Homeಚಳವಳಿಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಘಟನಾ ಸ್ಥಳದಲ್ಲಿದ್ದವರನ್ನು ಸಂಪರ್ಕಿಸಿ ‘ನ್ಯೂಸ್‌ಲ್ಯಾಂಡ್ರಿ’ ಸುದ್ದಿಜಾಲ ಮಾಡಿರುವ ‌ಈ ವರದಿಯು, ಕೇಂದ್ರ ಸಚಿವರ ಹೇಳಿಕೆಯನ್ನು ಅಲ್ಲಗಳೆಯುತ್ತದೆ. ಸಚಿವರ ಮಗ ಸ್ಥಳದಲ್ಲಿದ್ದ ಹಾಗೂ ಬಂದೂಕು ಬಳಸಿದ್ದ ಎನ್ನುತ್ತದೆ.

- Advertisement -
- Advertisement -

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಿಖಿಂಪುರ ಖೇರಿ ಪ್ರಾಂತ್ಯದಲ್ಲಿ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌‌ಕುಮಾರ್‌ ಮಿಶ್ರಾ ಅವರು, “ನನ್ನ ಪುತ್ರ ಘಟನಾ ಪ್ರದೇಶದಲ್ಲಿ ಇರಲಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಮೂರು ವಾಹನಗಳು ಏಕಾಏಕಿ ನುಗ್ಗಿದ್ದವು. ಅದರಲ್ಲಿ ಒಂದು ವಾಹನವನ್ನು ಅಜಯ್‌ ಮಿಶ್ರಾ ಅವರ ಮಗ ಅಶೀಶ್‌ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ರೈತರು ದೂರಿದ್ದಾರೆ. ಅಂದು ನಡೆದ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

ರೈತರು ಸುಮ್ಮನೆ ನಡೆದುಕೊಂಡು ಹೋಗುವಾಗ ಮೂರು ವಾಹನಗಳು ರೈತರತ್ತ ನುಗ್ಗಿದೆ. ಒಬ್ಬ ರೈತನಿಗೆ ಕಾರಿನ ಬ್ಯಾನೆಟ್‌ ಹೊಡೆದಿದೆ. ಆದರೂ ಅದು ನಿಲ್ಲಲಿಲ್ಲ ಎಂಬುದನ್ನು ಟ್ವಿಟರ್‌‌ನಲ್ಲಿ ಶೇರ್‌ ಮಾಡಲಾಗಿರುವ 29 ಸೆಕೆಂಡ್‌ಗಳ ಒಂದು ವಿಡಿಯೋ ತಿಳಿಸಿದೆ. ಸಿಟ್ಟಿಗೆದ್ದ ರೈತರು ಗಾಡಿ ಚಾಲನೆ ಮಾಡುತ್ತಿದ್ದ ಒಬ್ಬನಿಗೆ ಹೊಡೆದಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕನನ್ನು ವಾಹನದಿಂದ “ಎಳೆದೋಯ್ದರು” ಎಂದು ಅವರು ಹೇಳಿದ್ದರು. “ನಾನು ಎರಡು ದಿನಗಳಿಂದ ಪ್ರತಿಭಟನಾ ಸ್ಥಳದ ಬಳಿ ಇರಲಿಲ್ಲ” ಎಂದು ಆಶೀಶ್ ಹೇಳಿದ್ದರು.

ಅಜಯ್‌ ಮಿಶ್ರ ಪ್ರತಿಕ್ರಿಯಿಸಿ, ಘಟನೆ ನಡೆದ ದಿನ ನನ್ನ ಮಗ ಬನ್ವಿಪುರ ಕುಸ್ತಿ ಪಂದ್ಯಾವಳಿಯಲ್ಲಿ ಇದ್ದರು.  ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನು. ಇದು ಖಾಲಿಸ್ತಾನಿಗಳಿಂದಾದ ಘಟನೆ ಎಂದು ದೂರಿದ್ದರು. ಆದರೆ ಘಟನೆಯ ಪ್ರತ್ಯಕ್ಷದರ್ಶಿಗಳನ್ನು ಸಂದರ್ಶಿಸಿ ನ್ಯೂಸ್‌ ಲ್ಯಾಂಡ್ರಿ ವರದಿ ಮಾಡಿದ್ದು, ಬೇರೆ ಸಂಗತಿಗಳನ್ನು ಮುನ್ನಲೆಗೆ ತಂದಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದೇನು?

ಸೆಪ್ಟೆಂಬರ್‌ 25ರಂದು ಅಜಯ್‌ಕುಮಾರ್ ಮಿಶ್ರಾ ರೈತರ ಬಗ್ಗೆ ಲಘುವಾಗಿ ಮಾತನಾಡಿದ್ದರು. “ಅವರು ನನ್ನನ್ನು ಎದುರಿಸಲಿ. ಎರಡು ನಿಮಿಷಗಳಲ್ಲಿ ಅವರನ್ನು ಖಾಲಿ ಮಾಡಿಸುತ್ತೇನೆ” ಎಂದು ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ರೈತರು ಸೇರಿದ್ದರು.

ಅಕ್ಟೋಬರ್‌ 3ರಂದು ಬನ್ವೀಪುರದಲ್ಲಿ ಆಯೋಜಿಸಿದ್ದ ಸ್ಥಳೀಯ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಕೇಶವ್‌ ಪ್ರಸಾ‌ದ್ ಮೌರ್ಯ ಹಾಗೂ ಅಜಯ್‌ ಕುಮಾರ್‌ ಮಿಶ್ರಾ ತಿಕುನಿಯಾದ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದರು. ಹೀಗಾಗಿ ಮಹಾರಾಜ ಅಕ್ರಸೇನ ಕಾಲೇಜು ಮೈದಾನದಲ್ಲಿ (ಹೆಲಿಪ್ಯಾಡ್‌ ಇರುವ ಸ್ಥಳ) ರೈತರು ಸೇರಿದ್ದರು.

ಅಂದು ಬೆಳಿಗ್ಗೆ 11.30ರ ವೇಳೆಗೆ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ಕುರಿತು ಅಂದು ಬೆಳಿಗ್ಗೆ ಹಾಜರಿದ್ದ ದಿಲ್ಬಾಗ್‌ ಸಿಂಗ್‌ ಹೇಳಿಕೆ ನೀಡಿದ್ದು, “ಮಿಶ್ರಾ ಮತ್ತು ಮೌರ್ಯ ಆಗಮಿಸುವ ಮೊದಲ ಜಿಲ್ಲಾಧಿಕಾರಿಯವರು, ತಮ್ಮ ಪ್ರತಿಭಟನೆಯನ್ನು ಸದರಿ ಸ್ಥಳದಲ್ಲಿಯೇ ಮುಂದುವರಿಸಬಹುದು, ಶ್ರೀಯುತ ಮಿಶ್ರಾ ಮತ್ತು ಮೌರ್ಯ ಈ ಕಾರ್ಯಕ್ರಮಕ್ಕೆ ಹಾಜರಾಗಲು ಬೇರೆ ಮಾರ್ಗವನ್ನು ಅನುಸರಿಸಲಿದ್ದಾರೆ ಎಂದು ರೈತರಿಗೆ ಹೇಳಿದರು” ಎಂದಿದ್ದಾರೆ.

ಹಾಗಾಗಿ, ಅವರಿಬ್ಬರು ಹೆಲಿಕಾಪ್ಟರ್ ಮೂಲಕ ಬಾರದೆ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿದರು. ಸಚಿವರು ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಕಾರ್ಯಕ್ರಮಕ್ಕೆ ಹಾಜರಾದರು. ಅದು ಮಧ್ಯಾಹ್ನದ ವೇಳೆಗೆ ಕಾರ್ಯಕ್ರಮ ಕೊನೆಗೊಂಡಿತು.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ಮಧ್ಯಾಹ್ನ ನಾಲ್ಕು ಗಂಟೆಯಾದರೂ ಪ್ರತಿಭಟನೆಯನ್ನು ಕಾಲೇಜು ಆವರಣದಲ್ಲಿ ರೈತರು ಮುಂದುವರಿಸಿದರು. ವಿಶ್ರಾ ಮತ್ತು ಮೌರ್ಯ ಬಾರದಿದ್ದಾಗ ರೈತರು ಹಿಂತಿರುಗಿದ್ದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜೋಗ್ಮಿತ್ತಲ್‌ ಸಿಂಗ್‌ ಹೇಳುತ್ತಾರೆ: “ಎಲ್ಲರೂ ಸ್ವಲ್ಪ ನಿರಾಳವಾಗಿದ್ದರು. ಲಂಗರ್ ಹಾಕಲಾಗಿತ್ತು. ಎಲ್ಲರೂ ಆಹಾರ ಸೇವಿಸುವುದರಲ್ಲಿ ನಿರತರಾಗಿದ್ದರು. ಊಟ ಮಾಡಿದವರು ಹೊರಡಲು ಆರಂಭಿಸಿದರು. ನಂತರ, ನಮ್ಮತ್ತ ಒಂದು ಫಾರ್ಚೂನರ್, ಒಂದು ಸ್ಕಾರ್ಪಿಯೋ ಮತ್ತು ಒಂದು ಥಾರ್ ಅತಿವೇಗವಾಗಿ ನಮ್ಮ ಕಡೆಗೆ ಬರುತ್ತಿರುವುದನ್ನು ನೋಡಿದೆವು. ಜನರ ಸಮೀಪ ಬರುತ್ತಿದ್ದರೂ ಆ ಮೂರು ವಾಹನಗಳು ನಿಧಾನವಾಗಲೇ ಇಲ್ಲ.”

“ಕೆಲವು ರೈತರು ತಕ್ಷಣಕ್ಕೆ ಬದಿಗೆ ಸರಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ವಾಹನಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡರು. ವಾಹನಗಳು ನಿಧಾನವಾಗಲೇ ಇಲ್ಲ. ದೇಹಗಳನ್ನು ರಸ್ತೆಯ ಉದ್ದಕ್ಕೂ ಎಳೆದೋಯ್ದವು. ಅಷ್ಟರಲ್ಲಿ, ಫಾರ್ಚೂನರ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿತು. ಇನ್ನೊಂದು ವಾಹನದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಲು ಆರಂಭಿಸಿದರು. ತುಂಬಾ ಧೂಳು ಇತ್ತು, ಆರಂಭದಲ್ಲಿ ಏನಾಗುತ್ತಿದೆ ಎಂದು ನೋಡಲು ಕಷ್ಟವಾಗಿತ್ತು” ಎನ್ನುತ್ತಾರೆ ಜೋಗ್ಮಿತ್ತಲ್ ಸಿಂಗ್‌.

ಮುಂದುವರಿದು ಹೇಳುತ್ತಾರೆ: “ಒಬ್ಬಾತ ಸಾವಿಗೀಡಾದರು, ಒಬ್ಬಾತ ಸಾವಿಗೀಡಾದರು” ಎಂದು ಎಲ್ಲರೂ ಕೂಗಾಡಲು ಶುರುಮಾಡಿದರು. ಒಂದು ವಾಹನ ನಿಯಂತ್ರಣ ಕಳೆದುಕೊಂಡು ಮಗುಚಿಬಿತ್ತು. ಆಗ ಬಂದೂಕಿನ ಸುರುಮಳೆಯಾಯಿತು. ಒಬ್ಬಾತ ದೇವಾಲಯ ಬಳಿ ಗುಂಡಿಗೆ ಬಲಿಯಾದ ಹಾಗೂ ಬಂದೂಕಿನ ಶಬ್ದವನ್ನು ನಾನು ಆಲಿಸಿದೆ” ಎಂದಿದ್ದಾರೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ಗುರುಸೇವಕ್‌ ಸಿಂಗ್‌ ಮಾತನಾಡಿ, “ಒಂದು ವಾಹನದಲ್ಲಿದ್ದವರು ಓಡಲು ಆರಂಭಿಸಿದಾಗ ಬಂದೂಕು ಬಳಸಲು ಆರಂಭಿಸಿದರು. ಗಾಯಗೊಂಡವರನ್ನು ರಕ್ಷಿಸಲು ರೈತರು ಯತ್ನಿಸಿದರು. ಆದರೆ ಬಂದೂಕಿನ ಮಳೆಗರೆಯುವುದು ಮುಂದುವರಿದಾಗ ಎಲ್ಲರೂ ಸುಮ್ಮನೇ ನೋಡುತ್ತಾ ಇರಬೇಕಾಯಿತು. ಪ್ರತಿಭಟನೆಯ ಕಾರಣ ಸ್ಥಳದಲ್ಲಿದ್ದ ಪೊಲೀಸರೂ ಓಡಲಾರಂಭಿಸಿದರು” ಎಂದು ಹೇಳಿದ್ದಾರೆ.

ವಾಹನ ಉರುಳಿತು. ಇಬ್ಬರು ಬಿಜೆಪಿ ಕಾರ್ಯಕರ್ತರು, ವಾಹನ ಚಾಲಕ ಸೇರಿ ಮೂವರು ಸಾವನ್ನಪಿದರು. ರೊಚ್ಚಿಗೆದ್ದ ರೈತರು ವಾಹನ ಚಾಲಕನಿಗೆ ಹೊಡೆದರು. ಭಾನುವಾರ ಆಶೀಶ್‌ ಮಿಶ್ರಾ ಅಲ್ಲಿದ್ದನ್ನು ಅನೇಕರು ಗುರುತಿಸಿದ್ದಾರೆ. ಎಲ್ಲರಿಗೂ ಆತ ಯಾರೆಂಬುದು ಗೊತ್ತಿತ್ತು. ಆತ ಮಂತ್ರಿಯ ಮಗ ಎಂಬುದು ತಿಳಿದಿತ್ತು ಎನ್ನಲಾಗಿದೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ತಲ್ವೀರ್‌ ಸಿಂಗ್‌ ಹೇಳಿಕೆ ನೀಡಿದ್ದು, “ರೈತರ ಮೇಲೆ ನುಗ್ಗಿದ ಒಂದು ಕಾರನ್ನು ಆಶೀಶ್‌ ಚಾಲನೆ ಮಾಡುತ್ತಿದ್ದ. ಆಶೀಶ್‌ ಓಡುತ್ತಾ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಹಲವರು ನೋಡಿದ್ದಾರೆ” ಎಂದಿದ್ದಾರೆ.

ಆಶೀಶ್‌ ಪಿಸ್ತೂಲ್‌ ತುಂಬುತ್ತಿರುವ ವಿಡಿಯೋಕ್ಲಿಪ್‌ಅನ್ನು ಪ್ರತ್ಯಕ್ಷದರ್ಶಿಗಳು ನ್ಯೂಸ್‌ಲ್ಯಾಂಡ್ರಿಗೆ ತೋರಿಸಿದ್ದಾರೆ. “ಅಂದು ಮಧ್ಯಾಹ್ನ ಮೂರು ಗಂಟೆಯ ವೇಳೆಯಲ್ಲಿ ಘಟನೆ ನಡೆಯುವ ಮುನ್ನ, ಘಟನಾ ಸ್ಥಳದಿಂದ ಮೂರು ಕಿ.ಮೀ. ದೂರದ ರೈಸ್‌ಮಿಲ್‌ ಬಳಿಯಿಂದ ಫೇಸ್‌ಬುಕ್ ಲೈವ್ ಆಗಿದೆ” ಎನ್ನುತ್ತಾರೆ ಗುರ್‌ಸೇವಕ್‌ ಸಿಂಗ್‌.

“ಆದರೆ ಈ ವಿಡಿಯೋ ಕ್ಲಿಪ್ ಬ್ಲರ್‌ ಆಗಿದ್ದು, ಆದರೆ ವಿಡಿಯೋದಲ್ಲಿರುವುದು ಆಶೀಶ್‌ ಎಂದು ಅನೇಕ ಸ್ಥಳೀಯರು ಗುರುತಿಸಿದ್ದಾರೆ. ಈ ವ್ಯಕ್ತಿ ಆಶೀಶ್‌ ಆದರೂ ಆತ ಪಿಸ್ತೂಲು ಹಿಡಿದಿದ್ದ ಎಂಬುದನ್ನು ಗುರುತಿಸಲಾಗಿಲ್ಲ ಎಂದು ನ್ಯೂಸ್‌ಲ್ಯಾಂಡ್ರಿ ವರದಿ ಮಾಡಿದೆ. ಆದರೆ ಘಟನಾ ಸ್ಥಳದಲ್ಲಿ ಆಶೀಶ್‌ ಇರಲಿಲ್ಲ ಎಂಬ ವಾದವನ್ನು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಅಲ್ಲಗಳೆಯುತ್ತವೆ.

ಕೃಪೆ: ನ್ಯೂಸ್‌ಲ್ಯಾಂಡ್ರಿ

 ಇದನ್ನೂ ಓದಿರಿ: #भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...