯನ್ನು ಹುಟ್ಟಿಸದ ಶಿಕ್ಷಣ ಸ್ಥಾಪಿತವ್ಯವಸ್ಥೆ ಮತ್ತು ಯಥಾಸ್ಥಿತಿಯನ್ನು  ರಕ್ಷಿಸುತ್ತದೆ. ಆದ್ದರಿಂದ ನಮ್ಮ ಒಟ್ಟಾರೆ ಶಿಕ್ಷಣ ವ್ಯವಸ್ಥೆ ಯಾರ ದೃಷ್ಟಿಕೋನದಿಂದ ರೂಪಿಸಲ್ಪಟ್ಟಿದೆ ಎಂಬುದನ್ನು ಪುನರ್ ವಿಮರ್ಶಿಸಿಕೊಳ್ಳಬೇಕಿದೆ.

ಯಾವ ಸೈದ್ಧಾಂತಿಕತೆಯೂ ವೈಚಾರಿಕತೆಯೂ ಮತ್ತು ಜ್ಞಾನ ವ್ಯವಸ್ಥೆಯೂ ಆತ್ಯಂತಿಕವಲ್ಲ.   ಮನುಷ್ಯನ ನಾಗರಿಕತೆಯ ವಿಕಸನ ಪರಿಪೂರ್ಣವಾಗಿಲ್ಲ ; ಅದೊಂದು ಪ್ರಕ್ರಿಯೆಯಾದ್ದರಿಂದ  ಪರಿಪೂರ್ಣತೆ ಎಂಬುದು ಇರುವುದೂ ಇಲ್ಲ. ಸದ್ಯ, ನಾಗರೀಕತೆಯ ವಿಕಸನದ ಯಾವುದೋ ಒಂದು ಬಿಂದುವಿನಲ್ಲಿರುವ ನಾವು, ಸ್ಥಾಪಿತ ಸಂಪ್ರದಾಯಗಳು ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ವ್ಯವಸ್ಥೆಯನ್ನ ನಿರಂತರ ನಿಕಷಕ್ಕೊಡ್ಡುತ್ತಾ ವಿಕಸನದ ಪರಿಪೂರ್ಣತೆ ಎಂಬ ಮುಗಿಯದ ಹಾದಿಯಲ್ಲಿ ನಾಲ್ಕು ಹೊಸ ಹೆಜ್ಜೆ ಮುಂದಿಡಬೇಕಿದೆ. ಈ ಹಾದಿಯಲ್ಲಿ  ಮುನ್ನಡೆಸಲು, ಸಮಾಜದ ನಾನಾ ಸಮಸ್ಯೆಗಳಿಗೆ ತಾತ್ವಿಕ ಕಾರಣಗಳನ್ನು ತಿಳಿದು, ಅವುಗಳಿಗೆ  ಮದ್ದು ಅರೆಯುವಂತಹ ಚಿಂತನಶೀಲತೆಯನ್ನು ಹುಟ್ಟಿಸುವ ಶಿಕ್ಷಣಕ್ರಮ ಇಂದಿನ ಅಗತ್ಯ.  ಜಿಡ್ಡು ಕೃಷ್ಣಮೂರ್ತಿ ಮುಕ್ತವಾಗಿ ಮತ್ತು ನಿರ್ಭಯವಾಗಿ ಆಲೋಚಿಸುವಂತೆ ಕಲಿಸುವುದೇ ಶಿಕ್ಷಣದ ಬಹುಮುಖ್ಯವಾದ ಕಾರ್ಯ ಎನ್ನುತ್ತಾರೆ. ಈ  ದಿಸೆಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಿದ್ದಾರೆಯೇ? ಇದಕ್ಕೆ  ಅನುವು ಮಾಡಿಕೊಡುವಂತಹ ಶೈಕ್ಷಣಿಕ ನೀತಿ ರೂಪಿಸುವ ರಾಜಕೀಯ ವ್ಯವಸ್ಥೆ ನಮ್ಮಲ್ಲಿದೆಯೇ? ಇಂಥ ಮುಕ್ತ ಮತ್ತು ನಿರ್ಭಯ ಆಲೋಚನಾಕ್ರಮವನ್ನು ಪ್ರೋತ್ಸಾಹಿಸುವ ಕೆಲವೇ ಕೆಲವು ಉನ್ನತ ಶಿಕ್ಷಣದ ಸಂಸ್ಥೆಗಳು ಇಂದು ಕೇಡಿನ ಕೇಂದ್ರಗಳಂತೆ ಕೀಳೀಕರಿಸಲ್ಪಟ್ಟಿರುವುದು ಈ ಬಗ್ಗೆ ನಮ್ಮನ್ನು ನಿರಾಶರನ್ನಾಗಿಸುತ್ತದೆ.

ಜ್ಞಾನವೆಂಬುದು ಕೂಡ ಒಂದು ನಿರ್ಮಿತಿ. ಹಾಗಾಗಿ ಶಿಕ್ಷಣವೆಂದರೆ ಲೋಕವನ್ನು ಮತ್ತು ಅದು ಜ್ಞಾನವೆಂದು ಮುಂದಿಡುವ ಸಂಗತಿಯನ್ನು ವ್ಯಾಖ್ಯಾನಿಸುವ ವಿಶ್ಲೇಷಿಸುವ ತಾತ್ವಿಕರಿಸುವ ಸಾಮರ್ಥ್ಯವನ್ನು ಕೊಡುವುದು; ಆ ಮೂಲಕ ಲೋಕದ ಬಗೆಗಿನ ಜ್ಞಾನವನ್ನು ತಾವೇ ಕಟ್ಟಿಕೊಳ್ಳುವಂತೆ ಮಾಡುವುದು. ಬಸವಣ್ಣ, ಅಂಬೇಡ್ಕರ್, ಗಾಂಧಿ ತಮ್ಮ ಲೋಕಜ್ಞಾನವನ್ನು  ಸೃಜಿಸಿಕೊಂಡದ್ದು ಹೀಗೆಯೇ ಅಲ್ಲವೇ? ಬದುಕಿನ ಬಗೆಗಿನ ಸಹಜ ಕುತೂಹಲ, ಗುಮಾನಿ,  ಪ್ರಶ್ನಿಸುವಿಕೆ ಮತ್ತು ಪರ್ಯಾಯ ಆಲೋಚನಾ ಕ್ರಮಗಳು ಸಂಶೋಧನಾ ಹಂತದಲ್ಲಿ ಮಾತ್ರ  ಹುಟ್ಟಬೇಕಾದ ಮತ್ತು ಚರ್ಚಿಸಬೇಕಾದ ಸಂಗತಿಗಳೆಂದುಕೊಳ್ಳದೆ, ಇದಕ್ಕೆ ಪೂರಕವಾದ ಪಠ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪರಿಚಯಿಸಬೇಕಿದೆ.  ಯಾಕೆಂದರೆ, ಇಂದು ಮಾಹಿತಿ ಮತ್ತು ಜ್ಞಾನದ ನಡುವಿನ ವ್ಯತ್ಯಾಸವನ್ನು ಕೂಡ ಗುರುತಿಸದಂತಹ ಸ್ಥಿತಿಯಲ್ಲಿ ಯುವಜನಾಂಗವಿದೆ.

‘ಅರಿವಿಂಗೆ ಬಂಧವುಂಟಲ್ಲದೆ ಅರುಹಿಸಿಕೊಂಬವಂಗುಂಟೆ ಬಂಧ? ಅರಿದಿಹೆನೆಂಬ ಭ್ರಮೆ, ಅರುಹಿಸಿಕೊಂಡಿಹೆನೆಂಬ ಕುರುಹು, ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ’. ವಚನಕಾರ ಮಾದಾರ ದೂಳಯ್ಯನ ಈ  ಮಾತುಗಳಲ್ಲಿರುವ ಎಚ್ಚರ ನಮಗಿಂದು ಅಗತ್ಯವೆನಿಸುತ್ತದೆ. ನೀಡಿದ ಜ್ಞಾನದ ಬಗ್ಗೆ ಶಿಕ್ಷಕ ಮತ್ತು  ಗಳಿಸಿದ ಜ್ಞಾನದ ಬಗ್ಗೆ ವಿದ್ಯಾರ್ಥಿ ಇಬ್ಬರೂ ಅದು ಆತ್ಯಂತಿಕವೆಂದು ಭಾವಿಸದೆ, ಜ್ಞಾನವೆಂಬುದು ಒಂದು ಮುಕ್ತ ಅಂತ್ಯವುಳ್ಳ ಅರಿವಿನ ಪ್ರವಾಹವೆಂಬುದನ್ನು ಅರಿತು, ನಿರಂತರವಾಗಿ ಕ್ರಿಯಾಶೀಲರಾಗಿದ್ದಾಗ ಹೊಸ ಸಂಶೋಧಕರು, ಚಿಂತಕರು, ತತ್ವಜ್ಞಾನಿಗಳು, ವಿಜ್ಞಾನಿಗಳು  ಹುಟ್ಟಬಲ್ಲರು.

  • ಡಾ. ಸಿ.ಬಿ. ಐನಳ್ಳಿ
ಡಾ. ಸಿ. ಬಿ. ಐನಳ್ಳಿ

(ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯಲ್ಲಿ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಬಳ್ಳಾರಿ ಜಿಲ್ಲೆಯವರು. ಇಂಡಿಯನ್-ಅಮೇರಿಕನ್ ಲೇಖಕಿ ‘ಜುಂಪಾ ಲಾಹಿರಿಯ ಕೃತಿಗಳಲ್ಲಿ ವಸ್ತು ಮತ್ತು ತಂತ್ರಗಳ ಅಧ್ಯಯನ’ಕ್ಕಾಗಿ ಕರ್ನಾಟಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.)


ಇದನ್ನೂ ಓದಿ: ವೈಚಾರಿಕತೆಯನ್ನು ಕಡೆಗಣಿಸಿ ಅಬ್ಬರಿಸುವ ಜನಪ್ರಿಯ ನಟರ ಸಿನಿಮಾದಾಚೆಗಿನ ವಿಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...