Homeಚಳವಳಿಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಘಟನಾ ಸ್ಥಳದಲ್ಲಿದ್ದವರನ್ನು ಸಂಪರ್ಕಿಸಿ ‘ನ್ಯೂಸ್‌ಲ್ಯಾಂಡ್ರಿ’ ಸುದ್ದಿಜಾಲ ಮಾಡಿರುವ ‌ಈ ವರದಿಯು, ಕೇಂದ್ರ ಸಚಿವರ ಹೇಳಿಕೆಯನ್ನು ಅಲ್ಲಗಳೆಯುತ್ತದೆ. ಸಚಿವರ ಮಗ ಸ್ಥಳದಲ್ಲಿದ್ದ ಹಾಗೂ ಬಂದೂಕು ಬಳಸಿದ್ದ ಎನ್ನುತ್ತದೆ.

- Advertisement -
- Advertisement -

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಿಖಿಂಪುರ ಖೇರಿ ಪ್ರಾಂತ್ಯದಲ್ಲಿ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್‌‌ಕುಮಾರ್‌ ಮಿಶ್ರಾ ಅವರು, “ನನ್ನ ಪುತ್ರ ಘಟನಾ ಪ್ರದೇಶದಲ್ಲಿ ಇರಲಿಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ ಮೂರು ವಾಹನಗಳು ಏಕಾಏಕಿ ನುಗ್ಗಿದ್ದವು. ಅದರಲ್ಲಿ ಒಂದು ವಾಹನವನ್ನು ಅಜಯ್‌ ಮಿಶ್ರಾ ಅವರ ಮಗ ಅಶೀಶ್‌ ಮಿಶ್ರಾ ಚಾಲನೆ ಮಾಡುತ್ತಿದ್ದರು ಎಂದು ರೈತರು ದೂರಿದ್ದಾರೆ. ಅಂದು ನಡೆದ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು.

ರೈತರು ಸುಮ್ಮನೆ ನಡೆದುಕೊಂಡು ಹೋಗುವಾಗ ಮೂರು ವಾಹನಗಳು ರೈತರತ್ತ ನುಗ್ಗಿದೆ. ಒಬ್ಬ ರೈತನಿಗೆ ಕಾರಿನ ಬ್ಯಾನೆಟ್‌ ಹೊಡೆದಿದೆ. ಆದರೂ ಅದು ನಿಲ್ಲಲಿಲ್ಲ ಎಂಬುದನ್ನು ಟ್ವಿಟರ್‌‌ನಲ್ಲಿ ಶೇರ್‌ ಮಾಡಲಾಗಿರುವ 29 ಸೆಕೆಂಡ್‌ಗಳ ಒಂದು ವಿಡಿಯೋ ತಿಳಿಸಿದೆ. ಸಿಟ್ಟಿಗೆದ್ದ ರೈತರು ಗಾಡಿ ಚಾಲನೆ ಮಾಡುತ್ತಿದ್ದ ಒಬ್ಬನಿಗೆ ಹೊಡೆದಿದ್ದಾರೆ.

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕನನ್ನು ವಾಹನದಿಂದ “ಎಳೆದೋಯ್ದರು” ಎಂದು ಅವರು ಹೇಳಿದ್ದರು. “ನಾನು ಎರಡು ದಿನಗಳಿಂದ ಪ್ರತಿಭಟನಾ ಸ್ಥಳದ ಬಳಿ ಇರಲಿಲ್ಲ” ಎಂದು ಆಶೀಶ್ ಹೇಳಿದ್ದರು.

ಅಜಯ್‌ ಮಿಶ್ರ ಪ್ರತಿಕ್ರಿಯಿಸಿ, ಘಟನೆ ನಡೆದ ದಿನ ನನ್ನ ಮಗ ಬನ್ವಿಪುರ ಕುಸ್ತಿ ಪಂದ್ಯಾವಳಿಯಲ್ಲಿ ಇದ್ದರು.  ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನು. ಇದು ಖಾಲಿಸ್ತಾನಿಗಳಿಂದಾದ ಘಟನೆ ಎಂದು ದೂರಿದ್ದರು. ಆದರೆ ಘಟನೆಯ ಪ್ರತ್ಯಕ್ಷದರ್ಶಿಗಳನ್ನು ಸಂದರ್ಶಿಸಿ ನ್ಯೂಸ್‌ ಲ್ಯಾಂಡ್ರಿ ವರದಿ ಮಾಡಿದ್ದು, ಬೇರೆ ಸಂಗತಿಗಳನ್ನು ಮುನ್ನಲೆಗೆ ತಂದಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದೇನು?

ಸೆಪ್ಟೆಂಬರ್‌ 25ರಂದು ಅಜಯ್‌ಕುಮಾರ್ ಮಿಶ್ರಾ ರೈತರ ಬಗ್ಗೆ ಲಘುವಾಗಿ ಮಾತನಾಡಿದ್ದರು. “ಅವರು ನನ್ನನ್ನು ಎದುರಿಸಲಿ. ಎರಡು ನಿಮಿಷಗಳಲ್ಲಿ ಅವರನ್ನು ಖಾಲಿ ಮಾಡಿಸುತ್ತೇನೆ” ಎಂದು ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿ ರೈತರು ಸೇರಿದ್ದರು.

ಅಕ್ಟೋಬರ್‌ 3ರಂದು ಬನ್ವೀಪುರದಲ್ಲಿ ಆಯೋಜಿಸಿದ್ದ ಸ್ಥಳೀಯ ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಕೇಶವ್‌ ಪ್ರಸಾ‌ದ್ ಮೌರ್ಯ ಹಾಗೂ ಅಜಯ್‌ ಕುಮಾರ್‌ ಮಿಶ್ರಾ ತಿಕುನಿಯಾದ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದರು. ಹೀಗಾಗಿ ಮಹಾರಾಜ ಅಕ್ರಸೇನ ಕಾಲೇಜು ಮೈದಾನದಲ್ಲಿ (ಹೆಲಿಪ್ಯಾಡ್‌ ಇರುವ ಸ್ಥಳ) ರೈತರು ಸೇರಿದ್ದರು.

ಅಂದು ಬೆಳಿಗ್ಗೆ 11.30ರ ವೇಳೆಗೆ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿ ಕುರಿತು ಅಂದು ಬೆಳಿಗ್ಗೆ ಹಾಜರಿದ್ದ ದಿಲ್ಬಾಗ್‌ ಸಿಂಗ್‌ ಹೇಳಿಕೆ ನೀಡಿದ್ದು, “ಮಿಶ್ರಾ ಮತ್ತು ಮೌರ್ಯ ಆಗಮಿಸುವ ಮೊದಲ ಜಿಲ್ಲಾಧಿಕಾರಿಯವರು, ತಮ್ಮ ಪ್ರತಿಭಟನೆಯನ್ನು ಸದರಿ ಸ್ಥಳದಲ್ಲಿಯೇ ಮುಂದುವರಿಸಬಹುದು, ಶ್ರೀಯುತ ಮಿಶ್ರಾ ಮತ್ತು ಮೌರ್ಯ ಈ ಕಾರ್ಯಕ್ರಮಕ್ಕೆ ಹಾಜರಾಗಲು ಬೇರೆ ಮಾರ್ಗವನ್ನು ಅನುಸರಿಸಲಿದ್ದಾರೆ ಎಂದು ರೈತರಿಗೆ ಹೇಳಿದರು” ಎಂದಿದ್ದಾರೆ.

ಹಾಗಾಗಿ, ಅವರಿಬ್ಬರು ಹೆಲಿಕಾಪ್ಟರ್ ಮೂಲಕ ಬಾರದೆ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿದರು. ಸಚಿವರು ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಕಾರ್ಯಕ್ರಮಕ್ಕೆ ಹಾಜರಾದರು. ಅದು ಮಧ್ಯಾಹ್ನದ ವೇಳೆಗೆ ಕಾರ್ಯಕ್ರಮ ಕೊನೆಗೊಂಡಿತು.

ಇದನ್ನೂ ಓದಿರಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ವಕೀಲರ ಪತ್ರ

ಮಧ್ಯಾಹ್ನ ನಾಲ್ಕು ಗಂಟೆಯಾದರೂ ಪ್ರತಿಭಟನೆಯನ್ನು ಕಾಲೇಜು ಆವರಣದಲ್ಲಿ ರೈತರು ಮುಂದುವರಿಸಿದರು. ವಿಶ್ರಾ ಮತ್ತು ಮೌರ್ಯ ಬಾರದಿದ್ದಾಗ ರೈತರು ಹಿಂತಿರುಗಿದ್ದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜೋಗ್ಮಿತ್ತಲ್‌ ಸಿಂಗ್‌ ಹೇಳುತ್ತಾರೆ: “ಎಲ್ಲರೂ ಸ್ವಲ್ಪ ನಿರಾಳವಾಗಿದ್ದರು. ಲಂಗರ್ ಹಾಕಲಾಗಿತ್ತು. ಎಲ್ಲರೂ ಆಹಾರ ಸೇವಿಸುವುದರಲ್ಲಿ ನಿರತರಾಗಿದ್ದರು. ಊಟ ಮಾಡಿದವರು ಹೊರಡಲು ಆರಂಭಿಸಿದರು. ನಂತರ, ನಮ್ಮತ್ತ ಒಂದು ಫಾರ್ಚೂನರ್, ಒಂದು ಸ್ಕಾರ್ಪಿಯೋ ಮತ್ತು ಒಂದು ಥಾರ್ ಅತಿವೇಗವಾಗಿ ನಮ್ಮ ಕಡೆಗೆ ಬರುತ್ತಿರುವುದನ್ನು ನೋಡಿದೆವು. ಜನರ ಸಮೀಪ ಬರುತ್ತಿದ್ದರೂ ಆ ಮೂರು ವಾಹನಗಳು ನಿಧಾನವಾಗಲೇ ಇಲ್ಲ.”

“ಕೆಲವು ರೈತರು ತಕ್ಷಣಕ್ಕೆ ಬದಿಗೆ ಸರಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ವಾಹನಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡರು. ವಾಹನಗಳು ನಿಧಾನವಾಗಲೇ ಇಲ್ಲ. ದೇಹಗಳನ್ನು ರಸ್ತೆಯ ಉದ್ದಕ್ಕೂ ಎಳೆದೋಯ್ದವು. ಅಷ್ಟರಲ್ಲಿ, ಫಾರ್ಚೂನರ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿತು. ಇನ್ನೊಂದು ವಾಹನದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಲು ಆರಂಭಿಸಿದರು. ತುಂಬಾ ಧೂಳು ಇತ್ತು, ಆರಂಭದಲ್ಲಿ ಏನಾಗುತ್ತಿದೆ ಎಂದು ನೋಡಲು ಕಷ್ಟವಾಗಿತ್ತು” ಎನ್ನುತ್ತಾರೆ ಜೋಗ್ಮಿತ್ತಲ್ ಸಿಂಗ್‌.

ಮುಂದುವರಿದು ಹೇಳುತ್ತಾರೆ: “ಒಬ್ಬಾತ ಸಾವಿಗೀಡಾದರು, ಒಬ್ಬಾತ ಸಾವಿಗೀಡಾದರು” ಎಂದು ಎಲ್ಲರೂ ಕೂಗಾಡಲು ಶುರುಮಾಡಿದರು. ಒಂದು ವಾಹನ ನಿಯಂತ್ರಣ ಕಳೆದುಕೊಂಡು ಮಗುಚಿಬಿತ್ತು. ಆಗ ಬಂದೂಕಿನ ಸುರುಮಳೆಯಾಯಿತು. ಒಬ್ಬಾತ ದೇವಾಲಯ ಬಳಿ ಗುಂಡಿಗೆ ಬಲಿಯಾದ ಹಾಗೂ ಬಂದೂಕಿನ ಶಬ್ದವನ್ನು ನಾನು ಆಲಿಸಿದೆ” ಎಂದಿದ್ದಾರೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ಗುರುಸೇವಕ್‌ ಸಿಂಗ್‌ ಮಾತನಾಡಿ, “ಒಂದು ವಾಹನದಲ್ಲಿದ್ದವರು ಓಡಲು ಆರಂಭಿಸಿದಾಗ ಬಂದೂಕು ಬಳಸಲು ಆರಂಭಿಸಿದರು. ಗಾಯಗೊಂಡವರನ್ನು ರಕ್ಷಿಸಲು ರೈತರು ಯತ್ನಿಸಿದರು. ಆದರೆ ಬಂದೂಕಿನ ಮಳೆಗರೆಯುವುದು ಮುಂದುವರಿದಾಗ ಎಲ್ಲರೂ ಸುಮ್ಮನೇ ನೋಡುತ್ತಾ ಇರಬೇಕಾಯಿತು. ಪ್ರತಿಭಟನೆಯ ಕಾರಣ ಸ್ಥಳದಲ್ಲಿದ್ದ ಪೊಲೀಸರೂ ಓಡಲಾರಂಭಿಸಿದರು” ಎಂದು ಹೇಳಿದ್ದಾರೆ.

ವಾಹನ ಉರುಳಿತು. ಇಬ್ಬರು ಬಿಜೆಪಿ ಕಾರ್ಯಕರ್ತರು, ವಾಹನ ಚಾಲಕ ಸೇರಿ ಮೂವರು ಸಾವನ್ನಪಿದರು. ರೊಚ್ಚಿಗೆದ್ದ ರೈತರು ವಾಹನ ಚಾಲಕನಿಗೆ ಹೊಡೆದರು. ಭಾನುವಾರ ಆಶೀಶ್‌ ಮಿಶ್ರಾ ಅಲ್ಲಿದ್ದನ್ನು ಅನೇಕರು ಗುರುತಿಸಿದ್ದಾರೆ. ಎಲ್ಲರಿಗೂ ಆತ ಯಾರೆಂಬುದು ಗೊತ್ತಿತ್ತು. ಆತ ಮಂತ್ರಿಯ ಮಗ ಎಂಬುದು ತಿಳಿದಿತ್ತು ಎನ್ನಲಾಗಿದೆ.

ಮತ್ತೊಬ್ಬ ಪ್ರತ್ಯಕ್ಷದರ್ಶಿ ತಲ್ವೀರ್‌ ಸಿಂಗ್‌ ಹೇಳಿಕೆ ನೀಡಿದ್ದು, “ರೈತರ ಮೇಲೆ ನುಗ್ಗಿದ ಒಂದು ಕಾರನ್ನು ಆಶೀಶ್‌ ಚಾಲನೆ ಮಾಡುತ್ತಿದ್ದ. ಆಶೀಶ್‌ ಓಡುತ್ತಾ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಹಲವರು ನೋಡಿದ್ದಾರೆ” ಎಂದಿದ್ದಾರೆ.

ಆಶೀಶ್‌ ಪಿಸ್ತೂಲ್‌ ತುಂಬುತ್ತಿರುವ ವಿಡಿಯೋಕ್ಲಿಪ್‌ಅನ್ನು ಪ್ರತ್ಯಕ್ಷದರ್ಶಿಗಳು ನ್ಯೂಸ್‌ಲ್ಯಾಂಡ್ರಿಗೆ ತೋರಿಸಿದ್ದಾರೆ. “ಅಂದು ಮಧ್ಯಾಹ್ನ ಮೂರು ಗಂಟೆಯ ವೇಳೆಯಲ್ಲಿ ಘಟನೆ ನಡೆಯುವ ಮುನ್ನ, ಘಟನಾ ಸ್ಥಳದಿಂದ ಮೂರು ಕಿ.ಮೀ. ದೂರದ ರೈಸ್‌ಮಿಲ್‌ ಬಳಿಯಿಂದ ಫೇಸ್‌ಬುಕ್ ಲೈವ್ ಆಗಿದೆ” ಎನ್ನುತ್ತಾರೆ ಗುರ್‌ಸೇವಕ್‌ ಸಿಂಗ್‌.

“ಆದರೆ ಈ ವಿಡಿಯೋ ಕ್ಲಿಪ್ ಬ್ಲರ್‌ ಆಗಿದ್ದು, ಆದರೆ ವಿಡಿಯೋದಲ್ಲಿರುವುದು ಆಶೀಶ್‌ ಎಂದು ಅನೇಕ ಸ್ಥಳೀಯರು ಗುರುತಿಸಿದ್ದಾರೆ. ಈ ವ್ಯಕ್ತಿ ಆಶೀಶ್‌ ಆದರೂ ಆತ ಪಿಸ್ತೂಲು ಹಿಡಿದಿದ್ದ ಎಂಬುದನ್ನು ಗುರುತಿಸಲಾಗಿಲ್ಲ ಎಂದು ನ್ಯೂಸ್‌ಲ್ಯಾಂಡ್ರಿ ವರದಿ ಮಾಡಿದೆ. ಆದರೆ ಘಟನಾ ಸ್ಥಳದಲ್ಲಿ ಆಶೀಶ್‌ ಇರಲಿಲ್ಲ ಎಂಬ ವಾದವನ್ನು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಅಲ್ಲಗಳೆಯುತ್ತವೆ.

ಕೃಪೆ: ನ್ಯೂಸ್‌ಲ್ಯಾಂಡ್ರಿ

 ಇದನ್ನೂ ಓದಿರಿ: #भाजपा_के_आतंकवादी | ‘ಬಿಜೆಪಿ ಭಯೋತ್ಪಾದಕರು’ – ಟ್ವಿಟರ್‌‌‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...